AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ರಿಲೀಸ್​ ಡೇಟ್​ ಮುಂದೂಡಿಕೆ; ಫೆಬ್ರವರಿಯಲ್ಲೂ ಕೊವಿಡ್​ ಕಾಟ

‘ಕೊರೊನಾ ಹರಡುತ್ತಿರುವ ಕಾರಣ ಆಚಾರ್ಯ ಸಿನಿಮಾದ ರಿಲೀಸ್​ ದಿನಾಂಕವನ್ನು ಮುಂದೂಡಲಾಗಿದೆ. ಶೀಘ್ರದಲ್ಲೇ ಹೊಸ ರಿಲೀಸ್​ ಡೇಟ್​ ಬಗ್ಗೆ ತಿಳಿಸಲಾಗುವುದು’ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ರಿಲೀಸ್​ ಡೇಟ್​ ಮುಂದೂಡಿಕೆ; ಫೆಬ್ರವರಿಯಲ್ಲೂ ಕೊವಿಡ್​ ಕಾಟ
ಚಿರಂಜೀವಿ, ರಾಮ್​ ಚರಣ್​
TV9 Web
| Edited By: |

Updated on: Jan 15, 2022 | 3:30 PM

Share

ಕೊರೊನಾ ವೈರಸ್​ (Coronavirus) ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದ ಬಹುತೇಕ ಉದ್ಯಮಗಳು ಸೊರಗುತ್ತಿವೆ. ನೈಟ್​ ಕರ್ಫ್ಯೂ, ವೀಕೆಂಡ್​ ಕರ್ಫ್ಯೂ ಜಾರಿ ಆದ ನಂತರವಂತೂ ಚಿತ್ರೋದ್ಯಮ ತಣ್ಣಗಾಗಿದೆ. ಸಿನಿಮಾಗೆ ಸಂಬಂಧಿಸಿದ ಎಲ್ಲ ವಹಿವಾಟುಗಳು ಸ್ಥಗಿತಗೊಂಡಿವೆ. ಅನೇಕ ದೊಡ್ಡ ಬಜೆಟ್​ನ ಸಿನಿಮಾಗಳು ಸಹ ರಿಲೀಸ್​ ದಿನಾಂಕ ಮುಂದೂಡಿಕೊಂಡಿವೆ. ಜ.7ರಂದು ಬಿಡುಗಡೆ ಆಗಿಬೇಕಿದ್ದ ‘ಆರ್​ಆರ್​ಆರ್​’, ಜ.14ರಂದು ತೆರೆಕಾಣಬೇಕಿದ್ದ ‘ರಾಧೆ ಶ್ಯಾಮ್​’ ಸೇರಿದಂತೆ ಹಲವು ಚಿತ್ರಗಳ ರಿಲೀಸ್​ ದಿನಾಂಕ ಪೋಸ್ಟ್​ ಪೋನ್​ ಆಗಿವೆ. ಇವಿಷ್ಟು ಜನವರಿ ತಿಂಗಳಲ್ಲಿ ಬರಬೇಕಿದ್ದ ಸಿನಿಮಾಗಳ ಸ್ಥಿತಿ. ಅಷ್ಟೇ ಅಲ್ಲ, ಫೆಬ್ರವರಿಯಲ್ಲೂ ಕೊರೊನಾ ತಗ್ಗುವ ಲಕ್ಷಣ ಕಾಣುತ್ತಿಲ್ಲ. ಹಾಗಾಗಿ ಫೆ.4ರಂದು ರಿಲೀಸ್​ ಆಗಬೇಕಿದ್ದ ‘ಆಚಾರ್ಯ’ (Acharya Movie) ಚಿತ್ರ ಕೂಡ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದೆ. ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ಅಭಿನಯದ ಈ ಸಿನಿಮಾ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಚಿತ್ರತಂಡವೇ ಈ ಸುದ್ದಿಯನ್ನು ಅಧಿಕೃತಗೊಳಿಸಿದೆ. ಈ ಸಿನಿಮಾದಲ್ಲಿ ರಾಮ್​ ಚರಣ್​ ಕೂಡ ಒಂದು ಪಾತ್ರ ಮಾಡಿದ್ದಾರೆ.

‘ಕೊರೊನಾ ಹರಡುತ್ತಿರುವ ಕಾರಣ ಆಚಾರ್ಯ ಸಿನಿಮಾದ ರಿಲೀಸ್​ ದಿನಾಂಕವನ್ನು ಮುಂದೂಡಲಾಗಿದೆ. ಶೀಘ್ರದಲ್ಲೇ ಹೊಸ ರಿಲೀಸ್​ ಡೇಟ್​ ಬಗ್ಗೆ ಅಪ್​ಡೇಟ್​ ತಿಳಿಸಲಾಗುವುದು. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಎಲ್ಲರೂ ಸುರಕ್ಷಿತರಾಗಿರಿ. ದಯವಿಟ್ಟು ಕೊವಿಡ್​ ನಿಯಮಗಳನ್ನು ಪಾಲಿಸಿ’ ಎಂದು ‘ಆಚಾರ್ಯ’ ಚಿತ್ರತಂಡ ಪ್ರಕಟಣೆ ಬಿಡುಗಡೆ ಮಾಡಿದೆ.

ಈ ಸಿನಿಮಾದಲ್ಲಿ ಚಿರಂಜೀವಿ, ರಾಮ್​ ಚರಣ್​ ಜೊತೆಗೆ ಪೂಜಾ ಹೆಗ್ಡೆ, ಕಾಜಲ್​ ಅಗರ್​ವಾಲ್​, ಸೋನು ಸೂದ್​ ಮುಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಖ್ಯಾತ ನಿರ್ದೇಶಕ ಕೊರಟಾಲ ಶಿವ ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಮಣಿ ಶರ್ಮಾ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ಗಳು ಕೌತುಕ ಮೂಡಿಸಿವೆ. ಆದಷ್ಟು ಬೇಗ ಈ ಸಿನಿಮಾ ನೋಡಬೇಕು ಎಂದು ಚಿರಂಜೀವಿ ಫ್ಯಾನ್ಸ್​ ಕಾಯುತ್ತಿದ್ದಾರೆ. ಆದರೆ ಅದಕ್ಕೆ ಕೊರೊನಾ ವೈರಸ್​ ಅಡ್ಡಗಾಲು ಹಾಕುತ್ತಿದೆ.

ಒಂದು ವೇಳೆ ಕೊರೊನಾ ನಿಯಂತ್ರಣಕ್ಕೆ ಬಂದರೂ ಕೂಡ ಚಿತ್ರಮಂದಿರಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲು ಸಾಕಷ್ಟು ಸಮಯ ಹಿಡಿಯುತ್ತದೆ. ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ಸಿಗಬೇಕು. ವೀಕೆಂಡ್​ ಕರ್ಫ್ಯೂ ಮತ್ತು ನೈಟ್​ ಕರ್ಫ್ಯೂ ತೆರವುಗೊಂಡ ನಂತರವೇ ದೊಡ್ಡ ಸಿನಿಮಾಗಳು ರಿಲೀಸ್ ಆಗಲಿವೆ.

ಇದನ್ನೂ ಓದಿ:

ದಕ್ಷಿಣ ಭಾರತಕ್ಕೆ ಬಂದು ಚಿರಂಜೀವಿಗೆ ಹೊಸ ಐಡಿಯಾ ಕೊಟ್ಟ ಸಲ್ಮಾನ್​ ಖಾನ್​

ಸಿನಿಪ್ರಿಯರಿಗೆ ನಿರಾಸೆ ಮೂಡಿಸಿದ ‘ಆರ್​ಆರ್​ಆರ್​’; ಅಧಿಕೃತವಾಗಿ ಚಿತ್ರದ ರಿಲೀಸ್​ ಡೇಟ್​ ಮುಂದೂಡಿಕೆ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು