AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?

ಮೂಲ ಚಿತ್ರದ ಸೊಗಡನ್ನು ಬದಿಗಿರಿಸಿ, ಟಾಲಿವುಡ್​ ಶೈಲಿಯಲ್ಲಿ ಆ್ಯಕ್ಷನ್​ ದೃಶಗಳನ್ನು ಚಿತ್ರೀಕರಿಸಲು ಜಯಂ​ ರಾಜ ಮುಂದಾಗಿದ್ದಾರೆ. ಇದಕ್ಕೆ ಚಿರಂಜೀವಿ ಸಮ್ಮತಿ ಸೂಚಿಸಿಲ್ಲ.

ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?
ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ
TV9 Web
| Edited By: |

Updated on: Aug 21, 2021 | 9:16 AM

Share

ಟಾಲಿವುಡ್​ನ ದಿಗ್ಗಜ ಕಲಾವಿದ ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ಅವರು ಸಿನಿಮಾಗಳ ಆಯ್ಕೆಯಲ್ಲಿ ಸಿಕ್ಕಾಪಟ್ಟೆ ಚ್ಯೂಸಿ ಆಗಿದ್ದಾರೆ. ದೊಡ್ಡ ಪ್ರಾಜೆಕ್ಟ್​ಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿರುವ ಅವರು ಆ ಸಿನಿಮಾಗಳ ಮೇಕಿಂಗ್​ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಚಿರಂಜೀವಿ ನಟಿಸುತ್ತಿರುವ ಚಿತ್ರಗಳ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಯ ಮಟ್ಟವನ್ನು ತಲುಪಲು ‘ಮೆಗಾ ಸ್ಟಾರ್​’ ಎಲ್ಲ ಆಯಾಮದಿಂದಲೂ ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಅವರಿಗೆ ‘ಲೂಸಿಫರ್’ (Lucifer) ತೆಲುಗು ರಿಮೇಕ್​ನ ಕೆಲಸಗಳಿಂದ ಅಷ್ಟೇನೂ ಖುಷಿ ಆದಂತಿಲ್ಲ. ಹಾಗಾಗಿ ಅವರು ನಿರ್ದೇಶಕ ಜಯಂ ರಾಜ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

2019ರಲ್ಲಿ ಸೂಪರ್​ ಹಿಟ್​ ಆದ ಮಲಯಾಳಂ ಸಿನಿಮಾ ‘ಲೂಸಿಫರ್’. ಮೋಹನ್​​ಲಾಲ್​ ಮುಖ್ಯಭೂಮಿಕೆ ನಿಭಾಯಿಸಿದ್ದ ಆ ಚಿತ್ರಕ್ಕೆ ಸ್ಟಾರ್​ ನಟ ಪೃಥ್ವಿರಾಜ್​ ಸುಕುಮಾರನ್​​ ಅವರು ನಿರ್ದೇಶನ ಮಾಡಿದ್ದರು. ಅದೇ ಸಿನಿಮಾ ತೆಲುಗಿಗೆ ರಿಮೇಕ್​ ಆಗುತ್ತಿದ್ದು, ಚಿರಂಜೀವಿ ಹೀರೋ ಆಗಿ ನಟಿಸುತ್ತಿದ್ದಾರೆ. ನಿರ್ದೇಶನ ಮಾಡುವ ಜವಾಬ್ದಾರಿಯನ್ನು ಜಯಂ​ ರಾಜ ನಿಭಾಯಿಸುತ್ತಿದ್ದಾರೆ.

ಈ ಸಿನಿಮಾದ ಆ್ಯಕ್ಷನ್​ ದೃಶ್ಯಗಳ ಬಗ್ಗೆ ಚಿರಂಜೀವಿ ತಕರಾರು ತೆಗೆದಿದ್ದಾರೆ ಎನ್ನಲಾಗಿದೆ. ಮೂಲ ಸಿನಿಮಾದಲ್ಲಿ ನಿರ್ದೇಶಕ ಫೃಥ್ವಿರಾಜ್​ ಸುಕುಮಾರನ್​ ಅವರು ಸಾಹಸ ಸನ್ನಿವೇಶಗಳನ್ನು ತಮ್ಮದೇ ಶೈಲಿಯಲ್ಲಿ ಕಟ್ಟಿಕೊಟ್ಟಿದ್ದರು. ಅದು ಚಿರುಗೆ ಸಖತ್​ ಇಂಪ್ರೆಸ್​ ಆಗಿದೆ. ಅದೇ ಮಾದರಿಯಲ್ಲೇ ರಿಮೇಕ್​ನಲ್ಲೂ ಫೈಟಿಂಗ್​ ಸೀನ್ಸ್​ ಇರಬೇಕು ಎಂದು ಅವರು ಬಯಸುತ್ತಿದ್ದಾರೆ. ಆದರೆ ನಿರ್ದೇಶಕ ಜಯಂ​ ರಾಜ ಬೇರೇನನ್ನೋ ಮಾಡಿದ್ದಾರೆ. ಮೂಲ ಚಿತ್ರದ ಸೊಗಡನ್ನು ಬದಿಗಿರಿಸಿ, ಟಾಲಿವುಡ್​ ಶೈಲಿಯಲ್ಲಿ ಆ್ಯಕ್ಷನ್​ ದೃಶಗಳನ್ನು ಜಯಂ​ ರಾಜ ಚಿತ್ರೀಕರಿಸಿದ್ದಾರೆ. ಇದಕ್ಕೆ ಚಿರಂಜೀವಿ ಸಮ್ಮತಿ ಸೂಚಿಸಿಲ್ಲ. ಹಾಗಾಗಿ ಸಾಹಸ ಸನ್ನಿವೇಶಗಳನ್ನು ಮತ್ತೆ ಹೊಸದಾಗಿ ಚಿತ್ರೀಕರಿಸುವ ಸಾಧ್ಯತೆ ದಟ್ಟವಾಗಿದೆ. ಇದರಿಂದ ಸಿನಿಮಾ ಕೆಲಸಗಳು ಇನ್ನಷ್ಟು ತಡವಾಗುವ ನಿರೀಕ್ಷೆ ಇದೆ.

ಇನ್ನು, ಆ.22ರಂದು ಚಿರಂಜೀವಿ ಹುಟ್ಟುಹಬ್ಬ. ಈ ಪ್ರಯುಕ್ತ ಬಹುನಿರೀಕ್ಷಿತ ‘ಆಚಾರ್ಯ’ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಬಹುದು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಶೂಟಿಂಗ್ ಪೂರ್ಣಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಈಗ ಕೊನೆಯ ಹಂತದ ಶೂಟಿಂಗ್​ ನಡೆಯುತ್ತಿದೆ.

ಇದನ್ನೂ ಓದಿ:

ಸರ್ಜರಿ ಬಳಿಕ​ ಚಿರಂಜೀವಿ ಜೊತೆ ಪ್ರಕಾಶ್​ ರೈ ಫೋಟೋ ವೈರಲ್​; ಇನ್ನಷ್ಟು ಹೆಚ್ಚಿತು ಅನುಮಾನ

ಚಿರಂಜೀವಿ ಅಭಿಮಾನಿಗಳು ಆ.22ರ ಮೇಲೆ ಕಣ್ಣು ಇಟ್ಟಿರೋದು ಯಾಕೆ? ನಿರೀಕ್ಷೆ ಹೆಚ್ಚಿಸಿದ ‘ಆಚಾರ್ಯ’

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!