AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಚಾರ್ಯ’ ತಂಡದಿಂದ ನಟಿ ಕಾಜಲ್​ಗೆ ಅವಮಾನ; ಫ್ಯಾನ್ಸ್​ ಮನದಲ್ಲಿ ಮೂಡಿದೆ ದೊಡ್ಡ ಅನುಮಾನ

Acharya Movie | Kajal Aggarwal: ‘ಮೆಗಾ ಸ್ಟಾರ್​’ ಚಿರಂಜೀವಿಗೆ ಜೋಡಿಯಾಗಿ ಕಾಜಲ್​ ಅಗರ್​ವಾಲ್​ ನಟಿಸಿದ್ದಾರೆ ಎಂಬ ಕಾರಣಕ್ಕೆ ಅಭಿಮಾನಿಗಳು ನಿರೀಕ್ಷೆ ಹೆಚ್ಚಿಸಿಕೊಂಡಿದ್ದರು. ಆದರೆ ಈಗ ಕಾಜಲ್​ ಪಾತ್ರ ಇದೆಯೋ ಇಲ್ಲವೋ ಎಂಬ ಪ್ರಶ್ನೆ ಎದುರಾಗಿದೆ.

‘ಆಚಾರ್ಯ’ ತಂಡದಿಂದ ನಟಿ ಕಾಜಲ್​ಗೆ ಅವಮಾನ; ಫ್ಯಾನ್ಸ್​ ಮನದಲ್ಲಿ ಮೂಡಿದೆ ದೊಡ್ಡ ಅನುಮಾನ
ಮೆಗಾ ಸ್ಟಾರ್​ ಚಿರಂಜೀವಿ, ರಾಮ್​ ಚರಣ್​, ಕಾಜಲ್​ ಅಗರ್​ವಾಲ್​
TV9 Web
| Edited By: |

Updated on: Apr 25, 2022 | 11:24 AM

Share

​ನಟಿ ಕಾಜಲ್​ ಅಗರ್​ವಾಲ್​ ಅವರು ದಕ್ಷಿಣ ಭಾರತದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಬಹುಬೇಡಿಕೆಯ ಕಲಾವಿದೆ ಆಗಿದ್ದ ಅವರು ಈಗ ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಉದ್ಯಮಿ ಗೌತಮ್​ ಕಿಚಲು ಜೊತೆ ಅವರು ವೈವಾಹಿಕ ಜೀವನ ನಡೆಸುತ್ತಿದ್ದಾರೆ. ಕಾಜಲ್​ ಅಗರ್​ವಾಲ್​ ನಟನೆಯ ‘ಆಚಾರ್ಯ’ ಸಿನಿಮಾ (Acharya Movie) ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ಮುಖ್ಯ ಭೂಮಿಕೆ ನಿಭಾಯಿಸಿರುವ ಈ ಚಿತ್ರ ಏ.29ರಂದು ರಿಲೀಸ್​ ಆಗಲಿದೆ. ಆ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್​ ಇವೆಂಟ್​ ಮಾಡಲಾಗಿದೆ. ಹೈದರಾಬಾದ್​ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಜಲ್​ ಅಗರ್​ವಾಲ್ (Kajal Aggarwal)​ ಅವರನ್ನು ಹೊರತುಪಡಿಸಿ ಇಡೀ ಚಿತ್ರತಂಡ ಹಾಜರಿ ಹಾಕಿತ್ತು. ಅಲ್ಲದೇ ಅನೇಕ ಅತಿಥಿಗಳು ಕೂಡ ಬಂದಿದ್ದರು. ಆದರೆ ಯಾರೊಬ್ಬರೂ ಕೂಡ ಕಾಜಲ್​ ಅಗರ್​ವಾಲ್​ ಬಗ್ಗೆ ಮಾತನಾಡಿಲ್ಲ. ಆ ಮೂಲಕ ಕಾಜಲ್​ಗೆ ಅವಮಾನ ಮಾಡಲಾಗಿದೆ ಎಂದು ಅಭಿಮಾನಿಗಳು ಆರೋಪಿಸುತ್ತಿದ್ದಾರೆ. ಅಷ್ಟೇ ಅಲ್ಲ, ಈ ಸಿನಿಮಾದಲ್ಲಿ ಕಾಜಲ್​ ಪಾತ್ರ ಇದೆಯೋ ಇಲ್ಲವೋ ಎಂಬ ಅನುಮಾನ ಕೂಡ ಮೂಡುವಂತಾಗಿದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ.

‘ಆಚಾರ್ಯ’ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಅತಿಥಿ ಪಾತ್ರದಲ್ಲಿ ರಾಮ್​ ಚರಣ್​ ನಟಿಸಿದ್ದಾರೆ. ಅವರು ಈ ಸಿನಿಮಾದ ನಿರ್ಮಾಪಕರೂ ಹೌದು. ‘ಮೆಗಾ ಸ್ಟಾರ್​’ ಚಿರಂಜೀವಿ ಅವರಿಗೆ ಜೋಡಿಯಾಗಿ ಕಾಜಲ್​ ಅಗರ್​ವಾಲ್​ ನಟಿಸಿದ್ದಾರೆ ಎಂಬ ಕಾರಣಕ್ಕೆ ಅಭಿಮಾನಿಗಳು ನಿರೀಕ್ಷೆ ಹೆಚ್ಚಿಸಿಕೊಂಡಿದ್ದರು. ಆದರೆ ಈಗ ಕಾಜಲ್​ ಪಾತ್ರ ಇದೆಯೋ ಇಲ್ಲವೋ ಎಂಬ ಪ್ರಶ್ನೆ ಎದುರಾಗಿದೆ. ಚಿತ್ರತಂಡ ಎಲ್ಲರ ನಡೆ ಕೂಡ ಈ ಅನುಮಾನಕ್ಕೆ ಪೂರಕವಾಗಿಯೇ ಇದೆ.

ಕಾಜಲ್​ ಕೂಡ ಈ ಸಿನಿಮಾ ಬಗ್ಗೆ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಯಾವುದೇ ಪೋಸ್ಟ್​ ಹಾಕಿಕೊಂಡಿಲ್ಲ. ಹಾಗಾಗಿ ಚಿತ್ರತಂಡದ ಜೊತೆಗೆ ಅವರು ಮನಸ್ತಾಪ ಮಾಡಿಕೊಂಡಿರಬಹುದು ಎಂಬ ಅಭಿಪ್ರಾಯ ಕೆಲವರಿಂದ ವ್ಯಕ್ತವಾಗಿದೆ. ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾಜಲ್​ ಅವರು ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆ ಕಾರಣದಿಂದಲೂ ಅವರು ‘ಆಚಾರ್ಯ’ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗಿಲ್ಲ. ಅದೇನೇ ಇರಲಿ, ಕೊನೇ ಪಕ್ಷ ವೇದಿಕೆಯಲ್ಲಿ ಒಬ್ಬರಾದರೂ ಅವರ ಹೆಸರನ್ನು ಹೇಳಬೇಕಿತ್ತು. ಎಲ್ಲರೂ ಕಾಜಲ್​ ಬಗ್ಗೆ ಮೌನ ವಹಿಸಿರುವುದರಿಂದ ಈ ಚಿತ್ರದಲ್ಲಿ ಅವರ ಪಾತ್ರವನ್ನು ತೆಗೆದು ಹಾಕಲಾಗಿದೆ ಎಂಬ ಅನುಮಾನ ಬಲವಾಗಿದೆ.

ಹಿಂದಿಗೆ ಡಬ್​ ಆಗಿಲ್ಲ ‘ಆಚಾರ್ಯ’:

ಉತ್ತರ ಭಾರತದಲ್ಲಿ ಬಾಲಿವುಡ್​ ಚಿತ್ರಗಳೇ ಸೊರಗುತ್ತಿರುವಾಗ ದಕ್ಷಿಣ ಭಾರತದ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಕಮಾಲ್​ ಮಾಡುತ್ತಿವೆ. ಮುಂಬರುವ ಅನೇಕ ಸಿನಿಮಾಗಳು ಕೂಡ ಹಿಂದಿಗೆ ಡಬ್​ ಆದರೆ ಬಾಕ್ಸ್​ ಆಫೀಸ್​ ದೃಷ್ಟಿಯಿಂದ ಸಖತ್​ ಲಾಭ ಆಗಲಿದೆ. ಆದರೆ ‘ಆಚಾರ್ಯ’ ಸಿನಿಮಾ ಬೇರೆ ದಾರಿ ಹಿಡಿದಿದೆ. ಈ ಸಿನಿಮಾವನ್ನು ಹಿಂದಿಗೆ ಡಬ್​ ಮಾಡಲು ನಿರ್ಮಾಪಕ ರಾಮ್​ ಚರಣ್ ಅವರು ಸಿದ್ಧರಿಲ್ಲ. ಈ ಬಗ್ಗೆ ಅವರು ಖಡಕ್​ ನಿರ್ಧಾರ ತಿಳಿಸಿದ್ದಾರೆ.

‘ಈ ಸಿನಿಮಾದ ಕೆಲಸ ಶುರು ಆದಾಗಿನಿಂದಲೂ ನಿರ್ದೇಶಕ ಕೊರಟಾಲ ಶಿವ ಅವರು ಈ ವಿಚಾರದಲ್ಲಿ ಸ್ಪಷ್ಟವಾಗಿದ್ದರು. ಇದು ದಕ್ಷಿಣ ಭಾರತದ ಸೊಗಡಿನ ಸಿನಿಮಾ. ಗಡಿಬಿಡಿಯಲ್ಲಿ ಇದನ್ನು ಪ್ಯಾನ್​ ಇಂಡಿಯಾ ಸಿನಿಮಾ ಆಗಿಸುವ ಉದ್ದೇಶವೂ ನಮಗೆ ಇಲ್ಲ. ಹಿಂದಿಗೆ ಡಬ್​ ಆಗಿಲ್ಲ ಎಂಬ ಬಗ್ಗೆ ನಮಗೆ ಬೇಸರ ಕೂಡ ಇಲ್ಲ’ ಎಂದು ರಾಮ್​ ಚರಣ್​ ಹೇಳಿದ್ದಾರೆ.

ಇದನ್ನೂ ಓದಿ:

ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಕಾಜಲ್​​

21 ಮಿಲಿಯನ್​ ಫಾಲೋವರ್ಸ್​ ಪಡೆದ ಖುಷಿಗೆ ನಟಿ ಕಾಜಲ್​ ಅಗರ್​ವಾಲ್​ ಹೊಸ ಫೋಟೋಶೂಟ್​

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್