ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?

ಮೂಲ ಚಿತ್ರದ ಸೊಗಡನ್ನು ಬದಿಗಿರಿಸಿ, ಟಾಲಿವುಡ್​ ಶೈಲಿಯಲ್ಲಿ ಆ್ಯಕ್ಷನ್​ ದೃಶಗಳನ್ನು ಚಿತ್ರೀಕರಿಸಲು ಜಯಂ​ ರಾಜ ಮುಂದಾಗಿದ್ದಾರೆ. ಇದಕ್ಕೆ ಚಿರಂಜೀವಿ ಸಮ್ಮತಿ ಸೂಚಿಸಿಲ್ಲ.

ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?
ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ
Follow us
| Updated By: ಮದನ್​ ಕುಮಾರ್​

Updated on: Aug 21, 2021 | 9:16 AM

ಟಾಲಿವುಡ್​ನ ದಿಗ್ಗಜ ಕಲಾವಿದ ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ಅವರು ಸಿನಿಮಾಗಳ ಆಯ್ಕೆಯಲ್ಲಿ ಸಿಕ್ಕಾಪಟ್ಟೆ ಚ್ಯೂಸಿ ಆಗಿದ್ದಾರೆ. ದೊಡ್ಡ ಪ್ರಾಜೆಕ್ಟ್​ಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿರುವ ಅವರು ಆ ಸಿನಿಮಾಗಳ ಮೇಕಿಂಗ್​ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಚಿರಂಜೀವಿ ನಟಿಸುತ್ತಿರುವ ಚಿತ್ರಗಳ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಯ ಮಟ್ಟವನ್ನು ತಲುಪಲು ‘ಮೆಗಾ ಸ್ಟಾರ್​’ ಎಲ್ಲ ಆಯಾಮದಿಂದಲೂ ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಅವರಿಗೆ ‘ಲೂಸಿಫರ್’ (Lucifer) ತೆಲುಗು ರಿಮೇಕ್​ನ ಕೆಲಸಗಳಿಂದ ಅಷ್ಟೇನೂ ಖುಷಿ ಆದಂತಿಲ್ಲ. ಹಾಗಾಗಿ ಅವರು ನಿರ್ದೇಶಕ ಜಯಂ ರಾಜ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

2019ರಲ್ಲಿ ಸೂಪರ್​ ಹಿಟ್​ ಆದ ಮಲಯಾಳಂ ಸಿನಿಮಾ ‘ಲೂಸಿಫರ್’. ಮೋಹನ್​​ಲಾಲ್​ ಮುಖ್ಯಭೂಮಿಕೆ ನಿಭಾಯಿಸಿದ್ದ ಆ ಚಿತ್ರಕ್ಕೆ ಸ್ಟಾರ್​ ನಟ ಪೃಥ್ವಿರಾಜ್​ ಸುಕುಮಾರನ್​​ ಅವರು ನಿರ್ದೇಶನ ಮಾಡಿದ್ದರು. ಅದೇ ಸಿನಿಮಾ ತೆಲುಗಿಗೆ ರಿಮೇಕ್​ ಆಗುತ್ತಿದ್ದು, ಚಿರಂಜೀವಿ ಹೀರೋ ಆಗಿ ನಟಿಸುತ್ತಿದ್ದಾರೆ. ನಿರ್ದೇಶನ ಮಾಡುವ ಜವಾಬ್ದಾರಿಯನ್ನು ಜಯಂ​ ರಾಜ ನಿಭಾಯಿಸುತ್ತಿದ್ದಾರೆ.

ಈ ಸಿನಿಮಾದ ಆ್ಯಕ್ಷನ್​ ದೃಶ್ಯಗಳ ಬಗ್ಗೆ ಚಿರಂಜೀವಿ ತಕರಾರು ತೆಗೆದಿದ್ದಾರೆ ಎನ್ನಲಾಗಿದೆ. ಮೂಲ ಸಿನಿಮಾದಲ್ಲಿ ನಿರ್ದೇಶಕ ಫೃಥ್ವಿರಾಜ್​ ಸುಕುಮಾರನ್​ ಅವರು ಸಾಹಸ ಸನ್ನಿವೇಶಗಳನ್ನು ತಮ್ಮದೇ ಶೈಲಿಯಲ್ಲಿ ಕಟ್ಟಿಕೊಟ್ಟಿದ್ದರು. ಅದು ಚಿರುಗೆ ಸಖತ್​ ಇಂಪ್ರೆಸ್​ ಆಗಿದೆ. ಅದೇ ಮಾದರಿಯಲ್ಲೇ ರಿಮೇಕ್​ನಲ್ಲೂ ಫೈಟಿಂಗ್​ ಸೀನ್ಸ್​ ಇರಬೇಕು ಎಂದು ಅವರು ಬಯಸುತ್ತಿದ್ದಾರೆ. ಆದರೆ ನಿರ್ದೇಶಕ ಜಯಂ​ ರಾಜ ಬೇರೇನನ್ನೋ ಮಾಡಿದ್ದಾರೆ. ಮೂಲ ಚಿತ್ರದ ಸೊಗಡನ್ನು ಬದಿಗಿರಿಸಿ, ಟಾಲಿವುಡ್​ ಶೈಲಿಯಲ್ಲಿ ಆ್ಯಕ್ಷನ್​ ದೃಶಗಳನ್ನು ಜಯಂ​ ರಾಜ ಚಿತ್ರೀಕರಿಸಿದ್ದಾರೆ. ಇದಕ್ಕೆ ಚಿರಂಜೀವಿ ಸಮ್ಮತಿ ಸೂಚಿಸಿಲ್ಲ. ಹಾಗಾಗಿ ಸಾಹಸ ಸನ್ನಿವೇಶಗಳನ್ನು ಮತ್ತೆ ಹೊಸದಾಗಿ ಚಿತ್ರೀಕರಿಸುವ ಸಾಧ್ಯತೆ ದಟ್ಟವಾಗಿದೆ. ಇದರಿಂದ ಸಿನಿಮಾ ಕೆಲಸಗಳು ಇನ್ನಷ್ಟು ತಡವಾಗುವ ನಿರೀಕ್ಷೆ ಇದೆ.

ಇನ್ನು, ಆ.22ರಂದು ಚಿರಂಜೀವಿ ಹುಟ್ಟುಹಬ್ಬ. ಈ ಪ್ರಯುಕ್ತ ಬಹುನಿರೀಕ್ಷಿತ ‘ಆಚಾರ್ಯ’ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಬಹುದು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಶೂಟಿಂಗ್ ಪೂರ್ಣಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಈಗ ಕೊನೆಯ ಹಂತದ ಶೂಟಿಂಗ್​ ನಡೆಯುತ್ತಿದೆ.

ಇದನ್ನೂ ಓದಿ:

ಸರ್ಜರಿ ಬಳಿಕ​ ಚಿರಂಜೀವಿ ಜೊತೆ ಪ್ರಕಾಶ್​ ರೈ ಫೋಟೋ ವೈರಲ್​; ಇನ್ನಷ್ಟು ಹೆಚ್ಚಿತು ಅನುಮಾನ

ಚಿರಂಜೀವಿ ಅಭಿಮಾನಿಗಳು ಆ.22ರ ಮೇಲೆ ಕಣ್ಣು ಇಟ್ಟಿರೋದು ಯಾಕೆ? ನಿರೀಕ್ಷೆ ಹೆಚ್ಚಿಸಿದ ‘ಆಚಾರ್ಯ’

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ