AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಜನ್ಮದಿನಕ್ಕೆ ಘೋಷಣೆ ಆಯ್ತು ಹೊಸ ಸಿನಿಮಾ; 157ನೇ ಚಿತ್ರಕ್ಕೆ ನಿರ್ದೇಶಕ ಯಾರು?

ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಯುವಿ ಕ್ರಿಯೇಷನ್ಸ್‌’ ಮೂಲಕ #Mega157 ಸಿನಿಮಾ ಮೂಡಿಬರಲಿದೆ. ‘ಮೆಗಾ ಸ್ಟಾರ್​’ ಚಿರಂಜೀವಿ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾ ಅನೌನ್ಸ್​ ಆಗಿದೆ. ಸದ್ಯಕ್ಕೆ ಬಿಡುಗಡೆ ಆಗಿರುವ ಪೋಸ್ಟರ್​ ವಿನ್ಯಾಸ ಗಮನ ಸೆಳೆಯುತ್ತಿದೆ. ಇದು ಫ್ಯಾಂಟಸಿ ಕಥಾಹಂದರದ ಸಿನಿಮಾ ಆಗಿರಲಿದೆ.

ಚಿರಂಜೀವಿ ಜನ್ಮದಿನಕ್ಕೆ ಘೋಷಣೆ ಆಯ್ತು ಹೊಸ ಸಿನಿಮಾ; 157ನೇ ಚಿತ್ರಕ್ಕೆ ನಿರ್ದೇಶಕ ಯಾರು?
ಮೆಗಾಸ್ಟಾರ್​ ಚಿರಂಜೀವಿ
ಮದನ್​ ಕುಮಾರ್​
|

Updated on: Aug 22, 2023 | 12:28 PM

Share

ಖ್ಯಾತ ನಟ ಮೆಗಾ ಸ್ಟಾರ್​ ಚಿರಂಜೀವಿ (Megastar Chiranjeevi) ಅವರಿಗೆ ಇಂದು (ಆಗಸ್ಟ್​ 22) ಜನ್ಮದಿನದ ಸಂಭ್ರಮ. ಅಭಿಮಾನಿಗಳು ಈ ದಿನವನ್ನು ಬಹಳ ಸಡಗರದಿಂದ ಆಚರಿಸುತ್ತಿದ್ದಾರೆ. ಇದೇ ಖುಷಿಯಲ್ಲಿ ಚಿರಂಜೀವಿ ಅವರ ಹೊಸ ಸಿನಿಮಾ ಬಗ್ಗೆ ಮಾಹಿತಿ ಬಹಿರಂಗ ಆಗಿದೆ. ನೂರಾರು ಸಿನಿಮಾಗಳ ಮೂಲಕ ಜನರನ್ನು ರಂಜಿಸಿರುವ ಚಿರಂಜೀವಿ ಅವರು ಈಗ 157ನೇ ಸಿನಿಮಾಗೆ (#Mega157) ಸಜ್ಜಾಗುತ್ತಿದ್ದಾರೆ. ಅವರ ಹುಟ್ಟುಹಬ್ಬದ (Chiranjeevi Birthday) ದಿನವೇ ಈ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ವಿಶೇಷ ವಿನ್ಯಾಸದಿಂದ ಈ ಪೋಸ್ಟರ್​ ಗಮನ ಸೆಳೆಯುತ್ತಿದೆ. ದೊಡ್ಡ ಬ್ಯಾನರ್​ನಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾ ಬಗ್ಗೆ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯುವ ನಿರ್ದೇಶಕ ವಸಿಷ್ಠ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ.

1990ರಲ್ಲಿ ಚಿರಂಜೀವಿ ಮತ್ತು ಶ್ರೀದೇವಿ ಅವರು ‘ಜಗದೇಕ ವೀರುಡು ಅತಿಲೋಕ ಸುಂದರಿ’ ಸಿನಿಮಾದಲ್ಲಿ ನಟಿಸಿದ್ದರು. ಫ್ಯಾಂಟಸಿ ಕಥಾಹಂದರ ಹೊಂದಿದ್ದ ಆ ಚಿತ್ರವನ್ನು ಪ್ರೇಕ್ಷಕರು ಬಹಳ ಮೆಚ್ಚಿಕೊಂಡಿದ್ದರು. ಟಾಲಿವುಡ್​ನ ಎವರ್‌ಗ್ರೀನ್ ಸಿನಿಮಾಗಳಲ್ಲಿ ಒಂದಾಗಿ ಈ ಸಿನಿಮಾ ಉಳಿದುಕೊಂಡಿದೆ. ಈಗ ಅದೇ ರೀತಿಯ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸಲು ಚಿರಂಜೀವಿ ತಯಾರಿ ಮಾಡಿಕೊಂಡಿದ್ದಾರೆ. ಅವರ 157ನೇ ಚಿತ್ರದಲ್ಲಿ ಅಂತಹ ಕಥಾಹಂದರ ಇರಲಿದೆ ಎಂಬುದು ವಿಶೇಷ. ಆ ಕಾರಣದಿಂದ ಅಭಿಮಾನಿಗಳಲ್ಲಿ ಈ ಪ್ರಾಜೆಕ್ಟ್​ ಬಗ್ಗೆ ಕುತೂಹಲ ಮೂಡಿದೆ.

ಯುವಿ ಕ್ರಿಯೇಷನ್ಸ್​ ಟ್ವೀಟ್​:

2022ರಲ್ಲಿ ತೆಲುಗಿನ ‘ಬಿಂಬಿಸಾರ’ ಸಿನಿಮಾ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಆ ಸಿನಿಮಾಗೆ ನಿರ್ದೇಶನ ಮಾಡಿದ್ದ ವಸಿಷ್ಠ ಅವರಿಗೆ ಈಗ ಬಂಪರ್​ ಚಾನ್ಸ್​ ಸಿಕ್ಕಿದೆ. ಚಿರಂಜೀವಿ ನಟನೆಯ 157ನೇ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುವ ಅವಕಾಶವನ್ನು ಅವರು ಪಡೆದುಕೊಂಡಿದ್ದಾರೆ. ಸದ್ಯಕ್ಕೆ ಈ ಸಿನಿಮಾವನ್ನು #Mega157 ಎಂದು ಕರೆಯಲಾಗುತ್ತಿದೆ. ಶೀಘ್ರದಲ್ಲೇ ಶೀರ್ಷಿಕೆ ಏನು ಎಂಬುದು ಬಹಿರಂಗ ಆಗಲಿದೆ. ತಾಂತ್ರಿಕ ಬಳಗದಲ್ಲಿ ಯಾರೆಲ್ಲ ಇದ್ದಾರೆ? ಚಿರಂಜೀವಿ ಜೊತೆ ಬೇರೆ ಯಾವೆಲ್ಲ ಕಲಾವಿದರು ನಟಿಸಲಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ.

‘ಮೆಗಾ ಸ್ಟಾರ್​’ ಚಿರಂಜೀವಿಗೆ ದೆಹಲಿಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆ; ಬೇಕಿದೆ ಒಂದು ವಾರ ವಿಶ್ರಾಂತಿ

ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಯುವಿ ಕ್ರಿಯೇಷನ್ಸ್‌’ ಮೂಲಕ ವಿ. ವಂಶಿಕೃಷ್ಣ ರೆಡ್ಡಿ, ಪ್ರಮೋದ್ ಉಪ್ಪಲಪಟ್ಟಿ ಹಾಗೂ ವಿಕ್ರಮ್ ರೆಡ್ಡಿ ಅವರು ಈ ಸಿನಿಮಾವನ್ನು ನಿರ್ಮಿಸಲಿದ್ದಾರೆ. ಚಿರಂಜೀವಿ ಅವರ ಸಿನಿಪಯಣದಲ್ಲಿ ಇದು ಅತ್ಯಂತ ದುಬಾರಿ ಸಿನಿಮಾ ಆಗಲಿದೆ ಎಂದು ಹೇಳಲಾಗುತ್ತಿದೆ. ನಿರ್ದೇಶಕ ವಸಿಷ್ಠ ಈ ಚಿತ್ರದಲ್ಲಿ ಬೇರೆಯದೇ ಲೋಕವನ್ನು ಪರಿಚಯಿಸಲಿದ್ದಾರೆ. ಬೆಂಕಿ, ಭೂಮಿ, ಗಾಳಿ, ನೀರು, ಆಕಾಶ ಮುಂತಾದ ಅಂಶಗಳನ್ನು ಸೇರಿಸಿ, ತ್ರಿಶೂಲದೊಂದಿಗೆ ನಕ್ಷತ್ರಾಕಾರದಲ್ಲಿ ವಿನ್ಯಾಸಗೊಂಡಿರುವ #Mega157 ಸಿನಿಮಾದ ಪೋಸ್ಟರ್​ ಗಮನ ಸೆಳೆಯುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು