AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಹೋಟೆಲ್ ಆರಂಭಿಸಿದ ಮೈಕಲ್ ಅಜಯ್; ಬಿಗ್ ಬಾಸ್ ಮಂದಿಯ ಬೆಂಬಲ

ಬೆಂಗಳೂರಿನ ಎಚ್​​ಎಸ್​ಆರ್ ಲೇಔಟ್​ನಲ್ಲಿ ಮೈಕಲ್ ಅಜಯ್ ಫುಡ್ ಟ್ರಕ್ ಹೊಂದಿದ್ದಾರೆ. ಇಲ್ಲಿ ವಿವಿಧ ರೀತಿಯ ಬರ್ಗರ್​​ನ ಅವರು ತಯಾರಿಸುತ್ತಾರೆ. ಮನೆಯಲ್ಲೇ ತಯಾರಿಸಿದ ಕೆಚಪ್​ಗಳನ್ನು ಈ ಬರ್ಗರ್ ತಯಾರಿಸಲು ಬಳಕೆ ಮಾಡುತ್ತಾರೆ ಅನ್ನೋದು ವಿಶೇಷ.

ಹೊಸ ಹೋಟೆಲ್ ಆರಂಭಿಸಿದ ಮೈಕಲ್ ಅಜಯ್; ಬಿಗ್ ಬಾಸ್ ಮಂದಿಯ ಬೆಂಬಲ
ಹೊಸ ಹೋಟೆಲ್ ಆರಂಭಿಸಿದ ಮೈಕಲ್ ಅಜಯ್; ಬಿಗ್ ಬಾಸ್ ಮಂದಿಯ ಬೆಂಬಲ
ರಾಜೇಶ್ ದುಗ್ಗುಮನೆ
|

Updated on:Jun 28, 2024 | 2:27 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿ ಸಾಕಷ್ಟು ಜನಪ್ರಿಯತೆ ಪಡೆದರು ಮೈಕಲ್ ಅಜಯ್ ಅವರು. ‘ಬಿಗ್ ಬಾಸ್​’ಗೆ ಎಂಟ್ರಿ ಪಡೆಯುವುದಕ್ಕೂ ಮೊದಲು ಅವರು ಮಾಡೆಲ್ ಆಗಿದ್ದರು. ಈಗ ಅವರು ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ. ಈಗ ಅವರು ಹೋಟೆಲ್ ಒಂದನ್ನು ಆರಂಭಿಸುತ್ತಿದ್ದಾರೆ. ಅದರ ಉದ್ಘಾಟನೆ ನಡೆಯುತ್ತಿದೆ. ಇದಕ್ಕೆ ಬಿಗ್ ಬಾಸ್​​ನ ವಿನಯ್ ಗೌಡ, ಕಾರ್ತಿಕ್ ಮಹೇಶ್ ಮೊದಲಾದವರು ಭಾಗಿ ಆಗುತ್ತಿದ್ದಾರೆ.

ಬೆಂಗಳೂರಿನ ಎಚ್​​ಎಸ್​ಆರ್ ಲೇಔಟ್​ನಲ್ಲಿ ಮೈಕಲ್ ಅವರು ಫುಡ್ ಟ್ರಕ್ ಹೊಂದಿದ್ದಾರೆ. ಇಲ್ಲಿ ವಿವಿಧ ರೀತಿಯ ಬರ್ಗರ್​​ನ ಅವರು ತಯಾರಿಸುತ್ತಾರೆ. ಮನೆಯಲ್ಲೇ ತಯಾರಿಸಿದ ಕೆಚಪ್​ಗಳನ್ನು ಈ ಬರ್ಗರ್ ತಯಾರಿಸಲು ಬಳಕೆ ಮಾಡುತ್ತಾರೆ ಅನ್ನೋದು ವಿಶೇಷ. ಮೈಕಲ್ ಅವರು ಫಿಟ್ನೆಸ್ ಫ್ರೀಕ್. ಈ ಕಾರಣದಿಂದಲೇ ಅವರು ತಯಾರಿಸೋ ಬರ್ಗರ್​ನಲ್ಲಿ ಮೈದಾ ಬಳಕೆ ಆಗದಂತೆ ನೋಡಿಕೊಳ್ಳುತ್ತಿದ್ದಾರೆ. ಈ ಬರ್ಗರ್​ ಸಂಪೂರ್ಣ ಆರೋಗ್ಯಕರ ಅನ್ನೋದು ಅವರ ಹೇಳಿಕೆ.

ಈಗ ಇದೇ ಫುಡ್​ಟ್ರಕ್ ಸಮೀಪ್ ಬರ್ಗರ್ ಶಾಪ್ ಒಂದನ್ನು ಓಪನ್ ಮಾಡುತ್ತಿದ್ದಾರೆ. ಇದಕ್ಕೆ ಅವರು BYOB ಎಂದು ಹೆಸರು ಇಟ್ಟಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಈ ಶಾಪ್ ಓಪನ್ ಇರಲಿದೆ. ಇದರ ಉದ್ಘಾಟನೆ ಇಂದು (ಜೂನ್ 28) ಸಂಜೆ 5 ಗಂಟೆಗೆ ನಡೆಯಲಿದೆ. ವಿನಯ್ ಗೌಡ, ಕಾರ್ತಿಕ್ ಮಹೇಶ್, ಸ್ನೇಹಿತ್, ನೀತು ಮೊದಲಾದವರು ಈ ಹೋಟೆಲ್ ಉದ್ಘಾಟನೆಗೆ ಆಗಮಿಸಲಿದ್ದಾರೆ. ಅವರ ಬೆಂಬಲ ಸಿಗುತ್ತಿರುವುದರಿಂದ ಮೈಕಲ್ ಖುಷಿಯಾಗಿದ್ದಾರೆ.

ಇದನ್ನೂ ಓದಿ:  ಸಿನಿಮಾದಲ್ಲಿ ಒಟ್ಟಾಗಿ ನಟಿಸಲಿದ್ದಾರೆ ವಿನಯ್-ಮೈಕಲ್

ಮೈಕಲ್ ಅವರು ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ‘ಡೆಡ್ಲಿ ಸೋಮ’ ಖ್ಯಾತಿಯ ಆದಿತ್ಯ ಅವರು ‘ಕಿಲ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಇದರಲ್ಲಿ ಮೈಕಲ್ ಅಜಯ್ ಅವರು ವಿಲನ್ ಪಾತ್ರ ಮಾಡುತ್ತಿದ್ದಾರೆ. ಇನ್ನೂ ಹಲವು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಅಳೆದು ತೂಗಿ ಅವರು ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:22 pm, Fri, 28 June 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!