ಮಹೇಶ್​ ಬಾಬು ಸ್ಥಾನ ಆಕ್ರಮಿಸಿಕೊಂಡ ಚಿರಂಜೀವಿ; ‘ಆಚಾರ್ಯ’ ಹೊಸ ರಿಲೀಸ್​ ದಿನಾಂಕ ಪ್ರಕಟ

Acharya Movie Release Date: ಮೂಲಗಳ ಪ್ರಕಾರ ‘ಸರ್ಕಾರು ವಾರಿ ಪಾಟ’ ಚಿತ್ರದ ಕೆಲಸಗಳು ಇನ್ನೂ ಬಾಕಿ ಇದೆ. ಹಾಗಾಗಿ ಅದರ ರಿಲೀಸ್​ ದಿನಾಂಕ ಮುಂದೂಡಿಕೆ ಆಗುವ ಸಾಧ್ಯತೆ ಇದೆ. ಆ ಕಾರಣದಿಂದಲೇ ಏ.1ಕ್ಕೆ ‘ಆಚಾರ್ಯ’ ಆಗಮಿಸುತ್ತಿದೆ ಎನ್ನಲಾಗಿದೆ.

ಮಹೇಶ್​ ಬಾಬು ಸ್ಥಾನ ಆಕ್ರಮಿಸಿಕೊಂಡ ಚಿರಂಜೀವಿ; ‘ಆಚಾರ್ಯ’ ಹೊಸ ರಿಲೀಸ್​ ದಿನಾಂಕ ಪ್ರಕಟ
ಮಹೇಶ್ ಬಾಬು, ಚಿರಂಜೀವಿ
Follow us
| Updated By: ಮದನ್​ ಕುಮಾರ್​

Updated on: Jan 17, 2022 | 9:39 AM

ಕೊರೊನಾದ ಕಣ್ಣಾಮುಚ್ಚಾಲೆಯಿಂದಾಗಿ ಎಲ್ಲ ಉದ್ಯಮಗಳಿಗೂ ತೊಂದರೆ ಆಗಿದೆ. ನಾಳೆ ಏನಾಗಲಿದೆ ಎಂಬ ಅನಿಶ್ಚಿತತೆ ಕಾಡುತ್ತಿದೆ. ಚಿತ್ರರಂಗ ಕೂಡ ನೈಟ್​ ಕರ್ಫ್ಯೂ ಮತ್ತು ವೀಕೆಂಡ್​ ಕರ್ಫ್ಯೂ ಕಾರಣದಿಂದ ಸೊರಗಿದೆ. ಅನೇಕ ಬಿಗ್​ ಬಜೆಟ್​ ಸಿನಿಮಾಗಳು ರಿಲೀಸ್​ ದಿನಾಂಕ ಮುಂದೂಡಿಕೊಂಡಿವೆ. ಹೊಸ ರಿಲೀಸ್​ ಡೇಟ್​ಗಾಗಿ ಸ್ಟಾರ್​ ನಟರ ನಡುವೆ ಪೈಪೋಟಿ ಇದೆ. ಈ ವರ್ಷ ಆರಂಭದಲ್ಲಿ ರಿ​ಲೀಸ್​ ಆಗಬೇಕಿದ್ದ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಹಾಗೂ ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಚಿತ್ರಗಳ ರಿಲೀಸ್​ ದಿನಾಂಕ ಪೋಸ್ಟ್​ಪೋನ್​ ಆಯಿತು. ಫೆ.4ರಂದು ತೆರೆಕಾಣಬೇಕಿದ್ದ ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ನಟನೆಯ ‘ಆಚಾರ್ಯ’ ಚಿತ್ರದ ಬಿಡುಗಡೆ ದಿನಾಂಕವೂ ಮುಂದೂಡಲ್ಪಟ್ಟಿದೆ. ಈಗ ‘ಆಚಾರ್ಯ’ (Acharya Movie) ತಂಡ ಹೊಸ ದಿನಾಂಕದ ಮೇಲೆ ಕಣ್ಣಿಟ್ಟಿದೆ. ಸಿನಿಮಾದ ಹೊಸ ಪೋಸ್ಟರ್​ ರಿಲೀಸ್​ ಮಾಡಲಾಗಿದೆ. ಅದಲ್ಲಿ ಏ.1ರಂದು ರಿಲೀಸ್​ ಎಂಬ ಮಾಹಿತಿ ನೀಡಲಾಗಿದೆ. ಮಹೇಶ್​ ಬಾಬು (Mahesh Babu) ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ಕೂಡ ಅದೇ ದಿನಾಂಕದಲ್ಲಿ ರಿಲೀಸ್​ ಆಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಆದರೆ ಈಗ ಪ್ಲ್ಯಾನ್​ ಬದಲಾದಂತಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2022ರ ಸಂಕ್ರಾಂತಿ ಹಬ್ಬಕ್ಕೆ ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾದ ಬಿಡುಗಡೆ ದಿನಾಂಕವನ್ನು ಏಪ್ರಿಲ್​ 1ಕ್ಕೆ ಮುಂದೂಡಲಾಯಿತು. ಆದರೆ ಈಗ ಅದೇ ದಿನಾಂಕದಲ್ಲಿ ‘ಆಚಾರ್ಯ’ ಬಿಡುಗಡೆ ಆಗುತ್ತಿರುವುದಾಗಿ ಹೇಳಿರುವುದು ದೊಡ್ಡ ಚರ್ಚೆ ಹುಟ್ಟುಹಾಕಿದೆ. ‘ಸರ್ಕಾರು ವಾರಿ ಪಾಟ’ ಜೊತೆ ‘ಆಚಾರ್ಯ’ ಫೈಟ್​ ಮಾಡಲಿದೆಯೇ ಅಥವಾ ‘ಸರ್ಕಾರು ವಾರಿ ಪಾಟ’ ಸಿನಿಮಾದ ರಿಲೀಸ್​ ಡೇಟ್​ ಮುಂದೂಡಿಕೆ ಆಗಲಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಮೂಲಗಳ ಪ್ರಕಾರ ‘ಸರ್ಕಾರು ವಾರಿ ಪಾಟ’ ಚಿತ್ರದ ಕೆಲಸಗಳು ಇನ್ನೂ ಬಾಕಿ ಇದೆ. ಹಾಗಾಗಿ ಅದರ ರಿಲೀಸ್​ ದಿನಾಂಕ ಮುಂದೂಡಿಕೆ ಆಗುವ ಸಾಧ್ಯತೆ ಇದೆ. ಆ ಕಾರಣದಿಂದಲೇ ಏ.1ಕ್ಕೆ ‘ಆಚಾರ್ಯ’ ಆಗಮಿಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ರಿಲೀಸ್​ ಡೇಟ್​ ಬದಲಾವಣೆ ಬಗ್ಗೆ ‘ಸರ್ಕಾರು ವಾರಿ ಪಾಟ’ ಚಿತ್ರತಂಡದಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಏಪ್ರಿಲ್​ 2ರಂದು ಯುಗಾದಿ ಹಬ್ಬ ಇದೆ. ಆ ಸಮಯದಲ್ಲಿ ಸಿನಿಮಾ ಬಿಡುಗಡೆಯಾದರೆ ಒಳ್ಳೆಯ ಕಲೆಕ್ಷನ್​ ಆಗಲಿದೆ. ಹಾಗಾಗಿ ಅದು ಚಿತ್ರತಂಡಗಳ ಪಾಲಿಗೆ ಸೂಕ್ತ ಡೇಟ್​ ಆಗಿರಲಿದೆ. ಆ ಕಾರಣದಿಂದಲೇ ‘ಆಚಾರ್ಯ’ ತಂಡ ಏ.1ರ ದಿನಾಂಕದ ಮೇಲೆ ಕಣ್ಣಿಟ್ಟಿದೆ. ಈ ಚಿತ್ರದಲ್ಲಿ ರಾಮ್​ ಚರಣ್​ ಕೂಡ ನಟಿಸಿದ್ದಾರೆ. ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ:

‘ಪುಷ್ಪ’ ಚಿತ್ರವನ್ನು ಹಾಡಿ ಹೊಗಳಿದ ಮಹೇಶ್​ ಬಾಬು; ಈ ಪರಿ ಪ್ರಶಂಸೆಗೆ ಅಲ್ಲು ಅರ್ಜುನ್​ ಪ್ರತಿಕ್ರಿಯೆ ಏನು?

ಕೊವಿಡ್​ ಇದ್ದರೂ ಅಣ್ಣನ ಅಂತ್ಯಸಂಸ್ಕಾರಕ್ಕೆ ಹೋದರಾ ಮಹೇಶ್​ ಬಾಬು? ವೈರಲ್​ ಆದ ಫೋಟೋದ ಅಸಲಿಯತ್ತೇನು?  

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ