AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಸಿನಿಮಾಕ್ಕೆ ಹಣಕಾಸಿನ ಸಮಸ್ಯೆ, ವಿಎಫ್​​ಎಕ್ಸ್ ಮಾಡಲು ಹಣವಿಲ್ಲ

Megastar Chiranjeevi: ಚಿರಂಜೀವಿ ಅವರ ಈ ಹಿಂದಿನ ಸಿನಿಮಾ ಆಗಿರುವ ‘ಮನ ಶಂಕರ ವರ ಪ್ರಸಾದ್ ಗಾರು’ ದೊಡ್ಡ ಹಿಟ್ ಆಗಿದೆ. ಅವರ ಸಿನಿಮಾಗಳಿಗೆ ಬಂಡವಾಳ ಹೂಡಲು ನಿರ್ಮಾಪಕರು ಈಗಲೂ ಸಾಲುಗಟ್ಟಿ ನಿಂತಿದ್ದಾರೆ. ಆದರೆ ಇಂಥಹಾ ಮೆಗಾಸ್ಟಾರ್ ಸಿನಿಮಾಕ್ಕೆ ಈಗ ಹಣಕಾಸಿನ ಸಮಸ್ಯೆ ಎದುರಾಗಿದೆ. ಚಿರಂಜೀವಿ ‘ವಿಶ್ವಂಭರ’ ಸಿನಿಮಾನಲ್ಲಿ ನಟಿಸುತ್ತಿದ್ದು, ಸಿನಿಮಾ ಶುರುವಾಗಿ ಸಾಕಷ್ಟು ಸಮಯವಾಗಿದೆ. ಇದೀಗ ಸಿನಿಮಾಕ್ಕೆ ಹಣಕಾಸಿನ ಸಮಸ್ಯೆ ಎದುರಾಗಿದೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ಸಿನಿಮಾದ ಬಿಡುಗಡೆ ವಿಳಂಬ ಆಗುತ್ತಿದೆಯಂತೆ.

ಚಿರಂಜೀವಿ ಸಿನಿಮಾಕ್ಕೆ ಹಣಕಾಸಿನ ಸಮಸ್ಯೆ, ವಿಎಫ್​​ಎಕ್ಸ್ ಮಾಡಲು ಹಣವಿಲ್ಲ
Vishwambhara
ಮಂಜುನಾಥ ಸಿ.
|

Updated on:Jun 26, 2026 | 12:03 PM

Share

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ಟಾಲಿವುಡ್​​ನ ಸ್ಟಾರ್ ನಟ, ವಯಸ್ಸು 70 ಆದರೂ ಈಗಲೂ ಸಿನಿಮಾಗಳಲ್ಲಿ ಬಿಡುವಿಲ್ಲದೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಚಿರಂಜೀವಿ ಅವರ ಈ ಹಿಂದಿನ ಸಿನಿಮಾ ಆಗಿರುವ ‘ಮನ ಶಂಕರ ವರ ಪ್ರಸಾದ್ ಗಾರು’ ದೊಡ್ಡ ಹಿಟ್ ಆಗಿದೆ. ಅವರ ಸಿನಿಮಾಗಳಿಗೆ ಬಂಡವಾಳ ಹೂಡಲು ನಿರ್ಮಾಪಕರು ಈಗಲೂ ಸಾಲುಗಟ್ಟಿ ನಿಂತಿದ್ದಾರೆ. ಆದರೆ ಇಂಥಹಾ ಮೆಗಾಸ್ಟಾರ್ ಸಿನಿಮಾಕ್ಕೆ ಈಗ ಹಣಕಾಸಿನ ಸಮಸ್ಯೆ ಎದುರಾಗಿದೆ. ಚಿರಂಜೀವಿ ‘ವಿಶ್ವಂಭರ’ ಸಿನಿಮಾನಲ್ಲಿ ನಟಿಸುತ್ತಿದ್ದು, ಸಿನಿಮಾ ಶುರುವಾಗಿ ಸಾಕಷ್ಟು ಸಮಯವಾಗಿದೆ. ಇದೀಗ ಸಿನಿಮಾಕ್ಕೆ ಹಣಕಾಸಿನ ಸಮಸ್ಯೆ ಎದುರಾಗಿದೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ಸಿನಿಮಾದ ಬಿಡುಗಡೆ ವಿಳಂಬ ಆಗುತ್ತಿದೆಯಂತೆ.

ಕಳೆದ ವರ್ಷವೇ ‘ವಿಶ್ವಂಭರ’ ಸಿನಿಮಾ ಸೆಟ್ಟೇರಿದೆ. ಸಿನಿಮಾವು ಫ್ಯಾಂಟಸಿ ಥ್ರಿಲ್ಲರ್ ಕತೆಯನ್ನು ಹೊಂದಿದ್ದು, ಚಿರಂಜೀವಿ ಅವರು ಈ ಹಿಂದೆ ನಟಿಸಿದ್ದ ‘ಅಂಜಿ’, ‘ಜಗದೇಕ ವೀರುಡು, ಅತಿಲೋಕ ಸುಂದರಿ’ ಮಾದರಿಯ ಕತೆಯನ್ನು ಈ ಸಿನಿಮಾ ಒಳಗೊಂಡಿತ್ತು. ಸಿನಿಮಾನಲ್ಲಿ ತ್ರಿಷಾ ಕೃಷ್ಣನ್ ನಾಯಕಿಯಾಗಿ ನಟಿಸುತ್ತಿದ್ದರು. ಆದರೆ ಸಿನಿಮಾಕ್ಕೆ ಇದೀಗ ಹಣಕಾಸಿನ ಸಮಸ್ಯೆ ಎದುರಾಗಿದೆಯಂತೆ.

ಇದನ್ನೂ ಓದಿ:ಚಿರಂಜೀವಿ ಸಿನಿಮಾಕ್ಕೆ ಹಣಕಾಸಿನ ಸಮಸ್ಯೆ, ವಿಎಫ್​​ಎಕ್ಸ್ ಮಾಡಲು ಹಣವಿಲ್ಲ

ಸಿನಿಮಾನಲ್ಲಿ ಅತಿಯಾದ ವಿಎಫ್​​ಎಕ್ಸ್ ಬಳಕೆಯ ಅವಶ್ಯಕತೆ ಇದ್ದು, ಗುಣಮಟ್ಟದ ವಿಎಫ್​​ಎಕ್ಸ್​​ಗೆ ದೊಡ್ಡ ಮೊತ್ತ ಖರ್ಚಾಗಿದೆಯಂತೆ. ಅಲ್ಲದೆ ಸಿನಿಮಾದ ನಿರ್ಮಾಣ ಜವಾಬ್ದಾರಿ ಹೊತ್ತಿರುವ ಯುವಿ ಕ್ರಿಯೇಷನ್ಸ್ ಈಗಾಗಲೇ ಕೆಲವು ಸಿನಿಮಾಗಳ ವಿಎಫ್​​ಎಕ್ಸ್ ಮೊತ್ತವನ್ನು ತೀರಿಸಿಲ್ಲವಂತೆ. ಅದರಲ್ಲಿ 100 ಕೋಟಿ ರೂಪಾಯಿ ಹಣ ‘ವಿಶ್ವಂಭರ’ ಸಿನಿಮಾದ್ದೆ ಬಾಕಿ ಇದೆ ಎನ್ನಲಾಗುತ್ತಿದೆ. ಸಿನಿಮಾಕ್ಕೆ ಮುಂಗಡವಾಗಿ ಒಟಿಟಿ ಒಪ್ಪಂದ ಮಾಡಿಕೊಳ್ಳಲು ನಿರ್ಮಾಣ ಸಂಸ್ಥೆ ಮುಂದಾಗಿದೆಯಾದರೂ ಅದು ವರ್ಕೌಟ್ ಆಗಿಲ್ಲ. ಒಟಿಟಿಗಳು ಕಡಿಮೆ ಮೊತ್ತದ ಆಫರ್ ನೀಡಿದ್ದರಿಂದ ಅದರಿಂದಲೂ ಹಿಂದೆ ಸರಿಯಲಾಗಿದೆ.

ಇದೀಗ ‘ವಿಶ್ವಂಭರ’ ಸಿನಿಮಾದ ಹಣಕಾಸು ಸಮಸ್ಯೆ ಬಗೆಹರಿಸಲು ಖುದ್ದು ಮೆಗಾಸ್ಟಾರ್ ಚಿರಂಜೀವಿ ಅವರನ್ನೇ ಸಹಾಯ ಕೇಳಲಾಗಿದೆ. ಚಿರಂಜೀವಿ ಅವರು ತಮ್ಮ ಸಂಭಾವನೆಯನ್ನು ಬಿಟ್ಟುಕೊಟ್ಟು, ಲಾಭ ಹಂಚಿಕೆ ಆಧಾರದಲ್ಲಿ ಸಹ ನಿರ್ಮಾಪಕ ಆಗಲು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ರಾಮ್ ಚರಣ್ ಅವರು ಸಹ ತಮ್ಮ ನಿರ್ಮಾಣ ಸಂಸ್ಥೆಯ ಮೂಲಕ ಸಹ ನಿರ್ಮಾಣಕ್ಕೂ ಒಪ್ಪಿಕೊಂಡಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಒಟ್ಟಾರೆ, ಸಿನಿಮಾವನ್ನು ಬಿಡುಗಡೆ ಮಾಡಲು ಸಾಧ್ಯವಾದಷ್ಟು ಪ್ರಯತ್ನಗಳನ್ನು ಮಾಡಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:17 am, Fri, 26 June 26

Follow Us
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್