ಚಿರಂಜೀವಿಗೆ ಹುಟ್ಟುಹಬ್ಬದ ಸಂಭ್ರಮ; ನಟನ ಒಟ್ಟೂ ಆಸ್ತಿ ಎಷ್ಟು?

Megastar Chiranjeevi: ಮೆಗಾಸ್ಟಾರ್ ಚಿರಂಜೀವಿ ಅವರ ಹುಟ್ಟುಹಬ್ಬ ಇಂದು (ಆಗಸ್ಟ್ 22). ದಶಕಗಳಿಂದಲೂ ಚಿತ್ರರಂಗದಲ್ಲಿ ಸ್ಟಾರ್ ನಟರಾಗಿ ಗುರುತಿಸಿಕೊಂಡಿರುವ ಚಿರಂಜೀವಿ ಸಿನಿಮಾಗಳಿಂದ ಸಾಕಷ್ಟು ಆಸ್ತಿಯನ್ನು ಸಹ ಮಾಡಿದ್ದಾರೆ. ಇಲ್ಲಿದೆ ಅವರ ಆಸ್ತಿ ಮೌಲ್ಯದ ಮಾಹಿತಿ.

ಚಿರಂಜೀವಿಗೆ ಹುಟ್ಟುಹಬ್ಬದ ಸಂಭ್ರಮ; ನಟನ ಒಟ್ಟೂ ಆಸ್ತಿ ಎಷ್ಟು?
Follow us
| Updated By: ಮಂಜುನಾಥ ಸಿ.

Updated on: Aug 22, 2024 | 12:27 PM

ಟಾಲಿವುಡ್ ನಟ ಚಿರಂಜೀವಿ ಅವರಿಗೆ ಇಂದು (ಆಗಸ್ಟ್ 22 ) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ. ಅವರಿಗೆ ಇದು 69ನೇ ವರ್ಷದ ಜನ್ಮದಿನ. ಈ ವಯಸ್ಸಿನಲ್ಲೂ ಅವರು ಫಿಟ್ ಆಗಿದ್ದಾರೆ. ಹಲವು ಚಿತ್ರಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಫಿಟ್ನೆಸ್​ಗಾಗಿ ಜಿಮ್ ಮಾಡುತ್ತಾರೆ. ಅವರು ದಕ್ಷಿಣ ಭಾರತದ ಶ್ರೀಮಂತ ನಟರಲ್ಲಿ ಅವರೂ ಒಬ್ಬರ. ಅವರ ಆಸ್ತಿ ಬಗ್ಗೆ, ಅವರು ಹೊಂದಿರುವ ದುಬಾರಿ ವಸ್ತುಗಳ ಬಗ್ಗೆ ಇಲ್ಲಿದೆ ವಿವರ.

ಚಿರಂಜೀವಿ ಅವರು 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಪದ್ಮಭೂಷಣ ಮತ್ತು ಪದ್ಮವಿಭೂಷಣ ರೀತಿಯ ಅವಾರ್ಡ್​ಗಳನ್ನು ಪಡೆದಿದ್ದಾರೆ. ಅವರು ನಟ, ನಿರ್ಮಾಪಕ, ರಾಜಕಾರಣಿಯೂ ಹೌದು. ಅವರ ಆಸ್ತಿ ಮೌಲ್ಯ 1650 ಕೋಟಿ ರೂಪಾಯಿ ಎನ್ನಲಾಗಿದೆ. ಅವರು ಅನೇಕ ಕಡೆಗಳಲ್ಲಿ ದುಬಾರಿ ಮನೆಗಳನ್ನು ಹೊಂದಿದ್ದಾರೆ.

ಹೈದರಾಬಾದ್​ನ ಜುಬ್ಲಿ ಹಿಲ್ಸ್​ನಲ್ಲಿ ಅವರು 25 ಸಾವಿರ ಸ್ಕ್ವೇರ್ ಫೀಟ್​ನ ಮನೆ ಹೊಂದಿದ್ದಾರೆ. ಬೆಂಗಳೂರಿನ ಏರ್​ಪೋರ್ಟ್​ ಬಳಿ ಫಾರ್ಮ್​ಹೌಸ್ ಹೊಂದಿದ್ದಾರೆ. ಇದನ್ನು ಅವರು ಸಾಕಷ್ಟು ಇಷ್ಟಪಡುತ್ತಾರೆ. ಚೆನ್ನೈನಲ್ಲಿಯೂ ಚಿರಂಜೀವಿ ಮನೆ ಹೊಂದಿದ್ದಾರೆ. 90ರ ದಶಕದಲ್ಲಿ ಫಿಲ್ಮ್​ನಗರದಲ್ಲಿ ಭೂಮಿ ಖರೀದಿ ಮಾಡಿದ್ದರು. ಇದನ್ನು 70 ಕೋಟಿ ರೂಪಾಯಿಗೆ ಅವರು ಮಾರಿದ್ದಾರೆ.

ಚಿರಂಜೀವಿ ಅವರ ಬಳಿ ಖಾಸಗಿ ಜೆಟ್ ಇದೆ. ಭಾರತದಲ್ಲಿ ಸುತ್ತಾಡಲು ಅವರು ಇದನ್ನು ಬಳಸುತ್ತಾರೆ. ರೋಲ್ಸ್ ರಾಯ್ಸ್ ಫ್ಯಾಂಟಮ್ ಕಾರು ಇದೆ. ಇದರ ಬೆಲೆ 9-10 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ. ರೇಂಜ್​ ರೋವರ್, ಟೊಯೋಟಾ ಲ್ಯಾಂಡ್ ಕ್ರೂಜರ್ ಕಾರುಗಳ ಒಡೆಯನೂ ಹೌದು. ಕೇರಳ ಬ್ಲಾಸ್ಟರ್​ ಎಫ್​ಸಿಯ ಸಹ ಮಾಲೀಕರಾಗಿದ್ದಾರೆ. ನಾಗಾರ್ಜುನ ಹಾಗೂ ಸಚಿನ್ ತೆಂಡೂಲ್ಕರ್ ಕೂಡ ಇದರ ಮಾಲೀಕರು. ಅವರಿಗೆ ಕ್ರೀಡೆ ಬಗ್ಗೆಯೂ ಆಸಕ್ತಿ ಇದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ.

ಇದನ್ನೂ ಓದಿ:1 ಕೋಟಿ ರೂಪಾಯಿ ದೇಣಿಗೆ ನೀಡಿ ಭೂಕುಸಿತದ ಸಂತ್ರಸ್ತರಿಗೆ ನೆರವಾದ ಚಿರಂಜೀವಿ, ರಾಮ್​ ಚರಣ್​

ಚಿರಂಜೀವಿ ನಿರ್ಮಾಣ ಸಂಸ್ಥೆ ಹೊಂದಿದ್ದು, ಇದಕ್ಕೆ ಅಂಜನಾ ಪ್ರೊಡಕ್ಷನ್ಸ್ ಎಂದು ಹೆಸರು ಇಟ್ಟಿದ್ದಾರೆ. ಇದನ್ನು ಸ್ಥಾಪಿಸಿದ್ದು 1988ರಲ್ಲಿ. ಸಹೋದರ ನಾಗೇಂದ್ರ ಬಾಬು ಜೊತೆ ಸೇರಿ ಅವರು ಇದನ್ನು ಆರಂಭಿಸಿದರು. ಚಿರಂಜೀವಿ ತಾಯಿ ಅಂಜನಾ ದೇವಿ ಹೆಸರಲ್ಲಿ ಇದನ್ನು ಮಾಡಿದರು. ತೆಲುಗು ಚಿತ್ರರಂಗದ ಪ್ರಮುಖ ಬ್ಯಾನರ್​ಗಳಲ್ಲಿ ಇದೂ ಒಂದು.

ಚಿರಂಜೀವಿ ಅವರು ಸಿನಿಮಾ ಕೆಲಸಗಳ ಜೊತೆಗೆ ಸಾಕಷ್ಟು ಸಾಮಾಜಿಕ ಕೆಲಸ ಮಾಡುತ್ತಾರೆ. ಅವರು ಹಲವು ಒಳ್ಳೆಯ ಕೆಲಸಗಳನ್ನು ಈವರೆಗೆ ಮಾಡಿದ್ದಾರೆ. ಅವರ ಹೆಸರಲ್ಲಿ ಬ್ಲಡ್ ಬ್ಯಾಂಕ್ ಕೂಡ ಇದೆ. ಹಲವು ಕಡೆಗಳಲ್ಲಿ ಚಿರಂಜೀವಿ ಹೂಡಿಕೆ ಮಾಡಿದ್ದಾರೆ. ಚಿರಂಜೀವಿ ಅವರು ಜನ್ಮದಿನಕ್ಕೂ ಮುನ್ನ ಅವರು ತಿರುಮಲಕ್ಕೆ ಭೇಟಿ ನೀಡಿದ್ದರು. ಅವರು ದೇವರ ದರ್ಶನ ಪಡೆದು ಬಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ