AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Miss Universe 2021 Winner: ಕೊವಿಡ್​ ಸಂಬಂಧಿತ ಪ್ರಶ್ನೆಗೆ ಉತ್ತರಿಸಿ ಮಿಸ್​ ಯೂನಿವರ್ಸ್​ ಕಿರೀಟ ಮುಡಿಗೇರಿಸಿಕೊಂಡ ಆ್ಯಂಡ್ರಿಯಾ ಮೆಜಾ

Andrea Meza: ಮಿಸ್​ ಯೂನಿವರ್ಸ್​ ಸ್ಪರ್ಧೆಯ ಪ್ರಶ್ನೋತ್ತರ ಸುತ್ತಿನಲ್ಲಿ ಆ್ಯಂಡ್ರಿಯಾ ಮೆಜಾ ಅವರಿಗೆ ಕೊವಿಡ್​ ಸಂಬಂಧಿತ ಪ್ರಶ್ನೆ ಕೇಳಲಾಯಿತು. ‘ಒಂದು ವೇಳೆ ನೀವು ನಿಮ್ಮ ದೇಶದ ಲೀಡರ್​ ಆಗಿದ್ದರೆ, ಈ ಕೊವಿಡ್​ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತಿದ್ರಿ?’ ಎಂಬ ಪ್ರಶ್ನೆಗೆ ದಿಟ್ಟತನದಿಂದ ಆ್ಯಂಡ್ರಿಯಾ ಉತ್ತರಿಸಿದರು.

Miss Universe 2021 Winner: ಕೊವಿಡ್​ ಸಂಬಂಧಿತ ಪ್ರಶ್ನೆಗೆ ಉತ್ತರಿಸಿ ಮಿಸ್​ ಯೂನಿವರ್ಸ್​ ಕಿರೀಟ ಮುಡಿಗೇರಿಸಿಕೊಂಡ ಆ್ಯಂಡ್ರಿಯಾ ಮೆಜಾ
ಮಿಸ್ ಯೂನಿವರ್ಸ್ ಕಿರೀಟ ಮುಡಿಗೇರಿಸಿಕೊಂಡ ಆ್ಯಂಡ್ರಿಯಾ ಮೆಜಾ
ಮದನ್​ ಕುಮಾರ್​
|

Updated on: May 17, 2021 | 11:11 AM

Share

ಮೆಕ್ಸಿಕೋದ ಸುಂದರಿ ಆ್ಯಂಡಿಯಾ ಮೆಜಾ ಅವರು 69ನೇ ಮಿಸ್​ ಯೂನಿವರ್ಸ್​ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ವೃತ್ತಿಯಲ್ಲಿ ಸಾಫ್ಟ್​ವೇರ್​ ಇಂಜಿನಿಯರ್​ ಆಗಿರುವ ಅವರು ಫ್ಯಾಷನ್​ ಲೋಕದಲ್ಲಿ ಸಾಧನೆ ಮಾಡಿದ್ದಾರೆ. ಮಿಸ್​ ಯೂನಿವರ್ಸ್​ ಕಿರೀಟ ಪಡೆದ ಮೆಕ್ಸಿಕೋದ ಮೂರನೇ ಸುಂದರಿಯಾಗಿ ಆ್ಯಂಡಿಯಾ ಮೆಜಾ ಹೊರ ಹೊಮ್ಮಿದ್ದಾರೆ. ಅವರಿಗೆ ವಿಶ್ವಾದ್ಯಂತ ಕೋಟ್ಯಂತರ ಜನರಿಂದ ಅಭಿನಂದನೆಗಳು ಸಲ್ಲಿಕೆ ಆಗುತ್ತಿವೆ.

ಮಿಸ್​ ಯೂನಿವರ್ಸ್​ ಅಂತಿಮ ಸುತ್ತಿನ ಸ್ಪರ್ಧೆ ಮೇ 16ರಂದು ಫ್ಲೋರಿಡಾದಲ್ಲಿ ನೆರವೇರಿತು. ಬ್ರೆಜಿಲ್​ನ ಜೂಲಿಯಾ ಗಾಮಾ ಅವರು ಮೊದಲ ರನ್ನರ್​ ಅಪ್​ ಆಗಿ ಹೊರಹೊಮ್ಮಿದರು. ಪೆರುವಿನ ಜೆನಿಕ್​ ಮಸೆಟಾ ಅವರು ಎರಡನೇ ರನ್ನರ್​ ಅಪ್​ ಸ್ಥಾನ ಪಡೆದುಕೊಂಡರು. ಭಾರತದಿಂದ ಸ್ಪರ್ಧಿಸಿದ್ದ ಅಡ್ಲಿನ್​ ಕಾಸ್ಟಿಲಿನೋ ಮೂರನೇ ರನ್ನರ್​ ಅಪ್​ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಈ ಹಂತದವರೆಗೆ ಪೈಪೋಟಿ ನೀಡಿದ ಅಡ್ಲಿನ್​ ಕಾಸ್ಟಿಲಿನೋ ಅವರಿಗೂ ಅಭಿನಂದನೆ ಸಲ್ಲಿಸಲಾಗುತ್ತಿದೆ.

ಮಿಸ್​ ಯೂನಿವರ್ಸ್​ ಸ್ಪರ್ಧೆಯ ಪ್ರಶ್ನೋತ್ತರ ಸುತ್ತಿನಲ್ಲಿ ಆ್ಯಂಡ್ರಿಯಾ ಮೆಜಾ ಅವರಿಗೆ ಕೊವಿಡ್​ ಸಂಬಂಧಿತ ಪ್ರಶ್ನೆ ಕೇಳಲಾಯಿತು. ‘ಒಂದುವೇಳೆ ನೀವು ನಿಮ್ಮ ದೇಶದ ಲೀಡರ್​ ಆಗಿದ್ದರೆ, ಈ ಕೊವಿಡ್​ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತಿದ್ರಿ?’ ಎಂಬ ಪ್ರಶ್ನೆಗೆ ದಿಟ್ಟತನದಿಂದ ಆ್ಯಂಡ್ರಿಯಾ ಉತ್ತರಿಸಿದರು.

‘ಕೊವಿಡ್​ ನಿಯಂತ್ರಿಸಲು ನಿರ್ದಿಷ್ಟವಾದ ಕ್ರಮ ಯಾವುದೂ ಇಲ್ಲದ ಕಾರಣ, ಪರಿಸ್ಥಿತಿ ಕೈ ಮೀರುವ ಮುನ್ನವೇ ನಾನು ಲಾಕ್​ಡೌನ್​ ಮಾಡಿಸುತ್ತಿದ್ದೆ. ಯಾಕೆಂದರೆ ಈಗಾಗಲೇ ನಾವು ಅನೇಕ ಜೀವಗಳನ್ನು ಕಳೆದುಕೊಂಡಿದ್ದೇವೆ. ಅದನ್ನು ಸಹಿಸಲು ಸಾಧ್ಯವಿಲ್ಲ. ನಮ್ಮ ಜನರ ಕಾಳಜಿಯನ್ನು ನಾವು ಮಾಡಬೇಕು. ಪ್ರಾರಂಭದಲ್ಲಿಯೇ ಲಾಕ್​ಡೌನ್​ ಮಾಡುವ ಮೂಲಕ ನಾನು ಜನರ ರಕ್ಷಣೆ ಮಾಡುತ್ತಿದ್ದೆ’ ಎಂದು ಉತ್ತರಿಸಿದ ಆ್ಯಂಡ್ರಿಯಾ ಎಲ್ಲರ ಚಪ್ಪಾಳೆ ಪಡೆದುಕೊಂಡರು.

ಇದನ್ನೂ ಓದಿ:

Manya Singh ಉತ್ತರ ಪ್ರದೇಶದ ಆಟೋ ಚಾಲಕನ ಪುತ್ರಿಗೆ Miss India 2020 ರನ್ನರ್​ ಅಪ್ ‘ಮಾನ್ಯ’ತೆ!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್