AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಆಯುಕ್ತರ ಭೇಟಿಯಾಗಿ ಧನ್ಯವಾದ ಹೇಳಿದ ಚಿರಂಜೀವಿ-ನಾಗಾರ್ಜುನ: ಕಾರಣವೇನು?

Megastar Chiranjeevi: ಮೆಗಾಸ್ಟಾರ್ ಚಿರಂಜೀವಿ ಮತ್ತು ನಟ ನಾಗಾರ್ಜುನ ಹಾಗೂ ಇನ್ನೂ ಕೆಲವರು ಸೈಬರಾದಾಬ್ ಪೊಲೀಸ್ ಆಯುಕ್ತ, ಕನ್ನಡಿಗ ಸಜ್ಜನರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಪೊಲೀಸ್ ಆಯುಕ್ತರಿಗೆ ಚಿರಂಜೀವಿ ಹಾಗೂ ನಾಗಾರ್ಜುನ ಹಾಗೂ ಚಿತ್ರರಂಗದ ಗಣ್ಯರು ಅಭಿನಂದನೆ ಸಲ್ಲಿಸಲು ಕಾರಣವೇನು? ಇಲ್ಲಿದೆ ನೋಡಿ ಮಾಹಿತಿ...

ಪೊಲೀಸ್ ಆಯುಕ್ತರ ಭೇಟಿಯಾಗಿ ಧನ್ಯವಾದ ಹೇಳಿದ ಚಿರಂಜೀವಿ-ನಾಗಾರ್ಜುನ: ಕಾರಣವೇನು?
Chiranjeevi
ಮಂಜುನಾಥ ಸಿ.
|

Updated on: Nov 18, 2025 | 12:50 PM

Share

ಮೆಗಾಸ್ಟಾರ್ ಚಿರಂಜೀವಿ (Chiranjeevi) ಚಿತ್ರರಂಗಕ್ಕೆ ಸಂಬಂಧಿಸಿದ ಯಾವುದೇ ಸಂಘ ಸಂಸ್ಥೆಗಳಲ್ಲಿ ಸ್ಥಾನಗಳನ್ನು ಹೊಂದಿಲ್ಲ. ಹಾಗಿದ್ದರೂ ಸಹ ಚಿತ್ರರಂಗದ ಪರವಾಗಿ ಒಂದಲ್ಲ ಒಂದು ಕೆಲಸಗಳಲ್ಲಿ ತೊಡಗಿಕೊಳ್ಳುತ್ತಲೇ ಇರುತ್ತಾರೆ. ಜಗನ್ ಸರ್ಕಾರದ ಅವಧಿಯಲ್ಲಿ ಜಗನ್ ತಂದ ಕೆಲವು ನಿಯಮಗಳಿಂದ ಚಿತ್ರರಂಗ ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ನಟರು, ನಿರ್ಮಾಪಕರು ಬಹಿರಂಗವಾಗಿ ಸರ್ಕಾರದ ವಿರುದ್ಧ ನಿಂದನೆ, ಆಕ್ರೋಶ ವ್ಯಕ್ತಪಡಿಸಲು ಆರಂಭಿಸಿದ್ದರು. ಆದರೆ ಚಿರಂಜೀವಿ, ತಮ್ಮ ಸ್ಟಾರ್​​ಗಿರಿಯನ್ನು ಪಕ್ಕಕ್ಕಿಟ್ಟು ಜಗನ್ ಮನೆಗೆ ಹೋಗಿ ಅವರಲ್ಲಿ ಮನವಿ ಮಾಡಿಕೊಂಡು ಚಿತ್ರರಂಗಕ್ಕೆ ಅನುಕೂಲಕರವಾಗುವಂತೆ ನಿಯಮಗಳನ್ನು ತಿದ್ದಿಸುವಲ್ಲಿ ಯಶಸ್ವಿ ಆಗಿದ್ದರು. ಈಗಲೂ ಸಹ ಅವರು ಅಂಥಹುದೇ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದರ ಭಾಗವಾಗಿಯೇ ಇತ್ತೀಚೆಗೆ ಸೈದರಾಬಾದ್ ಪೊಲೀಸರನ್ನು ಭೇಟಿ ಆಗಿದ್ದರು.

ಅಸಲಿಗೆ ಕೆಲ ತಿಂಗಳ ಹಿಂದೆಯೇ ನಟ ಚಿರಂಜೀವಿ ಅವರು ಗೆಳೆಯ ನಾಗಾರ್ಜುನ ಸೇರಿದಂತೆ ಇನ್ನೂ ಕೆಲವು ನಿರ್ಮಾಪಕರುಗಳೊಟ್ಟಿಗೆ ಸೈಬರಾಬಾದ್ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ, ಪೈರಸಿ ತಡೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದರು. ಅದಾದ ಬಳಿಕ ಚಿರಂಜೀವಿ ಮನವಿಗೆ ಪ್ರತಿಕ್ರಿಯಿಸಿದ್ದ ಪೊಲೀಸರು ಕೆಲ ಪೈರಸಿಕೋರರನ್ನು ಬಂಧಿಸಿದ್ದರು. ಆದರೂ ಸಹ ಕೆಲ ಪ್ರಮುಖ ಪೈರಸಿಕೋರರನ್ನು ಬಂಧಿಸುವುದು ಬಾಕಿ ಇತ್ತು. ಇತ್ತೀಚೆಗಷ್ಟೆ ತೆಲುಗಿನ ಕುಖ್ಯಾತ ಪೈರಸಿ ವೆಬ್​​ಸೈಟ್ ಸ್ಥಾಪಕ ರವಿ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

ತೆಲುಗು ಸಿನಿಮಾ ನಿರ್ಮಾಪಕರುಗಳನ್ನು ವರ್ಷಗಳಿಂದಲೂ ಕಾಡಿದ್ದ, ನೂರಾರು ಕೋಟಿ ಹಣ ನಷ್ಟಕ್ಕೆ ಕಾರಣವಾಗಿದ್ದ ಐಬೊಮ್ಮ ಪೈರಸಿ ವೆಬ್​​ಸೈಟ್​​ನ ಸ್ಥಾಪಕ ರವಿ ಅನ್ನು ಇತ್ತೀಚೆಗಷ್ಟೆ ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. ಇದೇ ಕಾರಣಕ್ಕೆ ಇದೀಗ ಮೆಗಾಸ್ಟಾರ್ ಚಿರಂಜೀವಿ, ನಾಗಾರ್ಜುನ ಹಾಗೂ ಇತರರು ಸೈಬರಾಬಾದ್ ಪೊಲೀಸ್ ಆಯುಕ್ತ, ಕನ್ನಡಿಗರೂ ಆಗಿರುವ ಸಜ್ಜನರ್ ಅವರನ್ನು ಭೇಟಿಯಾಗಿ ಖುದ್ದಾಗಿ ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ:ಸಂಕಷ್ಟದಲ್ಲಿ ರಿಷಬ್ ಶೆಟ್ಟಿಯ ತೆಲುಗು ಸಿನಿಮಾ, ನಿರ್ದೇಶಕನ ವಿರುದ್ಧ ದೂರು

ತನ್ನ ಲಾಭಕ್ಕಾಗಿ ಸಿನಿಮಾ ಉದ್ಯಮವನ್ನು ಕೊಲ್ಲುತ್ತಿರುವ ಅಪಾಯಕಾರಿ ವ್ಯಕ್ತಿಗಳ ಜಾಲವನ್ನು ಅಂತ್ಯಗೊಳಿಸಿದ್ದಾರೆ. ಈ ಕಾರ್ಯದಲ್ಲಿ ಪೊಲೀಸರ ಚಾಣಾಕ್ಷತನ ನೋಡಿ ಹೆಮ್ಮೆಯಾಗಿದೆ. ಎಂದು ಚಿರಂಜೀವಿ ಹೇಳಿದರು. ಇಂಥ ಕೆಲವು ದುರುಳರ ಕಾರಣದಿಂದಾಗಿ ಅನೇಕ ಜನರು ಪೈರಸಿಯಲ್ಲಿ ಬಿಡುಗಡೆಯಾದ ಚಲನಚಿತ್ರಗಳನ್ನು ನೋಡುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ ಮತ್ತು ಇಂದಿನಿಂದ ಅದು ಕೊನೆಗೊಳ್ಳಬೇಕು ಎಂದು ಅವರು ಹೇಳಿದರು.

ನಟ ನಾಗಾರ್ಜುನ ಸಹ ಮಾತನಾಡಿ, ‘ಈ ವಿಷಯದಲ್ಲಿ ಪೊಲೀಸರು ಬಲು ಶೀಘ್ರವಾಗಿ ಸ್ಪಂದಿಸಿ ದುಷ್ಟರನ್ನು ಹೆಡೆಮುರಿ ಕಟ್ಟಿರುವುದು ಅಭಿನಂದನಾರ್ಹ. ಈ ಆಪರೇಷನ್​​ನಲ್ಲಿ ತೊಡಗಿಕೊಂಡಿದ್ದ ಎಲ್ಲ ಪೊಲೀಸರಿಗೆ ತೆಲುಗು ಸಿನಿಮಾ ರಂಗದ ಕಡೆಯಿಂದ ಧನ್ಯವಾದ ಹೇಳುತ್ತೇನೆ’ ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!