AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಿನಿಮಾಕ್ಕೆ ಶುಭ ಕೋರಿದ ಪದ್ಮವಿಭೂಷಣ ಮೆಗಾಸ್ಟಾರ್ ಚಿರಂಜೀವಿ

Chiranjeevi: ಇತ್ತೀಚೆಗಷ್ಟೆ ಪದ್ಮವಿಭೂಷಣ ಗೌರವ ಪಡೆದಿರುವ ಮೆಗಾಸ್ಟಾರ್ ಚಿರಂಜೀವಿ, ಕನ್ನಡ ಸಿನಿಮಾ ‘ಆರಾಮ್ ಅರವಿಂದ ಸ್ವಾಮಿ’ಗೆ ಶುಭ ಹಾರೈಸಿದ್ದಾರೆ.

ಕನ್ನಡ ಸಿನಿಮಾಕ್ಕೆ ಶುಭ ಕೋರಿದ ಪದ್ಮವಿಭೂಷಣ ಮೆಗಾಸ್ಟಾರ್ ಚಿರಂಜೀವಿ
ಮೆಗಾಸ್ಟಾರ್ ಚಿರಂಜೀವಿ
ಮಂಜುನಾಥ ಸಿ.
|

Updated on: Jan 30, 2024 | 7:10 PM

Share

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಇತ್ತೀಚೆಗಷ್ಟೆ ಭಾರತದ ಎರಡನೇ ಅತ್ಯುತ್ತಮ ನಾಗರೀಕ ಪ್ರಶಸ್ತಿ ಪದ್ಮ ವಿಭೂಷಣಕ್ಕೆ ಭಾಜನರಾಗಿದ್ದಾರೆ. ಚಿರಂಜೀವಿ ಅವರಿಗೆ ಕನ್ನಡ ಚಿತ್ರರಂಗದೊಂದಿಗೆ ದಶಕಗಳಿಂದಲೂ ನಂಟಿದೆ. ಕನ್ನಡದ ‘ಸಿಪಾಯಿ’ ಹಾಗೂ ‘ಶ್ರೀ ಮಂಜುನಾಥ’ ಸಿನಿಮಾಗಳಲ್ಲಿ ಚಿರಂಜೀವಿ ನಟಿಸಿದ್ದಾರೆ. ಕನ್ನಡದ ಕೆಲವು ಸಿನಿಮಾ ಕಾರ್ಯಕ್ರಮಕ್ಕೆ ಅತಿಥಿಯಾಗಿಯೂ ಆಗಮಿಸಿದ್ದಾರೆ. ಇದೀಗ ಕನ್ನಡ ಸಿನಿಮಾ ಒಂದಕ್ಕೆ ಚಿರಂಜೀವಿ ಶುಭ ಹಾರೈಸಿದ್ದಾರೆ.

ನಟ ಮತ್ತು ನಿರ್ದೇಶಕ ಅನೀಶ್ ತೇಜೇಶ್ವರ್ ಕೆಲ ಕಮರ್ಶಿಯಲ್ ಸಿನಿಮಾಗಳಲ್ಲಿ ಹೀರೋ ಆಗಿ ಮಿಂಚಿದ್ದರು. ಇದೀಗ ‘ಆರಾಮ್ ಅರವಿಂದ್ ಸ್ವಾಮಿ’ ಸಿನಿಮಾ ಮೂಲಕ ರೊಮ್ಯಾಂಟಿಕ್ ಹೀರೋ ಆಗಿದ್ದಾರೆ. ತಮ್ಮ ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭಿಸಿರುವ ಅನೀಶ್ ತೇಜೇಶ್ವರ್, ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿರುವ ಮೆಗಾಸ್ಟಾರ್ ಚಿರಂಜೀವಿ ಅವರನ್ನು ಭೇಟಿಯಾಗಿದ್ದಾರೆ. ಚಿರಂಜೀವಿ ಅವರ ಹೈದ್ರಾಬಾದ್ ನಿವಾಸದಲ್ಲಿ ಭೇಟಿಯಾಗಿರುವ ಅವರು, ಮೆಗಾಸ್ಟಾರ್ ಗೆ ಶುಭಾಶಯ ತಿಳಿಸಿದ್ದಾರೆ. ಇದೇ ವೇಳೆ ತಮ್ಮ ಬಹುನಿರೀಕ್ಷಿತ ಆರಾಮ್ ಅರವಿಂದ ಸ್ವಾಮಿ ಚಿತ್ರದ ಕಂಟೆಂಟ್ ತೋರಿಸಿದ್ದಾರೆ. ಸಿನಿಮಾದ ಕಂಟೆಂಟ್ ನೋಡಿ ಮೆಚ್ಚಿಕೊಂಡ ಚಿರಂಜೀವಿ ಅನೀಶ್ ಚಿತ್ರಕ್ಕೆ ಶುಭ ಕೋರಿದ್ದಾರೆ.

ಅನೀಶ್ ಹುಟ್ಟುಹಬ್ಬದ ಅಂಗವಾಗಿ ಬಿಡುಗಡೆಯಾಗಿದ್ದ ಆರಾಮ್ ಅರವಿಂದ ಸ್ವಾಮಿ ಟೈಟಲ್ ಟ್ರ್ಯಾಕ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅರ್ಜುನ್ ಜನ್ಯ ಸಂಗೀತ, ನಾಗಾರ್ಜುನ್ ಶರ್ಮಾ ಸಾಹಿತ್ಯದ ಹಾಡಿಗೆ ಅನೀಶ್ ಹಾಗೂ ಬಳಗ ಉತ್ತಮವಾಗಿ ಸ್ಟೆಪ್ಸ್ ಹಾಕಿದ್ದಾರೆ. ಬಾಬಾ ಭಾಸ್ಕರ್ ಮಾಸ್ಟರ್ ಕೊರಿಯೋಗ್ರಾಫಿಯಲ್ಲಿ ಮೂಡಿಬಂದಿರುವ ಟೈಟಲ್ ಟ್ರ್ಯಾಕ್ ಯೂಟ್ಯೂಬ್​ನಲ್ಲಿ 10 ಲಕ್ಷಕ್ಕೂ ಅಧಿಕ ವೀವ್ಸ್ ಪಡೆದುಕೊಂಡಿದೆ.

ಇದನ್ನೂ ಓದಿ:ಮೆಗಾಸ್ಟಾರ್ ಚಿರಂಜೀವಿಗೆ ಪದ್ಮವಿಭೂಷಣ ಪ್ರಶಸ್ತಿ, ಧನ್ಯವಾದ ಹೇಳಿದ ನಟ

ತನ್ನ ಪ್ರಮೋಷನ್ ಕಂಟೆಂಟ್ ನಿಂದಲೇ ಈಗಾಗಲೇ ಸದ್ದು ಮಾಡುತ್ತಿರುವ ‘ಆರಾಮ ಅರವಿಂದ ಸ್ವಾಮಿ’ ಸಿನಿಮಾಗೆ ಅಭಿಷೇಕ್ ಶೆಟ್ಟಿ ಆಕ್ಷನ್ ಕಟ್ ಹೇಳಿದ್ದಾರೆ. ‘ನಮ್ ಗಣಿ ಬಿಕಾಂ ಪಾಸ್’, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಸಿನಿಮಾ ಇದು. ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ‘ಆರಾಮ ಅರವಿಂದ ಸ್ವಾಮಿ’ ಚಿತ್ರೀಕರಣ ಮುಗಿದಿದ್ದು ಬಿಡುಗಡೆಗೆ ಸಜ್ಜಾಗಿದೆ.

‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವೈವಿಬಿ ಶಿವಸಾಗರ್ ಛಾಯಾಗ್ರಹಣ, ಉಮೇಶ್ ಆರ್ ಬಿ ಸಂಕಲನ ಚಿತ್ರಕ್ಕಿದೆ. ಆದಷ್ಟು ಶೀಘ್ರವೇ ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ