AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಆಯುಕ್ತರ ಭೇಟಿಯಾಗಿ ಧನ್ಯವಾದ ಹೇಳಿದ ಚಿರಂಜೀವಿ-ನಾಗಾರ್ಜುನ: ಕಾರಣವೇನು?

Megastar Chiranjeevi: ಮೆಗಾಸ್ಟಾರ್ ಚಿರಂಜೀವಿ ಮತ್ತು ನಟ ನಾಗಾರ್ಜುನ ಹಾಗೂ ಇನ್ನೂ ಕೆಲವರು ಸೈಬರಾದಾಬ್ ಪೊಲೀಸ್ ಆಯುಕ್ತ, ಕನ್ನಡಿಗ ಸಜ್ಜನರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಪೊಲೀಸ್ ಆಯುಕ್ತರಿಗೆ ಚಿರಂಜೀವಿ ಹಾಗೂ ನಾಗಾರ್ಜುನ ಹಾಗೂ ಚಿತ್ರರಂಗದ ಗಣ್ಯರು ಅಭಿನಂದನೆ ಸಲ್ಲಿಸಲು ಕಾರಣವೇನು? ಇಲ್ಲಿದೆ ನೋಡಿ ಮಾಹಿತಿ...

ಪೊಲೀಸ್ ಆಯುಕ್ತರ ಭೇಟಿಯಾಗಿ ಧನ್ಯವಾದ ಹೇಳಿದ ಚಿರಂಜೀವಿ-ನಾಗಾರ್ಜುನ: ಕಾರಣವೇನು?
Chiranjeevi
ಮಂಜುನಾಥ ಸಿ.
|

Updated on: Nov 18, 2025 | 12:50 PM

Share

ಮೆಗಾಸ್ಟಾರ್ ಚಿರಂಜೀವಿ (Chiranjeevi) ಚಿತ್ರರಂಗಕ್ಕೆ ಸಂಬಂಧಿಸಿದ ಯಾವುದೇ ಸಂಘ ಸಂಸ್ಥೆಗಳಲ್ಲಿ ಸ್ಥಾನಗಳನ್ನು ಹೊಂದಿಲ್ಲ. ಹಾಗಿದ್ದರೂ ಸಹ ಚಿತ್ರರಂಗದ ಪರವಾಗಿ ಒಂದಲ್ಲ ಒಂದು ಕೆಲಸಗಳಲ್ಲಿ ತೊಡಗಿಕೊಳ್ಳುತ್ತಲೇ ಇರುತ್ತಾರೆ. ಜಗನ್ ಸರ್ಕಾರದ ಅವಧಿಯಲ್ಲಿ ಜಗನ್ ತಂದ ಕೆಲವು ನಿಯಮಗಳಿಂದ ಚಿತ್ರರಂಗ ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ನಟರು, ನಿರ್ಮಾಪಕರು ಬಹಿರಂಗವಾಗಿ ಸರ್ಕಾರದ ವಿರುದ್ಧ ನಿಂದನೆ, ಆಕ್ರೋಶ ವ್ಯಕ್ತಪಡಿಸಲು ಆರಂಭಿಸಿದ್ದರು. ಆದರೆ ಚಿರಂಜೀವಿ, ತಮ್ಮ ಸ್ಟಾರ್​​ಗಿರಿಯನ್ನು ಪಕ್ಕಕ್ಕಿಟ್ಟು ಜಗನ್ ಮನೆಗೆ ಹೋಗಿ ಅವರಲ್ಲಿ ಮನವಿ ಮಾಡಿಕೊಂಡು ಚಿತ್ರರಂಗಕ್ಕೆ ಅನುಕೂಲಕರವಾಗುವಂತೆ ನಿಯಮಗಳನ್ನು ತಿದ್ದಿಸುವಲ್ಲಿ ಯಶಸ್ವಿ ಆಗಿದ್ದರು. ಈಗಲೂ ಸಹ ಅವರು ಅಂಥಹುದೇ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದರ ಭಾಗವಾಗಿಯೇ ಇತ್ತೀಚೆಗೆ ಸೈದರಾಬಾದ್ ಪೊಲೀಸರನ್ನು ಭೇಟಿ ಆಗಿದ್ದರು.

ಅಸಲಿಗೆ ಕೆಲ ತಿಂಗಳ ಹಿಂದೆಯೇ ನಟ ಚಿರಂಜೀವಿ ಅವರು ಗೆಳೆಯ ನಾಗಾರ್ಜುನ ಸೇರಿದಂತೆ ಇನ್ನೂ ಕೆಲವು ನಿರ್ಮಾಪಕರುಗಳೊಟ್ಟಿಗೆ ಸೈಬರಾಬಾದ್ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ, ಪೈರಸಿ ತಡೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದರು. ಅದಾದ ಬಳಿಕ ಚಿರಂಜೀವಿ ಮನವಿಗೆ ಪ್ರತಿಕ್ರಿಯಿಸಿದ್ದ ಪೊಲೀಸರು ಕೆಲ ಪೈರಸಿಕೋರರನ್ನು ಬಂಧಿಸಿದ್ದರು. ಆದರೂ ಸಹ ಕೆಲ ಪ್ರಮುಖ ಪೈರಸಿಕೋರರನ್ನು ಬಂಧಿಸುವುದು ಬಾಕಿ ಇತ್ತು. ಇತ್ತೀಚೆಗಷ್ಟೆ ತೆಲುಗಿನ ಕುಖ್ಯಾತ ಪೈರಸಿ ವೆಬ್​​ಸೈಟ್ ಸ್ಥಾಪಕ ರವಿ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

ತೆಲುಗು ಸಿನಿಮಾ ನಿರ್ಮಾಪಕರುಗಳನ್ನು ವರ್ಷಗಳಿಂದಲೂ ಕಾಡಿದ್ದ, ನೂರಾರು ಕೋಟಿ ಹಣ ನಷ್ಟಕ್ಕೆ ಕಾರಣವಾಗಿದ್ದ ಐಬೊಮ್ಮ ಪೈರಸಿ ವೆಬ್​​ಸೈಟ್​​ನ ಸ್ಥಾಪಕ ರವಿ ಅನ್ನು ಇತ್ತೀಚೆಗಷ್ಟೆ ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. ಇದೇ ಕಾರಣಕ್ಕೆ ಇದೀಗ ಮೆಗಾಸ್ಟಾರ್ ಚಿರಂಜೀವಿ, ನಾಗಾರ್ಜುನ ಹಾಗೂ ಇತರರು ಸೈಬರಾಬಾದ್ ಪೊಲೀಸ್ ಆಯುಕ್ತ, ಕನ್ನಡಿಗರೂ ಆಗಿರುವ ಸಜ್ಜನರ್ ಅವರನ್ನು ಭೇಟಿಯಾಗಿ ಖುದ್ದಾಗಿ ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ:ಸಂಕಷ್ಟದಲ್ಲಿ ರಿಷಬ್ ಶೆಟ್ಟಿಯ ತೆಲುಗು ಸಿನಿಮಾ, ನಿರ್ದೇಶಕನ ವಿರುದ್ಧ ದೂರು

ತನ್ನ ಲಾಭಕ್ಕಾಗಿ ಸಿನಿಮಾ ಉದ್ಯಮವನ್ನು ಕೊಲ್ಲುತ್ತಿರುವ ಅಪಾಯಕಾರಿ ವ್ಯಕ್ತಿಗಳ ಜಾಲವನ್ನು ಅಂತ್ಯಗೊಳಿಸಿದ್ದಾರೆ. ಈ ಕಾರ್ಯದಲ್ಲಿ ಪೊಲೀಸರ ಚಾಣಾಕ್ಷತನ ನೋಡಿ ಹೆಮ್ಮೆಯಾಗಿದೆ. ಎಂದು ಚಿರಂಜೀವಿ ಹೇಳಿದರು. ಇಂಥ ಕೆಲವು ದುರುಳರ ಕಾರಣದಿಂದಾಗಿ ಅನೇಕ ಜನರು ಪೈರಸಿಯಲ್ಲಿ ಬಿಡುಗಡೆಯಾದ ಚಲನಚಿತ್ರಗಳನ್ನು ನೋಡುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ ಮತ್ತು ಇಂದಿನಿಂದ ಅದು ಕೊನೆಗೊಳ್ಳಬೇಕು ಎಂದು ಅವರು ಹೇಳಿದರು.

ನಟ ನಾಗಾರ್ಜುನ ಸಹ ಮಾತನಾಡಿ, ‘ಈ ವಿಷಯದಲ್ಲಿ ಪೊಲೀಸರು ಬಲು ಶೀಘ್ರವಾಗಿ ಸ್ಪಂದಿಸಿ ದುಷ್ಟರನ್ನು ಹೆಡೆಮುರಿ ಕಟ್ಟಿರುವುದು ಅಭಿನಂದನಾರ್ಹ. ಈ ಆಪರೇಷನ್​​ನಲ್ಲಿ ತೊಡಗಿಕೊಂಡಿದ್ದ ಎಲ್ಲ ಪೊಲೀಸರಿಗೆ ತೆಲುಗು ಸಿನಿಮಾ ರಂಗದ ಕಡೆಯಿಂದ ಧನ್ಯವಾದ ಹೇಳುತ್ತೇನೆ’ ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!