AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಲೆಂಟ್ ಆಗಿ ಬಂದು ಬಾಕ್ಸ್ ಆಫೀಸ್ ಡಾಮಿನೇಟ್ ಮಾಡಿದ ‘ಮಿರಾಯಿ’; ಅಬ್ಬರದ ಕಲೆಕ್ಷನ್

ತೇಜ್ ಸಜ್ಜಾ ಅಭಿನಯದ ‘ಮಿರಾಯಿ’ ಚಿತ್ರವು ಬಾಕ್ಸ್ ಆಫೀಸ್​ನಲ್ಲಿ ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಮೂರು ದಿನಗಳಲ್ಲಿ 44.75 ಕೋಟಿ ರೂಪಾಯಿಗಳನ್ನು ಗಳಿಸಿದೆ. ಕಾರ್ತಿಕ್ ಘಟ್ಟಮನೇನಿ ನಿರ್ದೇಶನದ ಈ ಫ್ಯಾಂಟಸಿ ಆ್ಯಕ್ಷನ್ ಅಡ್ವೆಂಚರ್ ಚಿತ್ರವು ತೆಲುಗು, ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಸೈಲೆಂಟ್ ಆಗಿ ಬಂದು ಬಾಕ್ಸ್ ಆಫೀಸ್ ಡಾಮಿನೇಟ್ ಮಾಡಿದ ‘ಮಿರಾಯಿ’; ಅಬ್ಬರದ ಕಲೆಕ್ಷನ್
ಮಿರಾಯಿ
ರಾಜೇಶ್ ದುಗ್ಗುಮನೆ
|

Updated on:Sep 15, 2025 | 2:52 PM

Share

2025ರ ಮೊದಲಾರ್ಧ ಸಿನಿಮಾ ರಂಗಕ್ಕೆ ಅಷ್ಟು ಆಶಾದಾಯಕವಾಗಿ ಇರಲಿಲ್ಲ. ಯಾವುದೇ ದೊಡ್ಡ ಸಿನಿಮಾಗಳು ಬಿಡುಗಡೆ ಕಂಡಿರಲಿಲ್ಲ. ಈ ರೀತಿ ರಿಲೀಸ್ ಆದ ಚಿತ್ರಗಳು ಸೋಲು ಕಂಡಿದ್ದವು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಜೂನ್ ಬಳಿಕ ಬರುತ್ತಿರೋ ಸಿನಿಮಾಗಳು ಯಶಸ್ಸು ಕಾಣುತ್ತಿವೆ. ಈಗ ಟಾಲಿವುಡ್​ನಲ್ಲಿ ‘ಮಿರಾಯಿ’ ಹೆಸರಿನ (Mirai Movie) ಸಿನಿಮಾ ಬಂದಿದೆ. ಈ ಚಿತ್ರ ಬಾಕ್ಸ್ ಆಫೀಸ್ ಡಾಮಿನೇಟ್ ಮಾಡಿದೆ. ಕೇವಲ ಮೂರು ದಿನಕ್ಕೆ ಭರ್ಜರಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ.

‘ಹನುಮಾನ್’ ಹೆಸರಿನ ಸಿನಿಮಾ ಮಾಡಿ ಫೇಮಸ್ ಆದವರು ತೇಜ್ ಸಜ್ಜ. ಆ ಬಳಿಕ ಅವರನ್ನು ಅದೇ ರೀತಿಯ ಪಾತ್ರಗಳು ಅರಸಿ ಬರುತ್ತಿವೆ. ಈಗ ಅವರು ‘ಮಿರಾಯಿ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಇದು ಫ್ಯಾಂಟಸಿ ಆ್ಯಕ್ಷನ್ ಅಡ್ವೆಂಚರ್ ಸಿನಿಮಾ. ಈ ಚಿತ್ರ 60 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗಿದ್ದು, ಮೂರೇ ದಿನಕ್ಕೆ ಉತ್ತಮ ಗಳಿಕೆ ಮಾಡಿದೆ.

‘ಮಿರಾಯಿ’ ಚಿತ್ರ ಮೂರು ದಿನದಲ್ಲಿ ಬಾಚಿಕೊಂಡಿದ್ದು ಬರೋಬ್ಬರಿ 44.75 ಕೋಟಿ ರೂಪಾಯಿ. ಶುಕ್ರವಾರ 13 ಕೋಟಿ ರೂಪಾಯಿ, ಶನಿವಾರ 15 ಕೋಟಿ ರೂಪಾಯಿ ಹಾಗೂ ಭಾನುವಾರ 16 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಕೇವಲ ಭಾರತದ ಬಾಕ್ಸ್ ಆಫೀಸ್ ಕಲೆಕ್ಷನ್. ವಿಶ್ವ ಬಾಕ್ಸ್ ಆಫೀಸ್ ಲೆಕ್ಕಾಚಾರವೂ ಸೇರಿದರೆ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ.

ಇದನ್ನೂ ಓದಿ
Image
ರೇಣುಕಾಸ್ವಾಮಿ ಪತ್ನಿ ಸಹನಾಗೆ ಸಿಗಲಿದೆ ಸರ್ಕಾರಿ ಕೆಲಸ; ಶಾಸಕನ ಭರವಸೆ
Image
ಕಿರುತೆರೆ ನಟಿಯ ಪತಿ​ಗೆ ಕಾರು ಅಪಘಾತ; ಪ್ರಾಣಾಪಾಯದಿಂದ ಜಸ್ಟ್ ಮಿಸ್
Image
ಶರಣ್-ತರುಣ್ ಸುಧೀರ್ ಗೆಳೆತನ ಎಂಥದ್ದು? ಯಾರೂ ಊಹಿಸಲೂ ಸಾಧ್ಯವಿಲ್ಲ
Image
ರಿಯಾಲಿಟಿ ಶೋಗೆ ಬರಲ್ಲ, ಬರಲ್ಲ ಅಂತ ಬಂದೇ ಬಿಟ್ರು ನಟಿ ಸುಧಾರಾಣಿ

‘ಮಿರಾಯಿ’ ಸಿನಿಮಾನ ಕಾರ್ತಿಕ್ ಘಟ್ಟಮನೇನಿ ನಿರ್ದೇಶನ ಮಾಡಿದ್ದರು. ಈ ಮೊದಲು ಅವರು ‘ಕಾರ್ತಿಕೇಯ’, ‘ಕಾರ್ತಿಕೇಯ 2’ ಅಂತಹ ಅಡ್ವೆಂಚರ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಮೂಲಕ ಅವರು ಗೆದ್ದು ಬೀಗಿದ್ದಾರೆ. ಅವರ ಐಡಿಯಾ ಪ್ರೇಕ್ಷಕರಿಗೆ ಇಷ್ಟ ಆಗಿದೆ. ‘ಮಿರಾಯಿ’ ಚಿತ್ರ ತೆಲುಗು ಜೊತೆಗೆ, ಕನ್ನಡ, ತಮಿಳು ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಿದೆ. ಬೆಂಗಳೂರಿನಲ್ಲೂ ಸಿನಿಮಾಗೆ ಒಳ್ಳೆಯ ಬುಕಿಂಗ್ ಆಗುತ್ತಿದೆ.

ಇದನ್ನೂ ಓದಿ: ತಿಂಗಳಿಗೊಂದು ಪ್ಯಾನ್ ಇಂಡಿಯಾ ಸಿನಿಮಾ; 2025ರ ಇನ್ನರ್ಧ ಧಮಾಕ 

‘ಮಿರಾಯಿ’ ಚಿತ್ರದ ಮೂಲಕ ತೇಜ್ ಸಜ್ಜಾ ಅವರು ಭೇಷ್ ಎನಿಸಿಕೊಂಡಿದ್ದಾರೆ. ಅವರು ‘ಹನುಮಾನ್’ ಚಿತ್ರದ ಸೀಕ್ವೆಲ್​ನಲ್ಲೂ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ರಿಷಬ್ ಶೆಟ್ಟಿ ಕೂಡ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:50 pm, Mon, 15 September 25

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ