AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?

ಮೂಲ ಚಿತ್ರದ ಸೊಗಡನ್ನು ಬದಿಗಿರಿಸಿ, ಟಾಲಿವುಡ್​ ಶೈಲಿಯಲ್ಲಿ ಆ್ಯಕ್ಷನ್​ ದೃಶಗಳನ್ನು ಚಿತ್ರೀಕರಿಸಲು ಜಯಂ​ ರಾಜ ಮುಂದಾಗಿದ್ದಾರೆ. ಇದಕ್ಕೆ ಚಿರಂಜೀವಿ ಸಮ್ಮತಿ ಸೂಚಿಸಿಲ್ಲ.

ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?
ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ
TV9 Web
| Edited By: |

Updated on: Aug 21, 2021 | 9:16 AM

Share

ಟಾಲಿವುಡ್​ನ ದಿಗ್ಗಜ ಕಲಾವಿದ ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ಅವರು ಸಿನಿಮಾಗಳ ಆಯ್ಕೆಯಲ್ಲಿ ಸಿಕ್ಕಾಪಟ್ಟೆ ಚ್ಯೂಸಿ ಆಗಿದ್ದಾರೆ. ದೊಡ್ಡ ಪ್ರಾಜೆಕ್ಟ್​ಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿರುವ ಅವರು ಆ ಸಿನಿಮಾಗಳ ಮೇಕಿಂಗ್​ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಚಿರಂಜೀವಿ ನಟಿಸುತ್ತಿರುವ ಚಿತ್ರಗಳ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಯ ಮಟ್ಟವನ್ನು ತಲುಪಲು ‘ಮೆಗಾ ಸ್ಟಾರ್​’ ಎಲ್ಲ ಆಯಾಮದಿಂದಲೂ ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಅವರಿಗೆ ‘ಲೂಸಿಫರ್’ (Lucifer) ತೆಲುಗು ರಿಮೇಕ್​ನ ಕೆಲಸಗಳಿಂದ ಅಷ್ಟೇನೂ ಖುಷಿ ಆದಂತಿಲ್ಲ. ಹಾಗಾಗಿ ಅವರು ನಿರ್ದೇಶಕ ಜಯಂ ರಾಜ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

2019ರಲ್ಲಿ ಸೂಪರ್​ ಹಿಟ್​ ಆದ ಮಲಯಾಳಂ ಸಿನಿಮಾ ‘ಲೂಸಿಫರ್’. ಮೋಹನ್​​ಲಾಲ್​ ಮುಖ್ಯಭೂಮಿಕೆ ನಿಭಾಯಿಸಿದ್ದ ಆ ಚಿತ್ರಕ್ಕೆ ಸ್ಟಾರ್​ ನಟ ಪೃಥ್ವಿರಾಜ್​ ಸುಕುಮಾರನ್​​ ಅವರು ನಿರ್ದೇಶನ ಮಾಡಿದ್ದರು. ಅದೇ ಸಿನಿಮಾ ತೆಲುಗಿಗೆ ರಿಮೇಕ್​ ಆಗುತ್ತಿದ್ದು, ಚಿರಂಜೀವಿ ಹೀರೋ ಆಗಿ ನಟಿಸುತ್ತಿದ್ದಾರೆ. ನಿರ್ದೇಶನ ಮಾಡುವ ಜವಾಬ್ದಾರಿಯನ್ನು ಜಯಂ​ ರಾಜ ನಿಭಾಯಿಸುತ್ತಿದ್ದಾರೆ.

ಈ ಸಿನಿಮಾದ ಆ್ಯಕ್ಷನ್​ ದೃಶ್ಯಗಳ ಬಗ್ಗೆ ಚಿರಂಜೀವಿ ತಕರಾರು ತೆಗೆದಿದ್ದಾರೆ ಎನ್ನಲಾಗಿದೆ. ಮೂಲ ಸಿನಿಮಾದಲ್ಲಿ ನಿರ್ದೇಶಕ ಫೃಥ್ವಿರಾಜ್​ ಸುಕುಮಾರನ್​ ಅವರು ಸಾಹಸ ಸನ್ನಿವೇಶಗಳನ್ನು ತಮ್ಮದೇ ಶೈಲಿಯಲ್ಲಿ ಕಟ್ಟಿಕೊಟ್ಟಿದ್ದರು. ಅದು ಚಿರುಗೆ ಸಖತ್​ ಇಂಪ್ರೆಸ್​ ಆಗಿದೆ. ಅದೇ ಮಾದರಿಯಲ್ಲೇ ರಿಮೇಕ್​ನಲ್ಲೂ ಫೈಟಿಂಗ್​ ಸೀನ್ಸ್​ ಇರಬೇಕು ಎಂದು ಅವರು ಬಯಸುತ್ತಿದ್ದಾರೆ. ಆದರೆ ನಿರ್ದೇಶಕ ಜಯಂ​ ರಾಜ ಬೇರೇನನ್ನೋ ಮಾಡಿದ್ದಾರೆ. ಮೂಲ ಚಿತ್ರದ ಸೊಗಡನ್ನು ಬದಿಗಿರಿಸಿ, ಟಾಲಿವುಡ್​ ಶೈಲಿಯಲ್ಲಿ ಆ್ಯಕ್ಷನ್​ ದೃಶಗಳನ್ನು ಜಯಂ​ ರಾಜ ಚಿತ್ರೀಕರಿಸಿದ್ದಾರೆ. ಇದಕ್ಕೆ ಚಿರಂಜೀವಿ ಸಮ್ಮತಿ ಸೂಚಿಸಿಲ್ಲ. ಹಾಗಾಗಿ ಸಾಹಸ ಸನ್ನಿವೇಶಗಳನ್ನು ಮತ್ತೆ ಹೊಸದಾಗಿ ಚಿತ್ರೀಕರಿಸುವ ಸಾಧ್ಯತೆ ದಟ್ಟವಾಗಿದೆ. ಇದರಿಂದ ಸಿನಿಮಾ ಕೆಲಸಗಳು ಇನ್ನಷ್ಟು ತಡವಾಗುವ ನಿರೀಕ್ಷೆ ಇದೆ.

ಇನ್ನು, ಆ.22ರಂದು ಚಿರಂಜೀವಿ ಹುಟ್ಟುಹಬ್ಬ. ಈ ಪ್ರಯುಕ್ತ ಬಹುನಿರೀಕ್ಷಿತ ‘ಆಚಾರ್ಯ’ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಬಹುದು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಶೂಟಿಂಗ್ ಪೂರ್ಣಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಈಗ ಕೊನೆಯ ಹಂತದ ಶೂಟಿಂಗ್​ ನಡೆಯುತ್ತಿದೆ.

ಇದನ್ನೂ ಓದಿ:

ಸರ್ಜರಿ ಬಳಿಕ​ ಚಿರಂಜೀವಿ ಜೊತೆ ಪ್ರಕಾಶ್​ ರೈ ಫೋಟೋ ವೈರಲ್​; ಇನ್ನಷ್ಟು ಹೆಚ್ಚಿತು ಅನುಮಾನ

ಚಿರಂಜೀವಿ ಅಭಿಮಾನಿಗಳು ಆ.22ರ ಮೇಲೆ ಕಣ್ಣು ಇಟ್ಟಿರೋದು ಯಾಕೆ? ನಿರೀಕ್ಷೆ ಹೆಚ್ಚಿಸಿದ ‘ಆಚಾರ್ಯ’

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?