AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

Rashmika Mandanna: ಅಪ್​ಲೋಡ್​ ಮಾಡಿದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. 6 ಸಾವಿರಕ್ಕೂ ಅಧಿಕ ಜನರು ಕಮೆಂಟ್ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು
ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Mar 29, 2022 | 7:15 AM

Share

ಬಹುಭಾಷಾ ನಟಿಯಾಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸದಾ ಕಾಲ ಸುದ್ದಿಯಲ್ಲಿ ಇರುತ್ತಾರೆ. ಸಿನಿಮಾ, ವೈಯಕ್ತಿಕ ಜೀವನ, ಫಿಟ್ನೆಸ್​ (Fitness) ಹೀಗೆ ಒಂದಿಲ್ಲೊಂದು ವಿಚಾರಕ್ಕೆ ಅವರ ಬಗ್ಗೆ ಚರ್ಚೆ ಆಗುತ್ತಲೇ ಇರುತ್ತದೆ. ಈಗ ಅವರ ಹೊಸದೊಂದು ವಿಡಿಯೋ ವೈರಲ್​ ಆಗಿದೆ. ಸ್ವತಃ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಅದನ್ನು ನೋಡಿದ ಅಭಿಮಾನಿಗಳು (Rashmika Mandanna Fans) ವಾವ್​ ಎನ್ನುತ್ತಿದ್ದಾರೆ. ಅಷ್ಟಕ್ಕೂ ಅದರಲ್ಲಿ ಅಂಥದ್ದೇನಿದೆ? ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮಂದಣ್ಣ ಅವರು ಫಿಟ್ನೆಸ್​ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಅದಕ್ಕೆ ಈ ವಿಡಿಯೋ ಸಾಕ್ಷಿ ಒದಗಿಸುತ್ತಿದೆ. ನೋಡಲು ನಾಜೂಕಾಗಿ ಕಾಣುವ ರಶ್ಮಿಕಾ ಅವರು ವರ್ಕೌಟ್​ ವಿಚಾರ ಬಂದಾಗ ರಾಜಿ ಆಗುವವರಲ್ಲ. ತಾವು ಜಿಮ್​ನಲ್ಲಿ ಕಸರತ್ತು ನಡೆಸುತ್ತಿರುವ ಸಂದರ್ಭದ ವಿಡಿಯೋವನ್ನು ಅಭಿಮಾನಿಗಳಿಗಾಗಿ ಅವರು ಹಂಚಿಕೊಂಡಿದ್ದಾರೆ. ಹಲವು ಬಗೆಯ ವ್ಯಾಯಾಮವನ್ನು ಅವರು ಮಾಡಿದ್ದಾರೆ. ಅದರ ಝಲಕ್​ ಈ ವಿಡಿಯೋದಲ್ಲಿ ಇದೆ. ಅವರು ಯಾವ ಸಿನಿಮಾಗಾಗಿ ಈ ಪರಿ ತಯಾರಾಗುತ್ತಿದ್ದಾರೆ ಎಂಬುದು ಸದ್ಯಕ್ಕೆ ಬಹಿರಂಗ ಆಗಿಲ್ಲ. ಅಭಿಮಾನಿಗಳ ವಲಯದಲ್ಲಿ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.

ರಶ್ಮಿಕಾ ಮಂದಣ್ಣ ಈಗ ಪ್ಯಾನ್​ ಇಂಡಿಯಾ ನಟಿ. ಅಲ್ಲು ಅರ್ಜುನ್​ ಜೊತೆ ನಟಿಸಿದ ‘ಪುಷ್ಪ’ ಸಿನಿಮಾದಿಂದಾಗಿ ಅವರಿಗೆ ಇಂಥ ಟೈಟಲ್​ ಸಿಕ್ಕಿದೆ. ಹಾಗೆಯೇ ಅವರು ಬಾಲಿವುಡ್​ ಸಿನಿಮಾಗಳಲ್ಲೂ ನಟಿಸುತ್ತಿರುವುದರಿಂದ ಅವರ ಡಿಮ್ಯಾಂಡ್​ ಹೆಚ್ಚಿದೆ. ಸಿನಿಮಾ ಕೆಲಸಗಳ ಸಲುವಾಗಿ ರಶ್ಮಿಕಾ ಯಾವಾಗಲೂ ಬ್ಯುಸಿ ಆಗಿರುತ್ತಾರೆ. ಅದರ ನಡುವೆಯೂ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುವುದನ್ನು ತಪ್ಪಿಸುವುದಿಲ್ಲ. ಈ ವಿಚಾರದಲ್ಲಿ ಅವರು ಅಭಿಮಾನಿಗಳಿಗೆ ಮತ್ತು ಇತರೆ ಸೆಲೆಬ್ರಿಟಿಗಳಿಗೆ ಪ್ರೇರಣೆ ನೀಡುತ್ತಾರೆ.

ರಶ್ಮಿಕಾ ಅವರು ಯಾವೆಲ್ಲ ರೀತಿಯ ವರ್ಕೌಟ್​ ಮಾಡುತ್ತಾರೆ ಎಂಬುದರ ಸ್ಯಾಂಪಲ್​ ಈ 24 ಸೆಕೆಂಡ್​ಗಳ ಕಿರು ವಿಡಿಯೋದಲ್ಲಿದೆ. ಅಪ್​ಲೋಡ್​ ಮಾಡಿದ ಕೆಲವೇ ಗಂಟೆಗಳಲ್ಲಿ ಇದು 20 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. 6 ಸಾವಿರಕ್ಕೂ ಅಧಿಕ ಜನರು ಕಮೆಂಟ್ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ. ‘ನಿಮಗೆ ಈ ವರ್ಕೌಟ್​ ಇಷ್ಟ ಆಗಿದ್ದರೆ ಬೈಸೆಪ್ಸ್​ ಇಮೋಜಿಯನ್ನು ಕಮೆಂಟ್​ ಮಾಡಿ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರು ಜಿಮ್​ ಸಂಬಂಧಿಸಿದ ಫೋಟೋ ಮತ್ತು ವಿಡಿಯೋಗಳನ್ನು ಹೆಚ್ಚು ಹಂಚಿಕೊಳ್ಳುತ್ತಿದ್ದಾರೆ. ಕೆಲವೇ ದಿನದ ಹಿಂದೆ ಒಂದು ಹೊಸ ಫೋಟೋ ಅಪ್​ಲೋಡ್​ ಮಾಡಿಕೊಂಡು ತಮ್ಮ ಫಿಟ್ನೆಸ್​ ಸೀಕ್ರೆಟ್​ ಏನೆಂಬುದನ್ನು ವಿವರಿಸಿದ್ದರು.

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದ ಅವರು ಹೀಗೊಂದು ಕ್ಯಾಪ್ಷನ್​ ಬರೆದಿದ್ದರು. ‘ಈ ಫೋಟೋವನ್ನು ನಾನು ಪೋಸ್ಟ್​ ಮಾಡಬಹುದೋ ಇಲ್ಲವೋ ಗೊತ್ತಿಲ್ಲ. ನಿಮ್ಮಲ್ಲಿ ತುಂಬ ಜನರು ಇದನ್ನು ಇಷ್ಟಪಡುವುದಿಲ್ಲ. ನಿರಂತರ ಪ್ರಯತ್ನವೇ ನಿಮ್ಮ ಫಿಟ್ನೆಸ್​ ಗೋಲ್​ಗೆ ತುಂಬ ಮುಖ್ಯವಾದ ಅಂಶ. ವರ್ಕೌಟ್​, ಡಯೆಟ್​, ಆಲೋಚನೆಗಳು ಮತ್ತು ಜರ್ನಿ ನಿರಂತರವಾಗಿ ಇರಲಿ ಹಾಗೂ ಅದನ್ನು ಎಂಜಾಯ್ ಮಾಡಿ. ಸ್ವಲ್ಪ ಸಮಯದವರೆಗೆ ಅದು ಖುಷಿ ನೀಡದೇ ಇರಬಹುದು. ಆದರೆ ಅಭ್ಯಾಸವಾದ ಬಳಿಕ ನಿಮಗೆ ಅರ್ಥವಾಗುತ್ತದೆ’ ಎಂದು ರಶ್ಮಿಕಾ ಮಂದಣ್ಣ ಬರೆದುಕೊಂಡಿದ್ದರು.

ಬಾಲಿವುಡ್​ನಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’ ಹಾಗೂ ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ ಬೈ’ ಸಿನಿಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ಅಲ್ಲು ಅರ್ಜುನ್​ ಜೊತೆ ‘ಪುಷ್ಪ 2’ ಸಿನಿಮಾದಲ್ಲೂ ಅಭಿನಯಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಅವರ ಹವಾ ಹೆಚ್ಚುತ್ತಿದೆ. ಅದಕ್ಕೆ ತಕ್ಕಂತೆ ಅಭಿಮಾನಿ ಬಳಗವೂ ಹಿರಿದಾಗುತ್ತಿದೆ.

ಇದನ್ನೂ ಓದಿ:

Ex ಬಗ್ಗೆ ಮಾತು ಬೇಡ, Y ಬಗ್ಗೆ ಕೇಳಿ; ರಶ್ಮಿಕಾ ಯೂಟ್ಯೂಬ್​ ಚಾನೆಲ್​ ಶುರು; ಒಂದೇ ವಿಡಿಯೋಗೆ ಮುಗಿಬಿದ್ದ ಫ್ಯಾನ್ಸ್​

​ರಶ್ಮಿಕಾ ಮಂದಣ್ಣ ಕೊಟ್ಟ ಚಮಕ್​ ಕಂಡು ಹೌಹಾರಿದ ವರುಣ್​ ಧವನ್​; ವೈರಲ್​ ಆಗಿದೆ ಈ ವಿಡಿಯೋ

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?