AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ವಿಶೇಷ ಗಿಫ್ಟ್ ಬಯಸಿದ ಮೆಗಾಸ್ಟಾರ್ ಚಿರಂಜೀವಿ; ಅವರಿಟ್ಟ ಕೋರಿಕೆ ಏನು?

Chiranjeevi Birthday: ಟಾಲಿವುಡ್​ನ ಖ್ಯಾತ ನಟ ಮೆಗಾಸ್ಟಾರ್ ಚಿರಂಜೀವಿ ಆಗಸ್ಟ್ 22ರ ತಮ್ಮ ಜನ್ಮದಿನದಂದು ವಿಶೇಷ ಅಭಿಯಾನದಲ್ಲಿ ಜೊತೆಯಾಗಿ ಎಂದು ಅಭಿಮಾನಿಗಳಲ್ಲಿ ಕೋರಿಕೆ ಇಟ್ಟಿದ್ದಾರೆ.

ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ವಿಶೇಷ ಗಿಫ್ಟ್ ಬಯಸಿದ ಮೆಗಾಸ್ಟಾರ್ ಚಿರಂಜೀವಿ; ಅವರಿಟ್ಟ ಕೋರಿಕೆ ಏನು?
ಮೆಗಾಸ್ಟಾರ್ ಚಿರಂಜೀವಿ
TV9 Web
| Updated By: shivaprasad.hs|

Updated on: Aug 21, 2021 | 7:38 PM

Share

ಟಾಲಿವುಡ್​ನ ಖ್ಯಾತ ನಟ ಮೆಗಾಸ್ಟಾರ್ ಚಿರಂಜೀವಿ ನಾಳೆ(ಆಗಸ್ಟ್ 22) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಅಭಿಮಾನಿಗಳಿಗೆ ವಿಶೇಷ ಕೋರಿಕೆಯೊಂದನ್ನು ಇಟ್ಟಿದ್ದಾರೆ. ಮೆಗಾಸ್ಟಾರ್ 66ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಅಭಿಮಾನಿಗಳು ಮೂರು ಗಿಡಗಳನ್ನು ನೆಟ್ಟು, ಅದರ ಪಾಲನೆ ಮಾಡಬೇಕು ಎಂದು ಚಿರಂಜೀವಿ ಕೋರಿಕೊಂಡಿದ್ದಾರೆ. ‘ನಮಗೆಲ್ಲರಿಗೂ ಪ್ರಕೃತಿಯೇ ತಾಯಿ. ಹವಾಮಾನ ವೈಪರೀತ್ಯಕ್ಕೆ ಹಾಗೂ ವಾಯುಮಾಲಿನ್ಯದ ವಿರುದ್ಧ ಹೋರಾಡಲು ಸಸಿಗಳನ್ನು ನೆಟ್ಟು, ಬೆಳೆಸಬೇಕು. ಈ ಅಭಿಯಾನದಲ್ಲಿ ನನ್ನ ಅಭಿಮಾನಿಗಳೂ ಪಾಲ್ಗೊಂಡು ಬೆಂಬಲಿಸಿ’ ಎಂದು ಅವರು ಮನವಿ ಮಾಡಿದ್ದಾರೆ.

 ಚಿರಂಜೀವಿ ಮಾಡಿರುವ ಟ್ವೀಟ್ ಇಲ್ಲಿದೆ:

ಚಿರಂಜೀವಿ ಕೋರಿಕೆಗೆ ತೆಲಂಗಾಣ ರಾಷ್ಟ ಸಮಿತಿ(ಟಿಆರ್​ಎಸ್​)ಯ ರಾಜ್ಯಸಭಾ ಸದಸ್ಯರಾದ ಸಂತೋಷ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ‘ಅಭಿನಂದನೆಗಳು ಚಿರಂಜೀವಿಯವರೇ. ನಿಮಗಿರುವ ಅತಿ ದೊಡ್ಡ ಅಭಿಮಾನಿ ಬಳಗದಿಂದ ಈ ಅಭಿಯಾನ ಯಶಸ್ವಿಯಾಗುವುದರಲ್ಲಿ ಅನುಮಾನವಿಲ್ಲ. ನಿಮ್ಮಂತೆ ಇತರರು ಕೂಡಾ ಕರೆ ನೀಡಿದಲ್ಲಿ ಈ ಅಭಿಯಾನ ಮತ್ತಷ್ಟು ಬಲಗೊಳ್ಳುತ್ತದೆ’ ಎಂದಿದ್ದಾರೆ.

ಸಂತೋಷ್ ಕುಮಾರ್ ಪ್ರತಿಕ್ರಿಯೆ ಇಲ್ಲಿದೆ:

ಈ ಹಿಂದೆ ನಟ ಮಹೇಶ್ ಬಾಬು ಕೂಡ ತಮ್ಮ ಜನ್ಮದಿನದಂದು ಅಭಿಮಾನಿಗಳಿಗೆ ಗಿಡಗಳನ್ನು ನೆಡಲು ಕರೆ ನೀಡಿದ್ದರು. ಗ್ರೀನ್ ಇಂಡಿಯಾದ ಭಾಗವಾಗಿ ಈ ಅಭಿಯಾನದಲ್ಲಿ ಎಲ್ಲರೂ ಕೈಜೋಡಿಸಿ ಎಂದು ಅವರು ಕೋರಿಕೊಂಡಿದ್ದರು. ಪ್ರಸ್ತುತ ಚಿರಂಜೀವಿ, ಮೋಹನ್ ರಾಜಾ ನಿರ್ದೇಶನದ ಮಲಯಾಳಂನ ಲೂಸಿಫರ್ ಚಿತ್ರದ ರಿಮೇಕ್​ನಲ್ಲಿ ನಟಿಸುತ್ತಿದ್ದಾರೆ. ತಮ್ಮ ಮಗ ರಾಮ್ ಚರಣ್ ಜೊತೆ ನಟಿಸುತ್ತಿರುವ ‘ಆಚಾರ್ಯ’ ಚಿತ್ರದ ಚಿತ್ರೀಕರಣವನ್ನು ಅವರು ಮುಗಿಸಿದ್ದಾರೆ. ಈ ಚಿತ್ರವನ್ನು ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದು, ಚಿತ್ರದಲ್ಲಿ ಪೂಜಾ ಹೆಗ್ಡೆ, ಕಾಜಲ್ ಅಗರವಾಲ್ ಮೊದಲಾದವರು ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:

ಬದಲಾದ ಕನ್ನಡದ ಖ್ಯಾತ ನಟಿಯ ಲುಕ್​; ಇವರು ಯಾರು ಗುರುತಿಸ್ತೀರಾ?

Kangana Ranaut: ವಾಯುಸೇನೆ ಸಮವಸ್ತ್ರ ಧರಿಸಿದ ಕಂಗನಾ ರಣಾವತ್​ ಫೋಟೋ ವೈರಲ್​

(Megastar Chiranjeevi requests his fans to plant 3 saplings on his 66th birthday)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!