AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಕ್ಯಾರವಾನ್ ಚಾಲಕ ಕೊರೊನಾದಿಂದ ನಿಧನ; ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ

ಕ್ಯಾರವಾನ್​ ಚಾಲಕನ ಸಾವಿನ ಸುದ್ದಿಯಿಂದ ಚಿರಂಜೀವಿ ಮತ್ತು ರಾಮ್​ ಚರಣ್​ ತೀವ್ರವಾಗಿ ನೊಂದಿದ್ದಾರೆ. ಅದೇ ಕಾರಣದಿಂದ ಅವರು ಆಚಾರ್ಯ ಸಿನಿಮಾದ ಶೂಟಿಂಗ್​ ನಿಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಚಿರಂಜೀವಿ ಕ್ಯಾರವಾನ್ ಚಾಲಕ ಕೊರೊನಾದಿಂದ ನಿಧನ; ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ
ಮೆಗಾಸ್ಟಾರ್​ ಚಿರಂಜೀವಿ
Follow us
ಮದನ್​ ಕುಮಾರ್​
|

Updated on: Apr 22, 2021 | 9:12 AM

ಸೆಲೆಬ್ರಿಟಿಗಳ ವಲಯದಲ್ಲಿ ಕೊವಿಡ್​ 19 ಭಯ ಹೆಚ್ಚಾಗಿದೆ. ಸಿನಿಮಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಅನೇಕರಿಗೆ ಕೊರೊನಾ ವೈರಸ್​ ಪಾಸಿಟಿವ್​ ಆಗುತ್ತಿದೆ. ಅನೇಕರು ಈ ಮಹಾಮಾರಿಗೆ ಬಲಿ ಆಗುತ್ತಿದ್ದಾರೆ. ನಟರಾದ ಸೋನು ಸೂದ್​, ಪವನ್ ಕಲ್ಯಾಣ್​ ಮುಂತಾದವರಿಗೆ ಕೊರೊನಾ ಬಂದ ಬಳಿಕ ಟಾಲಿವುಡ್​ನಲ್ಲಿ ಆತಂಕ ಹೆಚ್ಚುತ್ತಿದೆ. ಈಗ ಮೆಗಾಸ್ಟಾರ್​ ಚಿರಂಜೀವಿ ಅವರ ಕ್ಯಾರವಾನ್​ ಚಾಲಕ ಕೊವಿಡ್-19ಗೆ ಬಲಿಯಾಗಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

ಬಹುನಿರೀಕ್ಷಿತ ಆಚಾರ್ಯ ಸಿನಿಮಾದ ಕೆಲಸಗಳಲ್ಲಿ ಚಿರಂಜೀವಿ ತೊಡಗಿಕೊಂಡಿದ್ದರು. ಅದಕ್ಕೆ ಅವರ ಪುತ್ರ ರಾಮ್​ ಚರಣ್​ ನಿರ್ಮಾಪಕ. ಕೆಲವು ದಿನಗಳಿಂದ ಈ ಸಿನಿಮಾದ ಕೆಲಸಗಳಿಗೆ ಬ್ರೇಕ್​ ನೀಡಲಾಗಿದೆ. ಅದಕ್ಕೆ ಕಾರಣವೇ ಕೊರೊನಾ ವೈರಸ್​. ಆಚಾರ್ಯದಲ್ಲಿ ನಟಿಸುತ್ತಿದ್ದ ಸೋನು ಸೂದ್​ ಅವರಿಗೆ ಕೊವಿಡ್​19 ಪಾಸಿಟಿವ್​ ವರದಿ ಬಂದಿದೆ. ಈಗ ಚಿರಂಜೀವಿ ಅವರ ಕ್ಯಾರವಾನ್​ ಚಾಲಕ ಮೃತಪಟ್ಟಿರುವ ಬಗ್ಗೆ ಮಾಹಿತಿ ಕೇಳಿಬರುತ್ತಿದೆ. ಈ ಬಗ್ಗೆ ಚಿರಂಜೀವಿ ಅಧಿಕೃತವಾಗಿ ಏನನ್ನೂ ಹೇಳಿಲ್ಲ.

ಕ್ಯಾರವಾನ್​ ಚಾಲಕನ ಸಾವಿನ ಸುದ್ದಿಯಿಂದ ಚಿರಂಜೀವಿ ಮತ್ತು ರಾಮ್​ ಚರಣ್​ ತೀವ್ರವಾಗಿ ನೊಂದಿದ್ದಾರೆ. ಅದೇ ಕಾರಣದಿಂದ ಅವರು ಆಚಾರ್ಯ ಸಿನಿಮಾದ ಶೂಟಿಂಗ್​ ನಿಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರತಂಡದ ಇನ್ನುಳಿದ ಕಲಾವಿದರು ಮತ್ತು ತಂತ್ರಜ್ಞರ ಆರೋಗ್ಯದ ದೃಷ್ಟಿಯಿಂದ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ. ಈ ಚಿತ್ರಕ್ಕೆ ಬಹುತೇಕ ಶೂಟಿಂಗ್​ ಮುಗಿದಿದೆ. ಇನ್ನು 10 ಅಥವಾ 12 ದಿನ ಚಿತ್ರೀಕರಣ ಮಾಡುವುದು ಮಾತ್ರ ಬಾಕಿ ಇದೆ. ಆದರೆ ಈ ಸಂದರ್ಭದಲ್ಲಿ ಶೂಟಿಂಗ್​ಗಿಂತಲೂ ಆರೋಗ್ಯವೇ ಮುಖ್ಯ ಎಂಬ ನಿರ್ಧಾರವನ್ನು ರಾಮ್​ ಚರಣ್​ ತೆಗೆದುಕೊಂಡಿದ್ದಾರೆ.

ಪರಿಸ್ಥಿತಿ ಕೈ ಮೀರುತ್ತಿರುವ ಈ ಸಂದರ್ಭದಲ್ಲಿ ತೆಲುಗು ಸಿನಿಮಾ ಕೆಲಸಗಾರರು ಮತ್ತು ಸಿನಿಮಾ ಪತ್ರಕರ್ತರಿಗೆ ಉಚಿತ ಕೊವಿಡ್ ಲಸಿಕೆ ನೀಡಲು ಚಿರಂಜೀವಿ ಮುಂದಾಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಹಂಚಿಕೊಳ್ಳವ ಮೂಲಕ ಅವರು ಈ ವಿಷಯ ತಿಳಿಸಿದ್ದಾರೆ.

ಏ.22ರಿಂದ ಉಚಿತವಾಗಿ ವ್ಯಾಕ್ಸಿನ್​ ನೀಡಲಾಗುವುದು. 45 ವರ್ಷ ಮೇಲ್ಪಟ್ಟವರು ಇದಕ್ಕೆ ಅರ್ಹರಾಗಿರುತ್ತಾರೆ. ತಮ್ಮ ಸಂಗಾತಿಯನ್ನೂ ಕರೆದುಕೊಂಡು ಬರಬಹುದು ಎಂದು ಚಿರಂಜೀವಿ ಮಾಹಿತಿ ನೀಡಿದ್ದಾರೆ.

ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ