AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi: ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಾಯಿಸಿಕೊಂಡ ‘ಮೆಗಾ ಸ್ಟಾರ್​’ ಚಿರಂಜೀವಿ; ಇದೆಲ್ಲಾ ವರ್ಕ್​ ಆಗತ್ತಾ?

Megastar Chiranjeevi | Numerology: ಈ ವರ್ಷ ‘ಆಚಾರ್ಯ’ ಸಿನಿಮಾ ಸೋಲುಂಡಿತು. ಹಾಗಾಗಿ ಚಿರಂಜೀವಿ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ಆ ಕಾರಣದಿಂದ ಅವರು ಸಂಖ್ಯಾಶಾಸ್ತ್ರದ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

Chiranjeevi: ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಾಯಿಸಿಕೊಂಡ ‘ಮೆಗಾ ಸ್ಟಾರ್​’ ಚಿರಂಜೀವಿ; ಇದೆಲ್ಲಾ ವರ್ಕ್​ ಆಗತ್ತಾ?
ಚಿರಂಜೀವಿ
Follow us
TV9 Web
| Updated By: ಮದನ್​ ಕುಮಾರ್​

Updated on: Jul 06, 2022 | 9:38 AM

ಚಿತ್ರರಂಗದವರು ಗೆಲುವಿಗಾಗಿ ಎಲ್ಲಿಲ್ಲದ ಕಸರತ್ತು ನಡೆಸುತ್ತಾರೆ. ಹಗಲಿರುಳು ಕಷ್ಟಪಟ್ಟು ಕೆಲಸ ಮಾಡಿದ ನಂತರ ಒಂದಿಷ್ಟು ಅದೃಷ್ಟವೂ ಕೈ ಹಿಡಿಯಬೇಕಾಗುತ್ತದೆ. ಅದಕ್ಕಾಗಿ ಅನೇಕರು ಹಲವು ಬಗೆಯ ಸೂತ್ರಗಳ ಮೊರೆ ಹೋಗುತ್ತಾರೆ. ಈಗ ನಟ ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ಅವರು ಸಂಖ್ಯಾಶಾಸ್ತ್ರ ಫಾಲೋ ಮಾಡಲು ಆರಂಭಿಸಿದ್ದಾರೆ ಎಂಬ ಗುಸುಗುಸು ಟಾಲಿವುಡ್​ (Tollywood) ಅಂಗಳದಲ್ಲಿ ಕೇಳಿಬಂದಿದೆ. ಹೌದು, ಅದಕ್ಕೆ ಸಣ್ಣದೊಂದು ಸಾಕ್ಷಿ ಕೂಡ ಸಿಕ್ಕಿದೆ. ಚಿರಂಜೀವಿ ನಟನೆಯ ‘ಗಾಡ್​​ ಫಾದರ್​’ (God Father) ಸಿನಿಮಾ ಅದ್ದೂರಿಯಾಗಿ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ಅವರು ತಮ್ಮ ಹೆಸರಿನಲ್ಲಿ ಕೊಂಚ ಮಾರ್ಪಾಡು ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಚರ್ಚೆ ಆಗುತ್ತಿದೆ.

ಚಿರಂಜೀವಿ ನಟಿಸುತ್ತಿರುವ ‘ಗಾಡ್​ ಫಾದರ್​’ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದು ಮಲಯಾಳಂನ ‘ಲೂಸಿಫರ್​’ ಚಿತ್ರದ ತೆಲುಗು ರಿಮೇಕ್​. ಈ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ. ಈಗ ‘ಗಾಡ್​ ಫಾದರ್​’ ತಂಡದಿಂದ ಫಸ್ಟ್​ ಲುಕ್​ ಟೀಸರ್​ ಬಿಡುಗಡೆ ಮಾಡಲಾಗಿದೆ. ಈ ಟೀಸರ್​ನಲ್ಲಿ ಚಿರಂಜೀವಿಯ ಹೆಸರು ಎಲ್ಲರ ಕಣ್ಣು ಕುಕ್ಕಿದೆ.

ಇಷ್ಟು ದಿನಗಳ ಕಾಲ ಚಿರಂಜೀವಿ ಅವರ ಹೆಸರನ್ನು ಇಂಗ್ಲಿಷ್​ನಲ್ಲಿ ‘Chiranjeevi’ ಎಂದು ಬರೆಯಲಾಗುತ್ತಿತ್ತು. ಆದರೆ ಈಗ ಅದಕ್ಕೆ ಒಂದು ‘e’ ಹೆಚ್ಚುವರಿಯಾಗಿ ಸೇರಿಕೊಂಡಿದೆ! ಹೌದು, ‘ಗಾಡ್​ ಫಾದರ್​’ ಟೀಸರ್​ನಲ್ಲಿ ‘Chiranjeeevi’ ಎಂದು ಬರೆದಿರುವುದು ಗಮನ ಸೆಳೆದಿದೆ. ಸಂಖ್ಯಾಶಾಸ್ತ್ರವನ್ನು ಗಂಭೀರವಾಗಿ ಪರಿಗಣಿಸಿರುವುದಕ್ಕಾಗಿಯೇ ಅವರು ಈ ರೀತಿ ಬದಲಾವಣೆ ಮಾಡಿಕೊಂಡಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಚಿತ್ರತಂಡದ ಕಡೆಯಿಂದಾಗಲಿ, ಸ್ವತಃ ಚಿರಂಜೀವಿ ಅವರ ಕಡೆಯಿಂದಾಗಲಿ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ಇದನ್ನೂ ಓದಿ
Image
36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್
Image
‘ಆಚಾರ್ಯ’ ಸಿನಿಮಾ ವಿತರಕರ ನಷ್ಟ ಭರಿಸಲು ಸಂಭಾವನೆಯನ್ನೇ ಹಿಂದಿರುಗಿಸಿದ ನಟ ಚಿರಂಜೀವಿ
Image
ಸಾಲದ ಸುಳಿಯಲ್ಲಿ ‘ಆಚಾರ್ಯ’ ವಿತರಕರು; ನಷ್ಟ ಭರಿಸಲು ಚಿರಂಜೀವಿಗೆ ಪತ್ರ ಬರೆದ ಕರ್ನಾಟಕದ ಡಿಸ್ಟ್ರಿಬ್ಯೂಟರ್
Image
ಚಿರಂಜೀವಿ, ರಾಮ್​ ಚರಣ್​ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿದ ಫ್ಯಾನ್ಸ್​; ಪವನ್​ ಕಲ್ಯಾಣ್​ಗೂ ಜೈಕಾರ

ಚಿರಂಜೀವಿ ನಟಿಸಿದ ‘ಆಚಾರ್ಯ’ ಸಿನಿಮಾ ಈ ವರ್ಷ ತೆರೆಕಂಡು ಹೀನಾಯವಾಗಿ ಸೋಲುಂಡಿತು. ಹಾಗಾಗಿ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ಆ ಕಾರಣದಿಂದ ಅವರು ಸಂಖ್ಯಾಶಾಸ್ತ್ರದ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೂ ಕೆಲವರ ವಾದವೇ ಬೇರೆ. ಇದು ಚಿತ್ರತಂಡದವರ ಪ್ರಮಾದವಾಗಿದ್ದು, ಚಿರಂಜೀವಿ ಹೆಸರಿನ ಸ್ಪೆಲಿಂಗ್​ ತಪ್ಪಾಗಿ ಬರೆಯಲಾಗಿದೆ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಅಭಿಮಾನಿಗಳ ವಲಯದಲ್ಲಿ ಈ ಕುರಿತು ಚರ್ಚೆ ನಡೆಯುತ್ತಿದೆ. ‘ಆಚಾರ್ಯ’ ಸಿನಿಮಾ ಸೋಲಿನ ಬಳಿಕ ಮುಂಬರುವ ಚಿತ್ರಗಳ ಸ್ಕ್ರಿಪ್ಟ್​ನಲ್ಲಿ ಸಾಕಷ್ಟು ಬದಲಾವಣೆ ಮಾಡುವಂತೆ ನಿರ್ದೇಶಕರಿಗೆ ಚಿರಂಜೀವಿ ಸೂಚಿಸಿದ್ದಾರೆ ಎಂಬ ಸುದ್ದಿಯೂ ಕೇಳಿಬಂದಿದೆ.

ಇದನ್ನೂ ಓದಿ: Numerology: ಈ ದಿನಾಂಕ ನಿಮ್ಮ ಬದುಕಿನ ಮೇಲೆ ಹೇಗೆ ಪ್ರಭಾವ ಬೀರುತ್ತದೆ? ಸಂಖ್ಯಾಶಾಸ್ತ್ರ ಹೇಳುವುದೇನು?

Numerology: ಸಂಖ್ಯಾಶಾಸ್ತ್ರದ ಪ್ರಕಾರ 11, 22 ಹಾಗೂ 33 ಮಾಸ್ಟರ್ ನಂಬರ್; ಏನಿದರ ವಿಶೇಷ ಎಂಬುದು ನಿಮಗೆ ಗೊತ್ತಾ?

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್