AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ರಿಲೀಸ್​ ಡೇಟ್​ ಮುಂದೂಡಿಕೆ; ಫೆಬ್ರವರಿಯಲ್ಲೂ ಕೊವಿಡ್​ ಕಾಟ

‘ಕೊರೊನಾ ಹರಡುತ್ತಿರುವ ಕಾರಣ ಆಚಾರ್ಯ ಸಿನಿಮಾದ ರಿಲೀಸ್​ ದಿನಾಂಕವನ್ನು ಮುಂದೂಡಲಾಗಿದೆ. ಶೀಘ್ರದಲ್ಲೇ ಹೊಸ ರಿಲೀಸ್​ ಡೇಟ್​ ಬಗ್ಗೆ ತಿಳಿಸಲಾಗುವುದು’ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ರಿಲೀಸ್​ ಡೇಟ್​ ಮುಂದೂಡಿಕೆ; ಫೆಬ್ರವರಿಯಲ್ಲೂ ಕೊವಿಡ್​ ಕಾಟ
ಚಿರಂಜೀವಿ, ರಾಮ್​ ಚರಣ್​
TV9 Web
| Updated By: ಮದನ್​ ಕುಮಾರ್​|

Updated on: Jan 15, 2022 | 3:30 PM

Share

ಕೊರೊನಾ ವೈರಸ್​ (Coronavirus) ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದ ಬಹುತೇಕ ಉದ್ಯಮಗಳು ಸೊರಗುತ್ತಿವೆ. ನೈಟ್​ ಕರ್ಫ್ಯೂ, ವೀಕೆಂಡ್​ ಕರ್ಫ್ಯೂ ಜಾರಿ ಆದ ನಂತರವಂತೂ ಚಿತ್ರೋದ್ಯಮ ತಣ್ಣಗಾಗಿದೆ. ಸಿನಿಮಾಗೆ ಸಂಬಂಧಿಸಿದ ಎಲ್ಲ ವಹಿವಾಟುಗಳು ಸ್ಥಗಿತಗೊಂಡಿವೆ. ಅನೇಕ ದೊಡ್ಡ ಬಜೆಟ್​ನ ಸಿನಿಮಾಗಳು ಸಹ ರಿಲೀಸ್​ ದಿನಾಂಕ ಮುಂದೂಡಿಕೊಂಡಿವೆ. ಜ.7ರಂದು ಬಿಡುಗಡೆ ಆಗಿಬೇಕಿದ್ದ ‘ಆರ್​ಆರ್​ಆರ್​’, ಜ.14ರಂದು ತೆರೆಕಾಣಬೇಕಿದ್ದ ‘ರಾಧೆ ಶ್ಯಾಮ್​’ ಸೇರಿದಂತೆ ಹಲವು ಚಿತ್ರಗಳ ರಿಲೀಸ್​ ದಿನಾಂಕ ಪೋಸ್ಟ್​ ಪೋನ್​ ಆಗಿವೆ. ಇವಿಷ್ಟು ಜನವರಿ ತಿಂಗಳಲ್ಲಿ ಬರಬೇಕಿದ್ದ ಸಿನಿಮಾಗಳ ಸ್ಥಿತಿ. ಅಷ್ಟೇ ಅಲ್ಲ, ಫೆಬ್ರವರಿಯಲ್ಲೂ ಕೊರೊನಾ ತಗ್ಗುವ ಲಕ್ಷಣ ಕಾಣುತ್ತಿಲ್ಲ. ಹಾಗಾಗಿ ಫೆ.4ರಂದು ರಿಲೀಸ್​ ಆಗಬೇಕಿದ್ದ ‘ಆಚಾರ್ಯ’ (Acharya Movie) ಚಿತ್ರ ಕೂಡ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದೆ. ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ಅಭಿನಯದ ಈ ಸಿನಿಮಾ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಚಿತ್ರತಂಡವೇ ಈ ಸುದ್ದಿಯನ್ನು ಅಧಿಕೃತಗೊಳಿಸಿದೆ. ಈ ಸಿನಿಮಾದಲ್ಲಿ ರಾಮ್​ ಚರಣ್​ ಕೂಡ ಒಂದು ಪಾತ್ರ ಮಾಡಿದ್ದಾರೆ.

‘ಕೊರೊನಾ ಹರಡುತ್ತಿರುವ ಕಾರಣ ಆಚಾರ್ಯ ಸಿನಿಮಾದ ರಿಲೀಸ್​ ದಿನಾಂಕವನ್ನು ಮುಂದೂಡಲಾಗಿದೆ. ಶೀಘ್ರದಲ್ಲೇ ಹೊಸ ರಿಲೀಸ್​ ಡೇಟ್​ ಬಗ್ಗೆ ಅಪ್​ಡೇಟ್​ ತಿಳಿಸಲಾಗುವುದು. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಎಲ್ಲರೂ ಸುರಕ್ಷಿತರಾಗಿರಿ. ದಯವಿಟ್ಟು ಕೊವಿಡ್​ ನಿಯಮಗಳನ್ನು ಪಾಲಿಸಿ’ ಎಂದು ‘ಆಚಾರ್ಯ’ ಚಿತ್ರತಂಡ ಪ್ರಕಟಣೆ ಬಿಡುಗಡೆ ಮಾಡಿದೆ.

ಈ ಸಿನಿಮಾದಲ್ಲಿ ಚಿರಂಜೀವಿ, ರಾಮ್​ ಚರಣ್​ ಜೊತೆಗೆ ಪೂಜಾ ಹೆಗ್ಡೆ, ಕಾಜಲ್​ ಅಗರ್​ವಾಲ್​, ಸೋನು ಸೂದ್​ ಮುಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಖ್ಯಾತ ನಿರ್ದೇಶಕ ಕೊರಟಾಲ ಶಿವ ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಮಣಿ ಶರ್ಮಾ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ಗಳು ಕೌತುಕ ಮೂಡಿಸಿವೆ. ಆದಷ್ಟು ಬೇಗ ಈ ಸಿನಿಮಾ ನೋಡಬೇಕು ಎಂದು ಚಿರಂಜೀವಿ ಫ್ಯಾನ್ಸ್​ ಕಾಯುತ್ತಿದ್ದಾರೆ. ಆದರೆ ಅದಕ್ಕೆ ಕೊರೊನಾ ವೈರಸ್​ ಅಡ್ಡಗಾಲು ಹಾಕುತ್ತಿದೆ.

ಒಂದು ವೇಳೆ ಕೊರೊನಾ ನಿಯಂತ್ರಣಕ್ಕೆ ಬಂದರೂ ಕೂಡ ಚಿತ್ರಮಂದಿರಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲು ಸಾಕಷ್ಟು ಸಮಯ ಹಿಡಿಯುತ್ತದೆ. ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ಸಿಗಬೇಕು. ವೀಕೆಂಡ್​ ಕರ್ಫ್ಯೂ ಮತ್ತು ನೈಟ್​ ಕರ್ಫ್ಯೂ ತೆರವುಗೊಂಡ ನಂತರವೇ ದೊಡ್ಡ ಸಿನಿಮಾಗಳು ರಿಲೀಸ್ ಆಗಲಿವೆ.

ಇದನ್ನೂ ಓದಿ:

ದಕ್ಷಿಣ ಭಾರತಕ್ಕೆ ಬಂದು ಚಿರಂಜೀವಿಗೆ ಹೊಸ ಐಡಿಯಾ ಕೊಟ್ಟ ಸಲ್ಮಾನ್​ ಖಾನ್​

ಸಿನಿಪ್ರಿಯರಿಗೆ ನಿರಾಸೆ ಮೂಡಿಸಿದ ‘ಆರ್​ಆರ್​ಆರ್​’; ಅಧಿಕೃತವಾಗಿ ಚಿತ್ರದ ರಿಲೀಸ್​ ಡೇಟ್​ ಮುಂದೂಡಿಕೆ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!