AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಿನಿಮಾಕ್ಕೆ ಶುಭ ಕೋರಿದ ಪದ್ಮವಿಭೂಷಣ ಮೆಗಾಸ್ಟಾರ್ ಚಿರಂಜೀವಿ

Chiranjeevi: ಇತ್ತೀಚೆಗಷ್ಟೆ ಪದ್ಮವಿಭೂಷಣ ಗೌರವ ಪಡೆದಿರುವ ಮೆಗಾಸ್ಟಾರ್ ಚಿರಂಜೀವಿ, ಕನ್ನಡ ಸಿನಿಮಾ ‘ಆರಾಮ್ ಅರವಿಂದ ಸ್ವಾಮಿ’ಗೆ ಶುಭ ಹಾರೈಸಿದ್ದಾರೆ.

ಕನ್ನಡ ಸಿನಿಮಾಕ್ಕೆ ಶುಭ ಕೋರಿದ ಪದ್ಮವಿಭೂಷಣ ಮೆಗಾಸ್ಟಾರ್ ಚಿರಂಜೀವಿ
ಮೆಗಾಸ್ಟಾರ್ ಚಿರಂಜೀವಿ
ಮಂಜುನಾಥ ಸಿ.
|

Updated on: Jan 30, 2024 | 7:10 PM

Share

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಇತ್ತೀಚೆಗಷ್ಟೆ ಭಾರತದ ಎರಡನೇ ಅತ್ಯುತ್ತಮ ನಾಗರೀಕ ಪ್ರಶಸ್ತಿ ಪದ್ಮ ವಿಭೂಷಣಕ್ಕೆ ಭಾಜನರಾಗಿದ್ದಾರೆ. ಚಿರಂಜೀವಿ ಅವರಿಗೆ ಕನ್ನಡ ಚಿತ್ರರಂಗದೊಂದಿಗೆ ದಶಕಗಳಿಂದಲೂ ನಂಟಿದೆ. ಕನ್ನಡದ ‘ಸಿಪಾಯಿ’ ಹಾಗೂ ‘ಶ್ರೀ ಮಂಜುನಾಥ’ ಸಿನಿಮಾಗಳಲ್ಲಿ ಚಿರಂಜೀವಿ ನಟಿಸಿದ್ದಾರೆ. ಕನ್ನಡದ ಕೆಲವು ಸಿನಿಮಾ ಕಾರ್ಯಕ್ರಮಕ್ಕೆ ಅತಿಥಿಯಾಗಿಯೂ ಆಗಮಿಸಿದ್ದಾರೆ. ಇದೀಗ ಕನ್ನಡ ಸಿನಿಮಾ ಒಂದಕ್ಕೆ ಚಿರಂಜೀವಿ ಶುಭ ಹಾರೈಸಿದ್ದಾರೆ.

ನಟ ಮತ್ತು ನಿರ್ದೇಶಕ ಅನೀಶ್ ತೇಜೇಶ್ವರ್ ಕೆಲ ಕಮರ್ಶಿಯಲ್ ಸಿನಿಮಾಗಳಲ್ಲಿ ಹೀರೋ ಆಗಿ ಮಿಂಚಿದ್ದರು. ಇದೀಗ ‘ಆರಾಮ್ ಅರವಿಂದ್ ಸ್ವಾಮಿ’ ಸಿನಿಮಾ ಮೂಲಕ ರೊಮ್ಯಾಂಟಿಕ್ ಹೀರೋ ಆಗಿದ್ದಾರೆ. ತಮ್ಮ ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭಿಸಿರುವ ಅನೀಶ್ ತೇಜೇಶ್ವರ್, ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿರುವ ಮೆಗಾಸ್ಟಾರ್ ಚಿರಂಜೀವಿ ಅವರನ್ನು ಭೇಟಿಯಾಗಿದ್ದಾರೆ. ಚಿರಂಜೀವಿ ಅವರ ಹೈದ್ರಾಬಾದ್ ನಿವಾಸದಲ್ಲಿ ಭೇಟಿಯಾಗಿರುವ ಅವರು, ಮೆಗಾಸ್ಟಾರ್ ಗೆ ಶುಭಾಶಯ ತಿಳಿಸಿದ್ದಾರೆ. ಇದೇ ವೇಳೆ ತಮ್ಮ ಬಹುನಿರೀಕ್ಷಿತ ಆರಾಮ್ ಅರವಿಂದ ಸ್ವಾಮಿ ಚಿತ್ರದ ಕಂಟೆಂಟ್ ತೋರಿಸಿದ್ದಾರೆ. ಸಿನಿಮಾದ ಕಂಟೆಂಟ್ ನೋಡಿ ಮೆಚ್ಚಿಕೊಂಡ ಚಿರಂಜೀವಿ ಅನೀಶ್ ಚಿತ್ರಕ್ಕೆ ಶುಭ ಕೋರಿದ್ದಾರೆ.

ಅನೀಶ್ ಹುಟ್ಟುಹಬ್ಬದ ಅಂಗವಾಗಿ ಬಿಡುಗಡೆಯಾಗಿದ್ದ ಆರಾಮ್ ಅರವಿಂದ ಸ್ವಾಮಿ ಟೈಟಲ್ ಟ್ರ್ಯಾಕ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅರ್ಜುನ್ ಜನ್ಯ ಸಂಗೀತ, ನಾಗಾರ್ಜುನ್ ಶರ್ಮಾ ಸಾಹಿತ್ಯದ ಹಾಡಿಗೆ ಅನೀಶ್ ಹಾಗೂ ಬಳಗ ಉತ್ತಮವಾಗಿ ಸ್ಟೆಪ್ಸ್ ಹಾಕಿದ್ದಾರೆ. ಬಾಬಾ ಭಾಸ್ಕರ್ ಮಾಸ್ಟರ್ ಕೊರಿಯೋಗ್ರಾಫಿಯಲ್ಲಿ ಮೂಡಿಬಂದಿರುವ ಟೈಟಲ್ ಟ್ರ್ಯಾಕ್ ಯೂಟ್ಯೂಬ್​ನಲ್ಲಿ 10 ಲಕ್ಷಕ್ಕೂ ಅಧಿಕ ವೀವ್ಸ್ ಪಡೆದುಕೊಂಡಿದೆ.

ಇದನ್ನೂ ಓದಿ:ಮೆಗಾಸ್ಟಾರ್ ಚಿರಂಜೀವಿಗೆ ಪದ್ಮವಿಭೂಷಣ ಪ್ರಶಸ್ತಿ, ಧನ್ಯವಾದ ಹೇಳಿದ ನಟ

ತನ್ನ ಪ್ರಮೋಷನ್ ಕಂಟೆಂಟ್ ನಿಂದಲೇ ಈಗಾಗಲೇ ಸದ್ದು ಮಾಡುತ್ತಿರುವ ‘ಆರಾಮ ಅರವಿಂದ ಸ್ವಾಮಿ’ ಸಿನಿಮಾಗೆ ಅಭಿಷೇಕ್ ಶೆಟ್ಟಿ ಆಕ್ಷನ್ ಕಟ್ ಹೇಳಿದ್ದಾರೆ. ‘ನಮ್ ಗಣಿ ಬಿಕಾಂ ಪಾಸ್’, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಸಿನಿಮಾ ಇದು. ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ‘ಆರಾಮ ಅರವಿಂದ ಸ್ವಾಮಿ’ ಚಿತ್ರೀಕರಣ ಮುಗಿದಿದ್ದು ಬಿಡುಗಡೆಗೆ ಸಜ್ಜಾಗಿದೆ.

‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವೈವಿಬಿ ಶಿವಸಾಗರ್ ಛಾಯಾಗ್ರಹಣ, ಉಮೇಶ್ ಆರ್ ಬಿ ಸಂಕಲನ ಚಿತ್ರಕ್ಕಿದೆ. ಆದಷ್ಟು ಶೀಘ್ರವೇ ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ