AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?

ಮೂಲ ಚಿತ್ರದ ಸೊಗಡನ್ನು ಬದಿಗಿರಿಸಿ, ಟಾಲಿವುಡ್​ ಶೈಲಿಯಲ್ಲಿ ಆ್ಯಕ್ಷನ್​ ದೃಶಗಳನ್ನು ಚಿತ್ರೀಕರಿಸಲು ಜಯಂ​ ರಾಜ ಮುಂದಾಗಿದ್ದಾರೆ. ಇದಕ್ಕೆ ಚಿರಂಜೀವಿ ಸಮ್ಮತಿ ಸೂಚಿಸಿಲ್ಲ.

ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?
ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ
TV9 Web
| Updated By: ಮದನ್​ ಕುಮಾರ್​|

Updated on: Aug 21, 2021 | 9:16 AM

Share

ಟಾಲಿವುಡ್​ನ ದಿಗ್ಗಜ ಕಲಾವಿದ ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ಅವರು ಸಿನಿಮಾಗಳ ಆಯ್ಕೆಯಲ್ಲಿ ಸಿಕ್ಕಾಪಟ್ಟೆ ಚ್ಯೂಸಿ ಆಗಿದ್ದಾರೆ. ದೊಡ್ಡ ಪ್ರಾಜೆಕ್ಟ್​ಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿರುವ ಅವರು ಆ ಸಿನಿಮಾಗಳ ಮೇಕಿಂಗ್​ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಚಿರಂಜೀವಿ ನಟಿಸುತ್ತಿರುವ ಚಿತ್ರಗಳ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಯ ಮಟ್ಟವನ್ನು ತಲುಪಲು ‘ಮೆಗಾ ಸ್ಟಾರ್​’ ಎಲ್ಲ ಆಯಾಮದಿಂದಲೂ ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಅವರಿಗೆ ‘ಲೂಸಿಫರ್’ (Lucifer) ತೆಲುಗು ರಿಮೇಕ್​ನ ಕೆಲಸಗಳಿಂದ ಅಷ್ಟೇನೂ ಖುಷಿ ಆದಂತಿಲ್ಲ. ಹಾಗಾಗಿ ಅವರು ನಿರ್ದೇಶಕ ಜಯಂ ರಾಜ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

2019ರಲ್ಲಿ ಸೂಪರ್​ ಹಿಟ್​ ಆದ ಮಲಯಾಳಂ ಸಿನಿಮಾ ‘ಲೂಸಿಫರ್’. ಮೋಹನ್​​ಲಾಲ್​ ಮುಖ್ಯಭೂಮಿಕೆ ನಿಭಾಯಿಸಿದ್ದ ಆ ಚಿತ್ರಕ್ಕೆ ಸ್ಟಾರ್​ ನಟ ಪೃಥ್ವಿರಾಜ್​ ಸುಕುಮಾರನ್​​ ಅವರು ನಿರ್ದೇಶನ ಮಾಡಿದ್ದರು. ಅದೇ ಸಿನಿಮಾ ತೆಲುಗಿಗೆ ರಿಮೇಕ್​ ಆಗುತ್ತಿದ್ದು, ಚಿರಂಜೀವಿ ಹೀರೋ ಆಗಿ ನಟಿಸುತ್ತಿದ್ದಾರೆ. ನಿರ್ದೇಶನ ಮಾಡುವ ಜವಾಬ್ದಾರಿಯನ್ನು ಜಯಂ​ ರಾಜ ನಿಭಾಯಿಸುತ್ತಿದ್ದಾರೆ.

ಈ ಸಿನಿಮಾದ ಆ್ಯಕ್ಷನ್​ ದೃಶ್ಯಗಳ ಬಗ್ಗೆ ಚಿರಂಜೀವಿ ತಕರಾರು ತೆಗೆದಿದ್ದಾರೆ ಎನ್ನಲಾಗಿದೆ. ಮೂಲ ಸಿನಿಮಾದಲ್ಲಿ ನಿರ್ದೇಶಕ ಫೃಥ್ವಿರಾಜ್​ ಸುಕುಮಾರನ್​ ಅವರು ಸಾಹಸ ಸನ್ನಿವೇಶಗಳನ್ನು ತಮ್ಮದೇ ಶೈಲಿಯಲ್ಲಿ ಕಟ್ಟಿಕೊಟ್ಟಿದ್ದರು. ಅದು ಚಿರುಗೆ ಸಖತ್​ ಇಂಪ್ರೆಸ್​ ಆಗಿದೆ. ಅದೇ ಮಾದರಿಯಲ್ಲೇ ರಿಮೇಕ್​ನಲ್ಲೂ ಫೈಟಿಂಗ್​ ಸೀನ್ಸ್​ ಇರಬೇಕು ಎಂದು ಅವರು ಬಯಸುತ್ತಿದ್ದಾರೆ. ಆದರೆ ನಿರ್ದೇಶಕ ಜಯಂ​ ರಾಜ ಬೇರೇನನ್ನೋ ಮಾಡಿದ್ದಾರೆ. ಮೂಲ ಚಿತ್ರದ ಸೊಗಡನ್ನು ಬದಿಗಿರಿಸಿ, ಟಾಲಿವುಡ್​ ಶೈಲಿಯಲ್ಲಿ ಆ್ಯಕ್ಷನ್​ ದೃಶಗಳನ್ನು ಜಯಂ​ ರಾಜ ಚಿತ್ರೀಕರಿಸಿದ್ದಾರೆ. ಇದಕ್ಕೆ ಚಿರಂಜೀವಿ ಸಮ್ಮತಿ ಸೂಚಿಸಿಲ್ಲ. ಹಾಗಾಗಿ ಸಾಹಸ ಸನ್ನಿವೇಶಗಳನ್ನು ಮತ್ತೆ ಹೊಸದಾಗಿ ಚಿತ್ರೀಕರಿಸುವ ಸಾಧ್ಯತೆ ದಟ್ಟವಾಗಿದೆ. ಇದರಿಂದ ಸಿನಿಮಾ ಕೆಲಸಗಳು ಇನ್ನಷ್ಟು ತಡವಾಗುವ ನಿರೀಕ್ಷೆ ಇದೆ.

ಇನ್ನು, ಆ.22ರಂದು ಚಿರಂಜೀವಿ ಹುಟ್ಟುಹಬ್ಬ. ಈ ಪ್ರಯುಕ್ತ ಬಹುನಿರೀಕ್ಷಿತ ‘ಆಚಾರ್ಯ’ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಬಹುದು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಶೂಟಿಂಗ್ ಪೂರ್ಣಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಈಗ ಕೊನೆಯ ಹಂತದ ಶೂಟಿಂಗ್​ ನಡೆಯುತ್ತಿದೆ.

ಇದನ್ನೂ ಓದಿ:

ಸರ್ಜರಿ ಬಳಿಕ​ ಚಿರಂಜೀವಿ ಜೊತೆ ಪ್ರಕಾಶ್​ ರೈ ಫೋಟೋ ವೈರಲ್​; ಇನ್ನಷ್ಟು ಹೆಚ್ಚಿತು ಅನುಮಾನ

ಚಿರಂಜೀವಿ ಅಭಿಮಾನಿಗಳು ಆ.22ರ ಮೇಲೆ ಕಣ್ಣು ಇಟ್ಟಿರೋದು ಯಾಕೆ? ನಿರೀಕ್ಷೆ ಹೆಚ್ಚಿಸಿದ ‘ಆಚಾರ್ಯ’

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ