AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Miss Universe 2021 Winner: ಕೊವಿಡ್​ ಸಂಬಂಧಿತ ಪ್ರಶ್ನೆಗೆ ಉತ್ತರಿಸಿ ಮಿಸ್​ ಯೂನಿವರ್ಸ್​ ಕಿರೀಟ ಮುಡಿಗೇರಿಸಿಕೊಂಡ ಆ್ಯಂಡ್ರಿಯಾ ಮೆಜಾ

Andrea Meza: ಮಿಸ್​ ಯೂನಿವರ್ಸ್​ ಸ್ಪರ್ಧೆಯ ಪ್ರಶ್ನೋತ್ತರ ಸುತ್ತಿನಲ್ಲಿ ಆ್ಯಂಡ್ರಿಯಾ ಮೆಜಾ ಅವರಿಗೆ ಕೊವಿಡ್​ ಸಂಬಂಧಿತ ಪ್ರಶ್ನೆ ಕೇಳಲಾಯಿತು. ‘ಒಂದು ವೇಳೆ ನೀವು ನಿಮ್ಮ ದೇಶದ ಲೀಡರ್​ ಆಗಿದ್ದರೆ, ಈ ಕೊವಿಡ್​ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತಿದ್ರಿ?’ ಎಂಬ ಪ್ರಶ್ನೆಗೆ ದಿಟ್ಟತನದಿಂದ ಆ್ಯಂಡ್ರಿಯಾ ಉತ್ತರಿಸಿದರು.

Miss Universe 2021 Winner: ಕೊವಿಡ್​ ಸಂಬಂಧಿತ ಪ್ರಶ್ನೆಗೆ ಉತ್ತರಿಸಿ ಮಿಸ್​ ಯೂನಿವರ್ಸ್​ ಕಿರೀಟ ಮುಡಿಗೇರಿಸಿಕೊಂಡ ಆ್ಯಂಡ್ರಿಯಾ ಮೆಜಾ
ಮಿಸ್ ಯೂನಿವರ್ಸ್ ಕಿರೀಟ ಮುಡಿಗೇರಿಸಿಕೊಂಡ ಆ್ಯಂಡ್ರಿಯಾ ಮೆಜಾ
ಮದನ್​ ಕುಮಾರ್​
|

Updated on: May 17, 2021 | 11:11 AM

Share

ಮೆಕ್ಸಿಕೋದ ಸುಂದರಿ ಆ್ಯಂಡಿಯಾ ಮೆಜಾ ಅವರು 69ನೇ ಮಿಸ್​ ಯೂನಿವರ್ಸ್​ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ವೃತ್ತಿಯಲ್ಲಿ ಸಾಫ್ಟ್​ವೇರ್​ ಇಂಜಿನಿಯರ್​ ಆಗಿರುವ ಅವರು ಫ್ಯಾಷನ್​ ಲೋಕದಲ್ಲಿ ಸಾಧನೆ ಮಾಡಿದ್ದಾರೆ. ಮಿಸ್​ ಯೂನಿವರ್ಸ್​ ಕಿರೀಟ ಪಡೆದ ಮೆಕ್ಸಿಕೋದ ಮೂರನೇ ಸುಂದರಿಯಾಗಿ ಆ್ಯಂಡಿಯಾ ಮೆಜಾ ಹೊರ ಹೊಮ್ಮಿದ್ದಾರೆ. ಅವರಿಗೆ ವಿಶ್ವಾದ್ಯಂತ ಕೋಟ್ಯಂತರ ಜನರಿಂದ ಅಭಿನಂದನೆಗಳು ಸಲ್ಲಿಕೆ ಆಗುತ್ತಿವೆ.

ಮಿಸ್​ ಯೂನಿವರ್ಸ್​ ಅಂತಿಮ ಸುತ್ತಿನ ಸ್ಪರ್ಧೆ ಮೇ 16ರಂದು ಫ್ಲೋರಿಡಾದಲ್ಲಿ ನೆರವೇರಿತು. ಬ್ರೆಜಿಲ್​ನ ಜೂಲಿಯಾ ಗಾಮಾ ಅವರು ಮೊದಲ ರನ್ನರ್​ ಅಪ್​ ಆಗಿ ಹೊರಹೊಮ್ಮಿದರು. ಪೆರುವಿನ ಜೆನಿಕ್​ ಮಸೆಟಾ ಅವರು ಎರಡನೇ ರನ್ನರ್​ ಅಪ್​ ಸ್ಥಾನ ಪಡೆದುಕೊಂಡರು. ಭಾರತದಿಂದ ಸ್ಪರ್ಧಿಸಿದ್ದ ಅಡ್ಲಿನ್​ ಕಾಸ್ಟಿಲಿನೋ ಮೂರನೇ ರನ್ನರ್​ ಅಪ್​ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಈ ಹಂತದವರೆಗೆ ಪೈಪೋಟಿ ನೀಡಿದ ಅಡ್ಲಿನ್​ ಕಾಸ್ಟಿಲಿನೋ ಅವರಿಗೂ ಅಭಿನಂದನೆ ಸಲ್ಲಿಸಲಾಗುತ್ತಿದೆ.

ಮಿಸ್​ ಯೂನಿವರ್ಸ್​ ಸ್ಪರ್ಧೆಯ ಪ್ರಶ್ನೋತ್ತರ ಸುತ್ತಿನಲ್ಲಿ ಆ್ಯಂಡ್ರಿಯಾ ಮೆಜಾ ಅವರಿಗೆ ಕೊವಿಡ್​ ಸಂಬಂಧಿತ ಪ್ರಶ್ನೆ ಕೇಳಲಾಯಿತು. ‘ಒಂದುವೇಳೆ ನೀವು ನಿಮ್ಮ ದೇಶದ ಲೀಡರ್​ ಆಗಿದ್ದರೆ, ಈ ಕೊವಿಡ್​ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತಿದ್ರಿ?’ ಎಂಬ ಪ್ರಶ್ನೆಗೆ ದಿಟ್ಟತನದಿಂದ ಆ್ಯಂಡ್ರಿಯಾ ಉತ್ತರಿಸಿದರು.

‘ಕೊವಿಡ್​ ನಿಯಂತ್ರಿಸಲು ನಿರ್ದಿಷ್ಟವಾದ ಕ್ರಮ ಯಾವುದೂ ಇಲ್ಲದ ಕಾರಣ, ಪರಿಸ್ಥಿತಿ ಕೈ ಮೀರುವ ಮುನ್ನವೇ ನಾನು ಲಾಕ್​ಡೌನ್​ ಮಾಡಿಸುತ್ತಿದ್ದೆ. ಯಾಕೆಂದರೆ ಈಗಾಗಲೇ ನಾವು ಅನೇಕ ಜೀವಗಳನ್ನು ಕಳೆದುಕೊಂಡಿದ್ದೇವೆ. ಅದನ್ನು ಸಹಿಸಲು ಸಾಧ್ಯವಿಲ್ಲ. ನಮ್ಮ ಜನರ ಕಾಳಜಿಯನ್ನು ನಾವು ಮಾಡಬೇಕು. ಪ್ರಾರಂಭದಲ್ಲಿಯೇ ಲಾಕ್​ಡೌನ್​ ಮಾಡುವ ಮೂಲಕ ನಾನು ಜನರ ರಕ್ಷಣೆ ಮಾಡುತ್ತಿದ್ದೆ’ ಎಂದು ಉತ್ತರಿಸಿದ ಆ್ಯಂಡ್ರಿಯಾ ಎಲ್ಲರ ಚಪ್ಪಾಳೆ ಪಡೆದುಕೊಂಡರು.

ಇದನ್ನೂ ಓದಿ:

Manya Singh ಉತ್ತರ ಪ್ರದೇಶದ ಆಟೋ ಚಾಲಕನ ಪುತ್ರಿಗೆ Miss India 2020 ರನ್ನರ್​ ಅಪ್ ‘ಮಾನ್ಯ’ತೆ!

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ