AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಚಾರ್ಯ’ ಸಿನಿಮಾ ವಿತರಕರ ನಷ್ಟ ಭರಿಸಲು ಸಂಭಾವನೆಯನ್ನೇ ಹಿಂದಿರುಗಿಸಿದ ನಟ ಚಿರಂಜೀವಿ

ಜೂನ್ ಮೊದಲ ವಾರದಲ್ಲಿ ಚಿರಂಜೀವಿ ಭಾರತಕ್ಕೆ ಮರಳಿದ್ದಾರೆ. ಹೈದರಾಬಾದ್​ಗೆ ಬಂದು ಅವರು ನಿರ್ದೇಶಕ ಕೊರಟಾಲ ಶಿವ ಜತೆ ಮಾತುಕತೆ ನಡೆಸಿದ್ದಾರೆ.

‘ಆಚಾರ್ಯ’ ಸಿನಿಮಾ ವಿತರಕರ ನಷ್ಟ ಭರಿಸಲು ಸಂಭಾವನೆಯನ್ನೇ ಹಿಂದಿರುಗಿಸಿದ ನಟ ಚಿರಂಜೀವಿ
ಚಿರಂಜೀವಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jun 08, 2022 | 1:45 PM

Share

ಚಿರಂಜೀವಿ ಹಾಗೂ ರಾಮ್ ಚರಣ್ ನಟನೆಯ ‘ಆಚಾರ್ಯ’ ಸಿನಿಮಾ (Acharya Movie) ಏಪ್ರಿಲ್ 29ರಂದು ತೆರೆಗೆ ಬಂದು ದೊಡ್ಡ ನಷ್ಟ ಅನುಭವಿಸಿತು. ಈ ಸಿನಿಮಾದಿಂದ ವಿತರಕರು ಕೈ ಸುಟ್ಟುಕೊಂಡಿದ್ದಾರೆ. ಹಾಕಿದ ಬಂಡವಾಳದ ಶೇ. 25ರಷ್ಟು ಮಾತ್ರ ಕೈ ಸೇರಿದೆ. ಉಳಿದ ಹಣ ನಷ್ಟವಾಗಿದೆ. ಇದಕ್ಕೆ ಸಂಬಂಧಿಸಿ ವಿತರಕರು ನೇರವಾಗಿ ‘ಮೆಗಾಸ್ಟಾರ್’ ಚಿರಂಜೀವಿಗೆ (Chiranjeevi) ಪತ್ರ ಬರೆದಿದ್ದರು. ಈ ವಿಚಾರ ಸುಖಾಂತ್ಯ ಕಂಡಿದೆ. ವಿತರಕರಿಗೆ ಹಣ ಹಿಂದಿರುಗಿಸಲು ತಂಡ ಮುಂದಾಗಿದೆ.

‘ಆಚಾರ್ಯ’ ಸಿನಿಮಾ ತೆರೆಕಂಡ ಬಳಿಕ ಮೇ ಮೊದಲ ವಾರದಲ್ಲಿ ಚಿರಂಜೀವಿ ಅವರು ಪತ್ನಿ ಜತೆ ವಿದೇಶಕ್ಕೆ ತೆರಳಿದ್ದರು. ಸಮ್ಮರ್ ವೆಕೇಶನ್ ಕಳೆಯಲು ಅಮೆರಿಕಕ್ಕೆ ಹಾರಿದ್ದರು. ಒಂದು ತಿಂಗಳ ಕಾಲ ಚಿರು ಅಮೆರಿಕದಲ್ಲೇ ಉಳಿದುಕೊಂಡಿದ್ದರು. ಜೂನ್ ಮೊದಲ ವಾರದಲ್ಲಿ ಅವರು ಭಾರತಕ್ಕೆ ಮರಳಿದ್ದಾರೆ. ಹೈದರಾಬಾದ್​ಗೆ ಬಂದು ಅವರು ನಿರ್ದೇಶಕ ಕೊರಟಾಲ ಶಿವ ಜತೆ ಮಾತುಕತೆ ನಡೆಸಿದ್ದಾರೆ.

ಅಮೇಜಾನ್ ಪ್ರೈಮ್ ವಿಡಿಯೋ ‘ಆಚಾರ್ಯ’ ಸಿನಿಮಾದ ಒಟಿಟಿ ಹಕ್ಕನ್ನು ಪಡೆದಿದೆ. ಈ ಒಟಿಟಿ ಸಂಸ್ಥೆ ನಿರ್ಮಾಪಕರಿಗೆ ಹಣವನ್ನು ನೀಡುವುದು ಬಾಕಿ ಇದೆ. ಈ ಹಣ ನೀಡಿದ ನಂತರದಲ್ಲಿ ವಿತರಕರಿಗೆ ಹಣ ಹಿಂದಿರುಗಿಸುವ ಭರವಸೆಯನ್ನು ನಿರ್ಮಾಪಕ ನಿರಂಜನ್​ ರೆಡ್ಡಿ ನೀಡಿದ್ದಾರೆ. ಇನ್ನು, ಚಿರಂಜೀವಿ ಕೂಡ ಈ ಸಿನಿಮಾ ವಿಚಾರದಲ್ಲಿ ದೊಡ್ಡ ತ್ಯಾಗ ಮಾಡಿದ್ದಾರೆ. ತಾವು ಪಡೆದ ಒಟ್ಟೂ ಸಂಭಾವನೆಯಲ್ಲಿ 10 ಕೋಟಿ ರೂಪಾಯಿಯನ್ನು ಹಿಂದಿರುಗಿಸಿದ್ದು, ಇದನ್ನು ವಿತರಕರ ನಷ್ಟ ಭರಿಸಲು ಬಳಕೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ
Image
Acharya Box Office: ಬಾಕ್ಸಾಫೀಸ್​ನಲ್ಲಿ ಮಕಾಡೆ ಮಲಗಿದ ‘ಆಚಾರ್ಯ’; ಇದುವರೆಗೆ ಆದ ಕಲೆಕ್ಷನ್ ಎಷ್ಟು?
Image
ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್
Image
Rashmika Mandanna: ರಶ್ಮಿಕಾ ಮಂದಣ್ಣ ರಿಜೆಕ್ಟ್ ಮಾಡಿದ್ದ ಈ ಸಿನಿಮಾಗಳು ಸೋತಿದ್ದು ಹಾಗೀಗಲ್ಲ
Image
‘ಕೆಜಿಎಫ್​ 2’ ಎದುರು 3ನೇ ವಾರವೂ ಮಂಕಾದ ಸ್ಟಾರ್​ ಸಿನಿಮಾಗಳು; ಇನ್ನೂ ನಿಂತಿಲ್ಲ ರಾಕಿ ಭಾಯ್​ ಹವಾ

ಇದನ್ನೂ ಓದಿ: ‘ಆಚಾರ್ಯ’ ಒಟಿಟಿ ರಿಲೀಸ್​ಗೆ ದಿನಾಂಕ ಫಿಕ್ಸ್​; ರಾಮ್​ ಚರಣ್​ ನಟನೆಯ ಎರಡು ಸಿನಿಮಾ ಒಂದೇ ದಿನ ರಿಲೀಸ್

ಈ ವಿಚಾರ ಇಷ್ಟೊಂದು ಗಂಭೀರ ಸ್ವರೂಪ ಪಡೆದುಕೊಳ್ಳಲು ಒಂದು ಕಾರಣವಿದೆ. ರಾಯಚೂರು ಮೂಲದ ವಿತರಕ, ಪ್ರದರ್ಶಕ ರಾಜ್​ಗೋಪಾಲ್ ಬಾಲಾಜಿ ಅವರು ಚಿರಂಜೀವಿಗೆ ಪತ್ರ ಬರೆದಿದ್ದರು. ಅಷ್ಟೇ ಅಲ್ಲ, ಶೇ.75 ನಷ್ಟ ಅನುಭವಿಸಿರುವ ಬಗ್ಗೆ ಅವರು ದೂರಿದ್ದರು. ‘ಆಚಾರ್ಯ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ಕಾಣುತ್ತಿಲ್ಲ. ಇದರಿಂದ ನನಗೆ ತುಂಬಾ ನಿರಾಸೆಯಾಗಿದೆ. ನಾನು ಒಂದು ವರ್ಷದ ಹಿಂದೆ ಈ ಸಿನಿಮಾ ಬುಕ್ ಮಾಡಿದ್ದೆ. ಒಪ್ಪಿಕೊಂಡಂತೆ ಸಿನಿಮಾ ಬಿಡುಗಡೆಗೂ ಮುನ್ನ ಸಂಪೂರ್ಣ ಹಣ ನೀಡಿದ್ದೇನೆ. ಸಿನಿಮಾ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ ಎಂದು ಹೈದರಾಬಾದ್ ಮಂದಿ ಅಂದುಕೊಂಡಿದ್ದಾರೆ. ಆದರೆ, ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಓಡುತ್ತಿಲ್ಲ’ ಎಂದು ಹೇಳಿದ್ದರು. ಚಿರಂಜೀವಿ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದರು. ಅವರ ಈ ತ್ಯಾಗಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ, ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. 

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. 

Published On - 1:26 pm, Wed, 8 June 22

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?