AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಹೋಟೆಲ್ ಆರಂಭಿಸಿದ ಮೈಕಲ್ ಅಜಯ್; ಬಿಗ್ ಬಾಸ್ ಮಂದಿಯ ಬೆಂಬಲ

ಬೆಂಗಳೂರಿನ ಎಚ್​​ಎಸ್​ಆರ್ ಲೇಔಟ್​ನಲ್ಲಿ ಮೈಕಲ್ ಅಜಯ್ ಫುಡ್ ಟ್ರಕ್ ಹೊಂದಿದ್ದಾರೆ. ಇಲ್ಲಿ ವಿವಿಧ ರೀತಿಯ ಬರ್ಗರ್​​ನ ಅವರು ತಯಾರಿಸುತ್ತಾರೆ. ಮನೆಯಲ್ಲೇ ತಯಾರಿಸಿದ ಕೆಚಪ್​ಗಳನ್ನು ಈ ಬರ್ಗರ್ ತಯಾರಿಸಲು ಬಳಕೆ ಮಾಡುತ್ತಾರೆ ಅನ್ನೋದು ವಿಶೇಷ.

ಹೊಸ ಹೋಟೆಲ್ ಆರಂಭಿಸಿದ ಮೈಕಲ್ ಅಜಯ್; ಬಿಗ್ ಬಾಸ್ ಮಂದಿಯ ಬೆಂಬಲ
ಹೊಸ ಹೋಟೆಲ್ ಆರಂಭಿಸಿದ ಮೈಕಲ್ ಅಜಯ್; ಬಿಗ್ ಬಾಸ್ ಮಂದಿಯ ಬೆಂಬಲ
ರಾಜೇಶ್ ದುಗ್ಗುಮನೆ
|

Updated on:Jun 28, 2024 | 2:27 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿ ಸಾಕಷ್ಟು ಜನಪ್ರಿಯತೆ ಪಡೆದರು ಮೈಕಲ್ ಅಜಯ್ ಅವರು. ‘ಬಿಗ್ ಬಾಸ್​’ಗೆ ಎಂಟ್ರಿ ಪಡೆಯುವುದಕ್ಕೂ ಮೊದಲು ಅವರು ಮಾಡೆಲ್ ಆಗಿದ್ದರು. ಈಗ ಅವರು ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ. ಈಗ ಅವರು ಹೋಟೆಲ್ ಒಂದನ್ನು ಆರಂಭಿಸುತ್ತಿದ್ದಾರೆ. ಅದರ ಉದ್ಘಾಟನೆ ನಡೆಯುತ್ತಿದೆ. ಇದಕ್ಕೆ ಬಿಗ್ ಬಾಸ್​​ನ ವಿನಯ್ ಗೌಡ, ಕಾರ್ತಿಕ್ ಮಹೇಶ್ ಮೊದಲಾದವರು ಭಾಗಿ ಆಗುತ್ತಿದ್ದಾರೆ.

ಬೆಂಗಳೂರಿನ ಎಚ್​​ಎಸ್​ಆರ್ ಲೇಔಟ್​ನಲ್ಲಿ ಮೈಕಲ್ ಅವರು ಫುಡ್ ಟ್ರಕ್ ಹೊಂದಿದ್ದಾರೆ. ಇಲ್ಲಿ ವಿವಿಧ ರೀತಿಯ ಬರ್ಗರ್​​ನ ಅವರು ತಯಾರಿಸುತ್ತಾರೆ. ಮನೆಯಲ್ಲೇ ತಯಾರಿಸಿದ ಕೆಚಪ್​ಗಳನ್ನು ಈ ಬರ್ಗರ್ ತಯಾರಿಸಲು ಬಳಕೆ ಮಾಡುತ್ತಾರೆ ಅನ್ನೋದು ವಿಶೇಷ. ಮೈಕಲ್ ಅವರು ಫಿಟ್ನೆಸ್ ಫ್ರೀಕ್. ಈ ಕಾರಣದಿಂದಲೇ ಅವರು ತಯಾರಿಸೋ ಬರ್ಗರ್​ನಲ್ಲಿ ಮೈದಾ ಬಳಕೆ ಆಗದಂತೆ ನೋಡಿಕೊಳ್ಳುತ್ತಿದ್ದಾರೆ. ಈ ಬರ್ಗರ್​ ಸಂಪೂರ್ಣ ಆರೋಗ್ಯಕರ ಅನ್ನೋದು ಅವರ ಹೇಳಿಕೆ.

ಈಗ ಇದೇ ಫುಡ್​ಟ್ರಕ್ ಸಮೀಪ್ ಬರ್ಗರ್ ಶಾಪ್ ಒಂದನ್ನು ಓಪನ್ ಮಾಡುತ್ತಿದ್ದಾರೆ. ಇದಕ್ಕೆ ಅವರು BYOB ಎಂದು ಹೆಸರು ಇಟ್ಟಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಈ ಶಾಪ್ ಓಪನ್ ಇರಲಿದೆ. ಇದರ ಉದ್ಘಾಟನೆ ಇಂದು (ಜೂನ್ 28) ಸಂಜೆ 5 ಗಂಟೆಗೆ ನಡೆಯಲಿದೆ. ವಿನಯ್ ಗೌಡ, ಕಾರ್ತಿಕ್ ಮಹೇಶ್, ಸ್ನೇಹಿತ್, ನೀತು ಮೊದಲಾದವರು ಈ ಹೋಟೆಲ್ ಉದ್ಘಾಟನೆಗೆ ಆಗಮಿಸಲಿದ್ದಾರೆ. ಅವರ ಬೆಂಬಲ ಸಿಗುತ್ತಿರುವುದರಿಂದ ಮೈಕಲ್ ಖುಷಿಯಾಗಿದ್ದಾರೆ.

ಇದನ್ನೂ ಓದಿ:  ಸಿನಿಮಾದಲ್ಲಿ ಒಟ್ಟಾಗಿ ನಟಿಸಲಿದ್ದಾರೆ ವಿನಯ್-ಮೈಕಲ್

ಮೈಕಲ್ ಅವರು ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ‘ಡೆಡ್ಲಿ ಸೋಮ’ ಖ್ಯಾತಿಯ ಆದಿತ್ಯ ಅವರು ‘ಕಿಲ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಇದರಲ್ಲಿ ಮೈಕಲ್ ಅಜಯ್ ಅವರು ವಿಲನ್ ಪಾತ್ರ ಮಾಡುತ್ತಿದ್ದಾರೆ. ಇನ್ನೂ ಹಲವು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಅಳೆದು ತೂಗಿ ಅವರು ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:22 pm, Fri, 28 June 24

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್