ಚಿರಂಜೀವಿ ಜನ್ಮದಿನಕ್ಕೆ ಘೋಷಣೆ ಆಯ್ತು ಹೊಸ ಸಿನಿಮಾ; 157ನೇ ಚಿತ್ರಕ್ಕೆ ನಿರ್ದೇಶಕ ಯಾರು?

ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಯುವಿ ಕ್ರಿಯೇಷನ್ಸ್‌’ ಮೂಲಕ #Mega157 ಸಿನಿಮಾ ಮೂಡಿಬರಲಿದೆ. ‘ಮೆಗಾ ಸ್ಟಾರ್​’ ಚಿರಂಜೀವಿ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾ ಅನೌನ್ಸ್​ ಆಗಿದೆ. ಸದ್ಯಕ್ಕೆ ಬಿಡುಗಡೆ ಆಗಿರುವ ಪೋಸ್ಟರ್​ ವಿನ್ಯಾಸ ಗಮನ ಸೆಳೆಯುತ್ತಿದೆ. ಇದು ಫ್ಯಾಂಟಸಿ ಕಥಾಹಂದರದ ಸಿನಿಮಾ ಆಗಿರಲಿದೆ.

ಚಿರಂಜೀವಿ ಜನ್ಮದಿನಕ್ಕೆ ಘೋಷಣೆ ಆಯ್ತು ಹೊಸ ಸಿನಿಮಾ; 157ನೇ ಚಿತ್ರಕ್ಕೆ ನಿರ್ದೇಶಕ ಯಾರು?
ಮೆಗಾಸ್ಟಾರ್​ ಚಿರಂಜೀವಿ
Follow us
|

Updated on: Aug 22, 2023 | 12:28 PM

ಖ್ಯಾತ ನಟ ಮೆಗಾ ಸ್ಟಾರ್​ ಚಿರಂಜೀವಿ (Megastar Chiranjeevi) ಅವರಿಗೆ ಇಂದು (ಆಗಸ್ಟ್​ 22) ಜನ್ಮದಿನದ ಸಂಭ್ರಮ. ಅಭಿಮಾನಿಗಳು ಈ ದಿನವನ್ನು ಬಹಳ ಸಡಗರದಿಂದ ಆಚರಿಸುತ್ತಿದ್ದಾರೆ. ಇದೇ ಖುಷಿಯಲ್ಲಿ ಚಿರಂಜೀವಿ ಅವರ ಹೊಸ ಸಿನಿಮಾ ಬಗ್ಗೆ ಮಾಹಿತಿ ಬಹಿರಂಗ ಆಗಿದೆ. ನೂರಾರು ಸಿನಿಮಾಗಳ ಮೂಲಕ ಜನರನ್ನು ರಂಜಿಸಿರುವ ಚಿರಂಜೀವಿ ಅವರು ಈಗ 157ನೇ ಸಿನಿಮಾಗೆ (#Mega157) ಸಜ್ಜಾಗುತ್ತಿದ್ದಾರೆ. ಅವರ ಹುಟ್ಟುಹಬ್ಬದ (Chiranjeevi Birthday) ದಿನವೇ ಈ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ವಿಶೇಷ ವಿನ್ಯಾಸದಿಂದ ಈ ಪೋಸ್ಟರ್​ ಗಮನ ಸೆಳೆಯುತ್ತಿದೆ. ದೊಡ್ಡ ಬ್ಯಾನರ್​ನಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾ ಬಗ್ಗೆ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯುವ ನಿರ್ದೇಶಕ ವಸಿಷ್ಠ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ.

1990ರಲ್ಲಿ ಚಿರಂಜೀವಿ ಮತ್ತು ಶ್ರೀದೇವಿ ಅವರು ‘ಜಗದೇಕ ವೀರುಡು ಅತಿಲೋಕ ಸುಂದರಿ’ ಸಿನಿಮಾದಲ್ಲಿ ನಟಿಸಿದ್ದರು. ಫ್ಯಾಂಟಸಿ ಕಥಾಹಂದರ ಹೊಂದಿದ್ದ ಆ ಚಿತ್ರವನ್ನು ಪ್ರೇಕ್ಷಕರು ಬಹಳ ಮೆಚ್ಚಿಕೊಂಡಿದ್ದರು. ಟಾಲಿವುಡ್​ನ ಎವರ್‌ಗ್ರೀನ್ ಸಿನಿಮಾಗಳಲ್ಲಿ ಒಂದಾಗಿ ಈ ಸಿನಿಮಾ ಉಳಿದುಕೊಂಡಿದೆ. ಈಗ ಅದೇ ರೀತಿಯ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸಲು ಚಿರಂಜೀವಿ ತಯಾರಿ ಮಾಡಿಕೊಂಡಿದ್ದಾರೆ. ಅವರ 157ನೇ ಚಿತ್ರದಲ್ಲಿ ಅಂತಹ ಕಥಾಹಂದರ ಇರಲಿದೆ ಎಂಬುದು ವಿಶೇಷ. ಆ ಕಾರಣದಿಂದ ಅಭಿಮಾನಿಗಳಲ್ಲಿ ಈ ಪ್ರಾಜೆಕ್ಟ್​ ಬಗ್ಗೆ ಕುತೂಹಲ ಮೂಡಿದೆ.

ಯುವಿ ಕ್ರಿಯೇಷನ್ಸ್​ ಟ್ವೀಟ್​:

2022ರಲ್ಲಿ ತೆಲುಗಿನ ‘ಬಿಂಬಿಸಾರ’ ಸಿನಿಮಾ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಆ ಸಿನಿಮಾಗೆ ನಿರ್ದೇಶನ ಮಾಡಿದ್ದ ವಸಿಷ್ಠ ಅವರಿಗೆ ಈಗ ಬಂಪರ್​ ಚಾನ್ಸ್​ ಸಿಕ್ಕಿದೆ. ಚಿರಂಜೀವಿ ನಟನೆಯ 157ನೇ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುವ ಅವಕಾಶವನ್ನು ಅವರು ಪಡೆದುಕೊಂಡಿದ್ದಾರೆ. ಸದ್ಯಕ್ಕೆ ಈ ಸಿನಿಮಾವನ್ನು #Mega157 ಎಂದು ಕರೆಯಲಾಗುತ್ತಿದೆ. ಶೀಘ್ರದಲ್ಲೇ ಶೀರ್ಷಿಕೆ ಏನು ಎಂಬುದು ಬಹಿರಂಗ ಆಗಲಿದೆ. ತಾಂತ್ರಿಕ ಬಳಗದಲ್ಲಿ ಯಾರೆಲ್ಲ ಇದ್ದಾರೆ? ಚಿರಂಜೀವಿ ಜೊತೆ ಬೇರೆ ಯಾವೆಲ್ಲ ಕಲಾವಿದರು ನಟಿಸಲಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ.

‘ಮೆಗಾ ಸ್ಟಾರ್​’ ಚಿರಂಜೀವಿಗೆ ದೆಹಲಿಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆ; ಬೇಕಿದೆ ಒಂದು ವಾರ ವಿಶ್ರಾಂತಿ

ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಯುವಿ ಕ್ರಿಯೇಷನ್ಸ್‌’ ಮೂಲಕ ವಿ. ವಂಶಿಕೃಷ್ಣ ರೆಡ್ಡಿ, ಪ್ರಮೋದ್ ಉಪ್ಪಲಪಟ್ಟಿ ಹಾಗೂ ವಿಕ್ರಮ್ ರೆಡ್ಡಿ ಅವರು ಈ ಸಿನಿಮಾವನ್ನು ನಿರ್ಮಿಸಲಿದ್ದಾರೆ. ಚಿರಂಜೀವಿ ಅವರ ಸಿನಿಪಯಣದಲ್ಲಿ ಇದು ಅತ್ಯಂತ ದುಬಾರಿ ಸಿನಿಮಾ ಆಗಲಿದೆ ಎಂದು ಹೇಳಲಾಗುತ್ತಿದೆ. ನಿರ್ದೇಶಕ ವಸಿಷ್ಠ ಈ ಚಿತ್ರದಲ್ಲಿ ಬೇರೆಯದೇ ಲೋಕವನ್ನು ಪರಿಚಯಿಸಲಿದ್ದಾರೆ. ಬೆಂಕಿ, ಭೂಮಿ, ಗಾಳಿ, ನೀರು, ಆಕಾಶ ಮುಂತಾದ ಅಂಶಗಳನ್ನು ಸೇರಿಸಿ, ತ್ರಿಶೂಲದೊಂದಿಗೆ ನಕ್ಷತ್ರಾಕಾರದಲ್ಲಿ ವಿನ್ಯಾಸಗೊಂಡಿರುವ #Mega157 ಸಿನಿಮಾದ ಪೋಸ್ಟರ್​ ಗಮನ ಸೆಳೆಯುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ