AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕಲ್ ಜಾಕ್ಸನ್ ಸಾಯುವಾಗ ಇತ್ತು ಬರೋಬ್ಬರಿ 3,700 ಕೋಟಿ ರೂಪಾಯಿ ಸಾಲ

ಅಮೆರಿಕದ ಡ್ಯಾನ್ಸರ್ ಮೈಕಲ್ ಜಾಕ್ಸನ್ ಸದಾ ಸುದ್ದಿಯಲ್ಲಿ ಇರುತ್ತಿದ್ದರು. ಅವರು ಮಾಡುತ್ತಿದ್ದ ಡ್ಯಾನ್ಸ್ ಸಾಕಷ್ಟು ಗಮನ ಸೆಳೆಯುತ್ತಿತ್ತು. ಅವರು ಮಾಡಿಕೊಂಡ ಸಾಲ ಬರೋಬ್ಬರಿ 3700 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಪೈಕಿ ಕೆಲವು ಹೆಚ್ಚಿನ ಬಡ್ಡಿ ಮೊತ್ತಕ್ಕೆ ಪಡೆದ ಸಾಲವಾಗಿದೆ.

ಮೈಕಲ್ ಜಾಕ್ಸನ್ ಸಾಯುವಾಗ ಇತ್ತು ಬರೋಬ್ಬರಿ 3,700 ಕೋಟಿ ರೂಪಾಯಿ ಸಾಲ
ಮೈಕಲ್ ಜಾಕ್ಸನ್ ಸಾಯುವಾಗ ಇತ್ತು ಬರೋಬ್ಬರಿ 3,700 ಕೋಟಿ ರೂಪಾಯಿ ಸಾಲ
ರಾಜೇಶ್ ದುಗ್ಗುಮನೆ
|

Updated on: Jun 29, 2024 | 12:28 PM

Share

ಮೈಕಲ್ ಜಾಕ್ಸನ್ ಅವರು ಡ್ಯಾನ್ಸ್ ಲೋಕದಲ್ಲಿ ಹೊಸ ಅಲೆಯನ್ನೇ ಸೃಷ್ಟಿ ಮಾಡಿದವರು. ಅವರು 2009ರಲ್ಲಿ ಮೃತಪಟ್ಟರು. ಅವರು ಸಾಯುವಾಗ ಒಂದಲ್ಲ, ಎರಡಲ್ಲ ಬರೋಬ್ಬರಿ 3700 ಕೋಟಿ ರೂಪಾಯಿ ಸಾಲ ಇತ್ತು ಎಂಬುದು ಈಗ ರಿವೀಲ್ ಆಗಿದೆ. ಈ ವಿಚಾರ ಕೇಳಿ ಅನೇಕರಿಗೆ ಶಾಕ್ ಎನಿಸಿದೆ.

ಮೈಕಲ್ ಜಾಕ್ಸನ್ ಅವರು ಸದಾ ಸುದ್ದಿಯಲ್ಲಿ ಇರುತ್ತಿದ್ದರು. ಅವರು ಮಾಡುತ್ತಿದ್ದ ಡ್ಯಾನ್ಸ್ ಸಾಕಷ್ಟು ಗಮನ ಸೆಳೆಯುತ್ತಿತ್ತು. ಅವರು ಮಾಡಿಕೊಂಡ ಸಾಲ ಬರೋಬ್ಬರಿ 500 ಮಿಲಿಯನ್ ಡಾಲರ್. ಅಂದರೆ 3700 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಪೈಕಿ ಕೆಲವು ಹೆಚ್ಚಿನ ಬಡ್ಡಿ ಮೊತ್ತಕ್ಕೆ ಪಡೆದ ಸಾಲವಾಗಿದೆ.

ಮೈಕಲ್ ಜಾಕ್ಸನ್ ಅವರ ಮೂವರು ಮಕ್ಕಳು ಪ್ಯಾರಿಸ್, ಪ್ರಿನ್ಸ್, ಬಿಗಿ ಹಾಗೂ ಪತ್ನಿ ಕ್ಯಾಥರೀನ್ ಅವರಿಗೆ ಈಗ ಮೈಕಲ್ ಜಾಕ್ಸನ್​ ಟ್ರಸ್ಟ್​ನಿಂದ ಯಾವುದೇ ಹಣ ಸಿಗುತ್ತಿಲ್ಲ. ಈ ಪ್ರಕರಣ ಪರಿಹಾರ ಆಗುವವರೆಗೆ ಹಣ ನೀಡದೇ ಇರಲು ನಿರ್ಧರಿಸಲಾಗಿದೆ. ಆದರೆ, ಮೈಕಲ್ ಜಾಕ್ಸನ್ ಕುಟುಂಬ ಈ ವಿಚಾರವನ್ನು ಅಲ್ಲಗಳೆದಿದೆ. ತಮಗೆ ಇನ್ನೂ ಟ್ರಸ್ಟ್​ನಿಂದ ಹಣ ಬರುತ್ತಿದೆ ಎಂದು ಹೇಳಿಕೊಂಡಿದೆ.

ಇದನ್ನೂ ಓದಿ: ಬರೋಬ್ಬರಿ 68 ಲಕ್ಷ ರೂಪಾಯಿಗೆ ಮಾರಾಟವಾಯ್ತು ಮೈಕಲ್ ಜಾಕ್ಸನ್ ಧರಿಸುತ್ತಿದ್ದ ಟೋಪಿ

ಮೈಕಲ್ ಜಾಕ್ಸನ್ ಅವರು ಅಮೆರಿಕದ ಗಾಯಕ, ಹಾಡು ಬರಹಗಾರ, ಡ್ಯಾನ್ಸರ್. ಅವರು ಕಿಂಗ್ ಆಫ್ ಪಾಪ್ ಎಂದೇ ಫೇಮಸ್ ಆಗಿದ್ದರು. ಅವರ ಮೂನ್​ವಾಕ್​ಗೆ ಎಲ್ಲರೂ ಫಿದಾ ಆಗಿದ್ದರು. 2009ರ ಜೂನ್ 25ರಂದು ಅವರು ನಿಧನ ಹೊಂದಿದರು. ಅವರು ಹಲವು ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದರು ಎಂದು ಕೂಡ ವರದಿ ಆಗಿತ್ತು.

ಟೋಪಿ ಮಾರಾಟ

ಮೈಕಲ್ ಜಾಕ್ಸನ್ ಅವರು ಒಳ್ಳೆಯ ಮೂನ್ ವಾಕ್ ಮಾಡುತ್ತಿದ್ದರು. ಅಷ್ಟೇ ಅಲ್ಲ, ಅವರು ಬಳಕೆ ಮಾಡುತ್ತಿದ್ದ ಟೋಪಿ ಕೂಡ ಗಮನ ಸೆಳೆದಿತ್ತು. ಕಳೆದ ವರ್ಷ ಪ್ಯಾರಿಸ್​ನಲ್ಲಿ ಮೈಕಲ್ ಜಾಕ್ಸನ್ ಟೋಪಿಯನ್ನು ಹರಾಜಿಗೆ ಇಡಲಾಗಿತ್ತು. ಈ ಟೋಪಿ ಬರೋಬ್ಬರಿ 68 ಲಕ್ಷ ರೂಪಾಯಿಗೆ ಹರಾಜಾಗಿದೆ. ಈ ಮೊತ್ತ ಕೇಳಿ ಅನೇಕರಿಗೆ ಶಾಕ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ