AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಜಿಆರ್​​ To ದಳಪತಿ ವಿಜಯ್: ಸಿಎಂ ಕುರ್ಚಿಯಲ್ಲಿ ಕುಳಿತ ಬಳಿಕ ಪ್ರೇಕ್ಷಕರ ಮುಂದೆ ಬಂದ ನಾಯಕರು

ದಕ್ಷಿಣ ಭಾರತದ ಚಿತ್ರರಂಗ ಮತ್ತು ರಾಜಕೀಯಕ್ಕೆ ದಶಕಗಳ ಕಾಲದ ಅವಿನಾಭಾವ ಸಂಬಂಧವಿದೆ. 2026ರಲ್ಲಿ ದಳಪತಿ ವಿಜಯ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಅವರ ಕೊನೆಯ ಚಿತ್ರ 'ಜನ ನಾಯಗನ್' ಜುಲೈ 23ರಂದು ತೆರೆಗೆ ಬರುತ್ತಿದೆ. ವಿಜಯ್ ಹಾದಿಯಲ್ಲೇ ಈ ಹಿಂದೆ ಮುಖ್ಯಮಂತ್ರಿ ಪಟ್ಟಕ್ಕೇರಿದ ಎಂ.ಜಿ.ಆರ್, ಎನ್‌ಟಿಆರ್ ಮತ್ತು ಜಯಲಲಿತಾ ಅವರ ಜೀವನದಲ್ಲೂ ಸಿಎಂ ಆದ ಬಳಿಕ ಸಿನಿಮಾಗಳು ರಿಲೀಸ್ ಆದ ಸ್ವಾರಸ್ಯಕರ ಇತಿಹಾಸ ಇಲ್ಲಿದೆ.

ಎಂಜಿಆರ್​​ To ದಳಪತಿ ವಿಜಯ್: ಸಿಎಂ ಕುರ್ಚಿಯಲ್ಲಿ ಕುಳಿತ ಬಳಿಕ ಪ್ರೇಕ್ಷಕರ ಮುಂದೆ ಬಂದ ನಾಯಕರು
ವಿಜಯ್
ರಾಜೇಶ್ ದುಗ್ಗುಮನೆ
|

Updated on: Jul 22, 2026 | 1:05 PM

Share

ಮುಖ್ಯಾಂಶಗಳು

  • ಬೆಳ್ಳಿತೆರೆಯಿಂದ ಮುಖ್ಯಮಂತ್ರಿ ಗದ್ದುಗೆಗೆ
  • ಸಿಎಂ ಆದ ಬಳಿಕ ರಿಲೀಸ್ ಆದ ಸ್ಟಾರ್ ನಟರ ಕೊನೆಯ ಸಿನಿಮಾಗಳಿವು
  • ರಾಜಕೀಯ ಪಟ್ಟಾಭಿಷೇಕದ ಬಳಿಕವೂ ಬಾಕ್ಸ್ ಆಫೀಸ್ ಧೂಳೀಪಟ

ದಕ್ಷಿಣ ಭಾರತದಲ್ಲಿ ಚಿತ್ರರಂಗ ಮತ್ತು ರಾಜಕೀಯಕ್ಕೆ ದಶಕಗಳ ಕಾಲದ ಅವಿನಾಭಾವ ಸಂಬಂಧವಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಂತೂ ಸಿನಿ ತಾರೆಗಳು ಕೇವಲ ನಟರಾಗಿ ಉಳಿಯದೆ, ಜನರ ಆಶಾಕಿರಣವಾಗಿ, ರಾಜಕೀಯ ಶಕ್ತಿಯಾಗಿ ಬೆಳೆದ ಇತಿಹಾಸವಿದೆ. 2026ರಲ್ಲಿ ದಳಪತಿ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ, ಅವರ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ಜುಲೈ 23 ರಂದು ತೆರೆಗೆ ಬರುತ್ತಿದೆ. ಈ ಹಿಂದೆ ಮುಖ್ಯಮಂತ್ರಿ ಪಟ್ಟಕ್ಕೇರಿದ ಎಂ.ಜಿ.ಆರ್, ಎನ್‌ಟಿಆರ್ ಮತ್ತು ಜಯಲಲಿತಾ ಅವರ ಜೀವನದಲ್ಲೂ ಸಿಎಂ ಆದ ಬಳಿಕ ಅಥವಾ ಆ ಸಂಕ್ರಮಣ ಅವಧಿಯಲ್ಲಿ ಸಿನಿಮಾಗಳು ರಿಲೀಸ್ ಆದ ಸ್ವಾರಸ್ಯಕರ ಇತಿಹಾಸವಿದೆ.

ಮುಖ್ಯಮಂತ್ರಿಯಾದ ಬಳಿಕ ತೆರೆಕಂಡ ಸ್ಟಾರ್ ನಟರ ಚಿತ್ರಗಳು

ದಳಪತಿ ವಿಜಯ್ – ‘ಜನ ನಾಯಗನ್’ (2026)

ಈ ವರ್ಷ ನಡೆದ ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’. 2024ರ ಸೆಪ್ಟೆಂಬರ್‌ನಲ್ಲಿ ಅಧಿಕೃತವಾಗಿ ಘೋಷಣೆಯಾಗಿದ್ದ ಈ ಚಿತ್ರವು ಸೆನ್ಸಾರ್ ಮಂಡಳಿಯ ಸಮಸ್ಯೆಗಳು ಹಾಗೂ ಲೀಕ್ಸ್‌ ಕಾರಣದಿಂದ ತಡವಾಗಿತ್ತು. ಇದೀಗ ವಿಜಯ್ ಅವರು ಮುಖ್ಯಮಂತ್ರಿಯಾದ ಬಳಿಕ ಜುಲೈ 23ರಂದು ಈ ಚಿತ್ರ ಅದ್ಧೂರಿಯಾಗಿ ತೆರೆಕಾಣುತ್ತಿದ್ದು, ರಾಜಕೀಯವಾಗಿ ಮತ್ತು ಸಿನಿಮೀಯವಾಗಿ ಭಾರಿ ಸಂಚಲನ ಮೂಡಿಸಿದೆ.

ಎಂ. ಜಿ. ರಾಮಚಂದ್ರನ್

ಭಾರತೀಯ ರಾಜಕಾರಣದಲ್ಲಿ ಸಿನಿಮಾ ವರ್ಚಸ್ಸನ್ನು ಯಶಸ್ವಿಯಾಗಿ ಬಳಸಿ ಸಿಎಂ ಆದ ಮೊದಲ ಸೂಪರ್‌ಸ್ಟಾರ್ ಎಂ.ಜಿ.ಆರ್. 1977ರಲ್ಲಿ ಅವರು ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ ತೆರೆಕಂಡ ಮೊದಲ ಸಿನಿಮಾ ಎಂದರೆ ಅದು ‘ಇಂದ್ರು ಪೋಲ್ ಎಂದ್ರು ವಾಳಗ. 1978ರಲ್ಲಿ ‘ಮಧುರೈಯೈ ಮೀಟ್ಟ ಸುಂದರಪಾಂಡಿಯನ್’ ಚಿತ್ರ ಬಿಡುಗಡೆಯಾಯಿತು. ಈ ಚಿತ್ರದ ಬಹುತೇಕ ಚಿತ್ರೀಕರಣ ಅವರು ಸಿಎಂ ಆಗುವ ಮುನ್ನವೇ ಮುಕ್ತಾಯಗೊಂಡಿತ್ತು. ಸಿಎಂ ಆದ ಬಳಿಕ ಅವರು ಸಿನಿಮಾ ಮಾಡಿಲ್ಲ.

ಎನ್. ಟಿ. ರಾಮರಾವ್

ತೆಲುಗು ಆತ್ಮಗೌರವದ ಮುಖವಾಡವಾಗಿ ಮೂಡಿಬಂದವರು ಎನ್‌ಟಿಆರ್. 1984ರಲ್ಲಿ ಅವರು ಸಿಎಂ ಆದರು. ಅವರು ಮುಖ್ಯಮಂತ್ರಿಯಾದ ಬಳಿಕ ‘ಶ್ರೀಮದ್ವಿರಾಟ್ ವೀರಬ್ರಹ್ಮೇಂದ್ರ ಸ್ವಾಮಿ ಚರಿತ್ರೆ’ ಸಿನಿಮಾ ತೆರೆಗೆ ಬಂತು. ಸಿಎಂ ಆಗುವ ಮುನ್ನವೇ ಈ ಚಿತ್ರದ ಶೂಟಿಂಗ್ ಆರಂಭಿಸಿದ್ದರೂ, ಚಿತ್ರ ಸಂಪೂರ್ಣವಾಗಿ ಪ್ರೇಕ್ಷಕರ ಮುಂದೆ ಬಂದದ್ದು ಅವರು ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆಯೇ ಎಂಬುದು ವಿಶೇಷ.

ಇದನ್ನೂ ಓದಿ: ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ದೊಡ್ಡ ಸೀಕ್ರೆಟ್ ರಿವೀಲ್

ಜೆ. ಜಯಲಲಿತಾ

ನಟನೆಯಿಂದ ರಾಜಕೀಯಕ್ಕೆ ಬಂದು ತಮಿಳುನಾಡಿನ ಜನರ ‘ಅಮ್ಮ’ ಆಗಿ ಗುರುತಿಸಿಕೊಂಡವರು ಜಯಲಲಿತಾ. ಇವರು 1980ರ ಸುಮಾರಿಗೆ ತಮ್ಮ ಪೂರ್ಣಾವಧಿ ನಟನಾ ವೃತ್ತಿಗೆ ಬ್ರೇಕ್ ಹಾಕಿದ್ದರು. ಅವರು ರಾಜಕೀಯ ನಾಯಕಿಯಾಗಿ, ಮುಖ್ಯಮಂತ್ರಿಯಾದ ಬಳಿಕ ‘ನೀಂಗ ನಲ್ಲ ಇರುಕ್ಕನುಮ್’ ಎಂಬ ಚಿತ್ರದಲ್ಲಿ ವಿಶೇಷ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದರಲ್ಲಿ ಸಿಎಂ ಪಾತ್ರವನ್ನೇ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ