AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಕ್ಯಾರವಾನ್ ಚಾಲಕ ಕೊರೊನಾದಿಂದ ನಿಧನ; ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ

ಕ್ಯಾರವಾನ್​ ಚಾಲಕನ ಸಾವಿನ ಸುದ್ದಿಯಿಂದ ಚಿರಂಜೀವಿ ಮತ್ತು ರಾಮ್​ ಚರಣ್​ ತೀವ್ರವಾಗಿ ನೊಂದಿದ್ದಾರೆ. ಅದೇ ಕಾರಣದಿಂದ ಅವರು ಆಚಾರ್ಯ ಸಿನಿಮಾದ ಶೂಟಿಂಗ್​ ನಿಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಚಿರಂಜೀವಿ ಕ್ಯಾರವಾನ್ ಚಾಲಕ ಕೊರೊನಾದಿಂದ ನಿಧನ; ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ
ಮೆಗಾಸ್ಟಾರ್​ ಚಿರಂಜೀವಿ
ಮದನ್​ ಕುಮಾರ್​
|

Updated on: Apr 22, 2021 | 9:12 AM

Share

ಸೆಲೆಬ್ರಿಟಿಗಳ ವಲಯದಲ್ಲಿ ಕೊವಿಡ್​ 19 ಭಯ ಹೆಚ್ಚಾಗಿದೆ. ಸಿನಿಮಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಅನೇಕರಿಗೆ ಕೊರೊನಾ ವೈರಸ್​ ಪಾಸಿಟಿವ್​ ಆಗುತ್ತಿದೆ. ಅನೇಕರು ಈ ಮಹಾಮಾರಿಗೆ ಬಲಿ ಆಗುತ್ತಿದ್ದಾರೆ. ನಟರಾದ ಸೋನು ಸೂದ್​, ಪವನ್ ಕಲ್ಯಾಣ್​ ಮುಂತಾದವರಿಗೆ ಕೊರೊನಾ ಬಂದ ಬಳಿಕ ಟಾಲಿವುಡ್​ನಲ್ಲಿ ಆತಂಕ ಹೆಚ್ಚುತ್ತಿದೆ. ಈಗ ಮೆಗಾಸ್ಟಾರ್​ ಚಿರಂಜೀವಿ ಅವರ ಕ್ಯಾರವಾನ್​ ಚಾಲಕ ಕೊವಿಡ್-19ಗೆ ಬಲಿಯಾಗಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

ಬಹುನಿರೀಕ್ಷಿತ ಆಚಾರ್ಯ ಸಿನಿಮಾದ ಕೆಲಸಗಳಲ್ಲಿ ಚಿರಂಜೀವಿ ತೊಡಗಿಕೊಂಡಿದ್ದರು. ಅದಕ್ಕೆ ಅವರ ಪುತ್ರ ರಾಮ್​ ಚರಣ್​ ನಿರ್ಮಾಪಕ. ಕೆಲವು ದಿನಗಳಿಂದ ಈ ಸಿನಿಮಾದ ಕೆಲಸಗಳಿಗೆ ಬ್ರೇಕ್​ ನೀಡಲಾಗಿದೆ. ಅದಕ್ಕೆ ಕಾರಣವೇ ಕೊರೊನಾ ವೈರಸ್​. ಆಚಾರ್ಯದಲ್ಲಿ ನಟಿಸುತ್ತಿದ್ದ ಸೋನು ಸೂದ್​ ಅವರಿಗೆ ಕೊವಿಡ್​19 ಪಾಸಿಟಿವ್​ ವರದಿ ಬಂದಿದೆ. ಈಗ ಚಿರಂಜೀವಿ ಅವರ ಕ್ಯಾರವಾನ್​ ಚಾಲಕ ಮೃತಪಟ್ಟಿರುವ ಬಗ್ಗೆ ಮಾಹಿತಿ ಕೇಳಿಬರುತ್ತಿದೆ. ಈ ಬಗ್ಗೆ ಚಿರಂಜೀವಿ ಅಧಿಕೃತವಾಗಿ ಏನನ್ನೂ ಹೇಳಿಲ್ಲ.

ಕ್ಯಾರವಾನ್​ ಚಾಲಕನ ಸಾವಿನ ಸುದ್ದಿಯಿಂದ ಚಿರಂಜೀವಿ ಮತ್ತು ರಾಮ್​ ಚರಣ್​ ತೀವ್ರವಾಗಿ ನೊಂದಿದ್ದಾರೆ. ಅದೇ ಕಾರಣದಿಂದ ಅವರು ಆಚಾರ್ಯ ಸಿನಿಮಾದ ಶೂಟಿಂಗ್​ ನಿಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರತಂಡದ ಇನ್ನುಳಿದ ಕಲಾವಿದರು ಮತ್ತು ತಂತ್ರಜ್ಞರ ಆರೋಗ್ಯದ ದೃಷ್ಟಿಯಿಂದ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ. ಈ ಚಿತ್ರಕ್ಕೆ ಬಹುತೇಕ ಶೂಟಿಂಗ್​ ಮುಗಿದಿದೆ. ಇನ್ನು 10 ಅಥವಾ 12 ದಿನ ಚಿತ್ರೀಕರಣ ಮಾಡುವುದು ಮಾತ್ರ ಬಾಕಿ ಇದೆ. ಆದರೆ ಈ ಸಂದರ್ಭದಲ್ಲಿ ಶೂಟಿಂಗ್​ಗಿಂತಲೂ ಆರೋಗ್ಯವೇ ಮುಖ್ಯ ಎಂಬ ನಿರ್ಧಾರವನ್ನು ರಾಮ್​ ಚರಣ್​ ತೆಗೆದುಕೊಂಡಿದ್ದಾರೆ.

ಪರಿಸ್ಥಿತಿ ಕೈ ಮೀರುತ್ತಿರುವ ಈ ಸಂದರ್ಭದಲ್ಲಿ ತೆಲುಗು ಸಿನಿಮಾ ಕೆಲಸಗಾರರು ಮತ್ತು ಸಿನಿಮಾ ಪತ್ರಕರ್ತರಿಗೆ ಉಚಿತ ಕೊವಿಡ್ ಲಸಿಕೆ ನೀಡಲು ಚಿರಂಜೀವಿ ಮುಂದಾಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಹಂಚಿಕೊಳ್ಳವ ಮೂಲಕ ಅವರು ಈ ವಿಷಯ ತಿಳಿಸಿದ್ದಾರೆ.

ಏ.22ರಿಂದ ಉಚಿತವಾಗಿ ವ್ಯಾಕ್ಸಿನ್​ ನೀಡಲಾಗುವುದು. 45 ವರ್ಷ ಮೇಲ್ಪಟ್ಟವರು ಇದಕ್ಕೆ ಅರ್ಹರಾಗಿರುತ್ತಾರೆ. ತಮ್ಮ ಸಂಗಾತಿಯನ್ನೂ ಕರೆದುಕೊಂಡು ಬರಬಹುದು ಎಂದು ಚಿರಂಜೀವಿ ಮಾಹಿತಿ ನೀಡಿದ್ದಾರೆ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ