AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್ ಕುಮಾರ್ ವ್ಯಕ್ತಿತ್ವ, ನಟನೆ ಕೊಂಡಾಡಿದ ಮೆಗಾಸ್ಟಾರ್ ಚಿರಂಜೀವಿ

Megastar Chiranjeevi-Shiva Rajkumar: ಪರ ಭಾಷೆ ಸಿನಿಮಾಗಳಿಂದಲೂ ಶಿವರಾಜ್ ಕುಮಾರ್ ಅವರಿಗೆ ಒಳ್ಳೆಯ ಆಫರ್​​ಗಳು ಬರುತ್ತಲೇ ಇರುತ್ತವೆ. ಶಿವಣ್ಣ ಸಹ ಗೌರವಪೂರ್ವಕವಾಗಿ ಪಾತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿರುತ್ತಾರೆ. ಇತ್ತೀಚೆಗಷ್ಟೆ ಟಾಲಿವುಡ್​ ಸ್ಟಾರ್ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಶಿವಣ್ಣ ನಟಿಸಿದ್ದು, ಸಿನಿಮಾ ಜೊತೆಗೆ ಪಾತ್ರವೂ ಹಿಟ್ ಆಗಿದೆ. ಇದೀಗ ಮೆಗಾಸ್ಟಾರ್ ಚಿರಂಜೀವಿ, ಶಿವಣ್ಣ ಅವರನ್ನು ಕೊಂಡಾಡಿದ್ದಾರೆ.

ಶಿವರಾಜ್ ಕುಮಾರ್ ವ್ಯಕ್ತಿತ್ವ, ನಟನೆ ಕೊಂಡಾಡಿದ ಮೆಗಾಸ್ಟಾರ್ ಚಿರಂಜೀವಿ
Shiva Rajkumar Chiru
ಮಂಜುನಾಥ ಸಿ.
|

Updated on:Jun 16, 2026 | 1:59 PM

Share

ಶಿವರಾಜ್ ಕುಮಾರ್ (Shiva Rajkumar) ಕನ್ನಡದ ಸ್ಟಾರ್ ನಟ, ಅವರು ನಟನೆಯಿಂದ ಮಾತ್ರವಲ್ಲದೆ ತಮ್ಮ ವ್ಯಕ್ತಿತ್ವದಿಂದಲೂ ಅಭಿಮಾನಿಗಳಿಗೆ, ಚಿತ್ರರಂಗದವರಿಗೆ ಹತ್ತಿರವಾಗಿದ್ದಾರೆ. ಕನ್ನಡ ಮಾತ್ರವಲ್ಲದೆ ನೆರೆಯ ಚಿತ್ರರಂಗಗಳಲ್ಲಿಯೂ ಶಿವಣ್ಣನಿಗೆ ಬಹಳ ಒಳ್ಳೆಯ ಹೆಸರಿದೆ. ಇದೇ ಕಾರಣಕ್ಕೆ ಪರ ಭಾಷೆ ಸಿನಿಮಾಗಳಿಂದಲೂ ಶಿವರಾಜ್ ಕುಮಾರ್ ಅವರಿಗೆ ಒಳ್ಳೆಯ ಆಫರ್​​ಗಳು ಬರುತ್ತಲೇ ಇರುತ್ತವೆ. ಶಿವಣ್ಣ ಸಹ ಗೌರವಪೂರ್ವಕವಾಗಿ ಪಾತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿರುತ್ತಾರೆ. ಇತ್ತೀಚೆಗಷ್ಟೆ ಟಾಲಿವುಡ್​ ಸ್ಟಾರ್ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಶಿವಣ್ಣ ನಟಿಸಿದ್ದು, ಸಿನಿಮಾ ಜೊತೆಗೆ ಪಾತ್ರವೂ ಹಿಟ್ ಆಗಿದೆ.

ಇತ್ತೀಚೆಗೆ ಮೆಗಾಸ್ಟಾರ್ ಚಿರಂಜೀವಿ ಅವರು ತಮ್ಮ ಪುತ್ರ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದ ಬಗ್ಗೆ ಮಾತನಾಡುತ್ತಾ ಶಿವಣ್ಣ ಅವರನ್ನು ಕೊಂಡಾಡಿದ್ದಾರೆ. ‘ಶಿವರಾಜ್ ಕುಮಾರ್, ನಮ್ಮ ಶಿವಣ್ಣ ಆ ಪಾತ್ರವನ್ನು ಒಪ್ಪಿಕೊಂಡು, ನಟಿಸುತ್ತೀನಿ ಎಂದಿದ್ದೇ ನಮ್ಮ ಪಾಲಿಗೆ ಮೊದಲ ಯಶಸ್ಸು, ಅದು ನಿನ್ನ ಅದೃಷ್ಟ’ ಎಂದು ನಿರ್ದೇಶಕ ಬುಚ್ಚಿಬಾಬು ಸನಾಗೆ ಚಿರಂಜೀವಿ ಹೇಳಿದ್ದಾರೆ.

‘ಅವರೊಬ್ಬ ಅದ್ಭುತವಾದ ನಟ, ಅಷ್ಟೇ ಅದ್ಭುತವಾದ ವ್ಯಕ್ತಿ. ಪಾತ್ರವೇ ಅವರಾಗಿ ಅವರು ನಟಿಸಿದ್ದಾರೆ. ಚರಣ್ ಅನ್ನು ಗದರಿಸುವುದಾಗಲಿ, ಬೈಯ್ಯುವುದಾಗಲಿ ಮಾಡಬೇಕು ಎಂದರೆ ಅದಕ್ಕೆ ಒಳ್ಳೆಯ ಖಡಕ್ ಆದ ನಟನೆ ಆಗಿರಬೇಕು, ಶಿವಣ್ಣ ಆ ಸಿನಿಮಾನಲ್ಲಿ ರಾಮ್ ಚರಣ್ ಪಾತ್ರವನ್ನು ಬೈಯ್ಯುತ್ತಿದ್ದರೆ ಒಬ್ಬ ತಂದೆಯೇ ಮಗನನ್ನು ಬೈಯ್ಯುತ್ತಿರುವಂತೆ ಶಿಸ್ತು ಕಲಿಸುತ್ತಿರುವಂತೆ ಕಾಣುತ್ತದೆ, ಬಹಳ ಚೆನ್ನಾಗಿ ಅವರಿಬ್ಬರ ಸೀನ್​​ಗಳು ಮೂಡಿ ಬಂದಿವೆ’ ಎಂದಿದ್ದಾರೆ ಚಿರಂಜೀವಿ.

ಇದನ್ನೂ ಓದಿ:ವಿಕಲಚೇತನ ಯುವಕನ ಚಿತ್ರಕಲೆ ಮೆಚ್ಚಿದ ಶಿವರಾಜ್ ಕುಮಾರ್

ಚಿರಂಜೀವಿ ಅವರು ದಶಕಗಳಿಂದಲೂ ದೊಡ್ಮನೆಯೊಟ್ಟಿಗೆ ಆಪ್ತ ಬಂಧ ಹೊಂದಿರುವವರು. ರಾಜ್​ಕುಮಾರ್ ಅವರೊಟ್ಟಿಗೆ ಚಿರಂಜೀವಿ ಅವರಿಗೆ ಆಪ್ತ ಬಂಧವಿತ್ತು. ಈಗ ಶಿವಣ್ಣ ತೆಲುಗಿನಲ್ಲಿ ನಟಿಸಿರುವಂತೆ ಚಿರಂಜೀವಿ ಸಹ ಕನ್ನಡದಲ್ಲಿ ನಟಿಸಿದ್ದಾರೆ. ರವಿಚಂದ್ರನ್ ನಟನೆಯ ‘ಸಿಪಾಯಿ’ ಮತ್ತು ಅರ್ಜುನ್ ಸರ್ಜಾ ನಟನೆಯ ‘ಶ್ರೀ ಮಂಜುನಾಥ’ ಸಿನಿಮಾಗಳಲ್ಲಿ ಚಿರಂಜೀವಿ ಅವರು ಅತಿಥಿ ಪಾತ್ರಗಳಲ್ಲಿ ನಟನೆ ಮಾಡಿದ್ದಾರೆ. ಇಲ್ಲಿಯೂ ಅವರಿಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ.

ಶಿವರಾಜ್ ಕುಮಾರ್ ಅವರು ‘ಪೆದ್ದಿ’ ಸಿನಿಮಾನಲ್ಲಿ ಗೌರ ನಾಯ್ಡು ಹೆಸರಿನ ಕುಸ್ತಿ ಗುರುವಿನ ಪಾತ್ರದಲ್ಲಿ ನಟಿಸಿದ್ದಾರೆ. ರಾಮ್ ಚರಣ್​​ಗೆ ಕುಸ್ತಿ ಹೇಳಿಕೊಟ್ಟು ಆ ಪಾತ್ರದ ವ್ಯಕ್ತಿತ್ವ ಬದಲಿಸುವ ಪಾತ್ರ ಶಿವಣ್ಣ ಅವರದ್ದು. ಶಿವಣ್ಣನಿಗೆ ಕೆಲವು ಮಾಸ್ ಸೀನ್​​ಗಳ ಜೊತೆಗೆ ಭಾವುಕ ದೃಶ್ಯಗಳು ಸಹ ಸಿನಿಮಾನಲ್ಲಿ ಇವೆ. ‘ಪೆದ್ದಿ’ ಶಿವಣ್ಣ ನಟಿಸಿರುವ ಎರಡನೇ ತೆಲುಗು ಸಿನಿಮಾ. ಈ ಹಿಂದೆ ‘ಗೌತಮಿ ಪುತ್ರ ಶಾತಕರ್ಣಿ’ ಸಿನಿಮಾನಲ್ಲಿ ಶಿವಣ್ಣ ಅತಿಥಿ ಪಾತ್ರದಲ್ಲಿ ನಟಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:29 pm, Tue, 16 June 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?