AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೃಪ್ತಿ ಆಗುವಂತೆ ಬೆವರು ಹರಿಸಿ ವರ್ಕೌಟ್​ ಮಾಡಿದ ಬಳಿಕ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ

Rashmika Mandanna: ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ಡಿಮ್ಯಾಂಡ್​ ಇದೆ. ಆ ಬೇಡಿಕೆಗೆ ತಕ್ಕಂತೆಯೇ ಚಾರ್ಮ್​ ಉಳಿಸಿಕೊಳ್ಳಬೇಕಾದ ಚಾಲೆಂಜ್ ಅವರ ಮುಂದಿದೆ.

ತೃಪ್ತಿ ಆಗುವಂತೆ ಬೆವರು ಹರಿಸಿ ವರ್ಕೌಟ್​ ಮಾಡಿದ ಬಳಿಕ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on:May 21, 2022 | 8:14 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸಖತ್​ ಬ್ಯುಸಿ ಆಗಿದ್ದಾರೆ. ಅವರ ಕೈಯಲ್ಲಿ ಅನೇಕ ಸಿನಿಮಾಗಳಿಗೆ. ಹತ್ತಾರು ಹೊಸ ಹೊಸ ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಪ್ರತಿ ದಿನ ಅವರು ಒಂದಿಲ್ಲೊಂದು ಸಿನಿಮಾದ ಶೂಟಿಂಗ್​, ರಿಹರ್ಸಲ್​, ಡಬ್ಬಿಂಗ್​ ಇತ್ಯಾದಿ ಕೆಲಸಗಳಲ್ಲಿ ತೊಡಗಿಕೊಂಡಿರುತ್ತಾರೆ. ಜಾಹೀರಾತುಗಳಲ್ಲಿ ಕೂಡ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು, ಅವುಗಳ ಕೆಲಸದಲ್ಲೂ ಅವರು ಬ್ಯುಸಿ. ಹೀಗೆ ಎಷ್ಟೇ ಕಾರ್ಯದೊತ್ತಡ ಇದ್ದರೂ ಕೂಡ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುವುದು ತಪ್ಪಿಸುವುದಿಲ್ಲ. ಪ್ರತಿ ದಿನ ಅವರು ಅದಕ್ಕಾಗಿ ಸಮಯ ಮೀಸಲಿಡುತ್ತಾರೆ. ಜಿಮ್​ನಲ್ಲಿ ಇರುವ ಫೋಟೋವನ್ನು (Rashmika Mandanna Photo) ಅಪ್​ಲೋಡ್​ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೂ ಅವರು ಸ್ಫೂರ್ತಿ ತುಂಬುತ್ತಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಒಂದು ಹೊಸ ಫೋಟೋ ಹಂಚಿಕೊಂಡರು. ‘ತೃಪ್ತಿ ನೀಡುವಂತಹ ನನ್ನ ಪ್ರಕಾರದ ವರ್ಕೌಟ್​’ ಎಂದು ರಶ್ಮಿಕಾ ಮಂದಣ್ಣ ಆ ಫೋಟೋಗೆ ಕ್ಯಾಪ್ಷನ್​ ನೀಡಿದ್ದು ಗಮನ ಸೆಳೆದಿದೆ. ಜಿಮ್​ನಲ್ಲಿ (Gym) ನಿಂತು ಅವರು ಮಿರರ್​ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಫಿಟ್ನೆಸ್​ ಬಗ್ಗೆ ಅವರಿಗೆ ಇರುವ ಕಾಳಜಿ ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ.

ಬಣ್ಣದ ಲೋಕದಲ್ಲಿ ನಟಿಯರು ಫಿಟ್​ ಆಗಿರಬೇಕಾದ್ದು ಅನಿವಾರ್ಯ ಮತ್ತು ಅತ್ಯಗತ್ಯ. ಹಾಗಾಗಿ ಡಯಟ್​ ಜೊತೆ ವರ್ಕೌಟ್​ ಕೂಡ ಅತ್ಯಗತ್ಯ. ಇದನ್ನು ರಶ್ಮಿಕಾ ಮಂದಣ್ಣ ಚಾಚೂತಪ್ಪದೇ ಪಾಲಿಸುತ್ತಾರೆ. ಈ ಹಿಂದೆ ಕೂಡ ಅನೇಕ ಬಾರಿ ಅವರು ಜಿಮ್​ ಫೋಟೋಗಳನ್ನು ಹಂಚಿಕೊಂಡಿದ್ದರು. ಕೆಲವು ತಿಂಗಳ ಹಿಂದೆ ಅವರು ಒಂದಷ್ಟು ಐಡಿಯಾಗಳನ್ನು ಶೇರ್ ಮಾಡಿಕೊಂಡಿದ್ದರು. ತಮ್ಮ ಫಿಟ್ನೆಸ್​ ರಹಸ್ಯ ಏನು ಎಂಬುದನ್ನು ಕೂಡ ಅಭಿಮಾನಿಗಳಿಗೆ ತಿಳಿಸಿದ್ದರು.

ಇದನ್ನೂ ಓದಿ: ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?

ಇದನ್ನೂ ಓದಿ
Image
ಹೇಗಿದ್ದಾರೆ ನೋಡಿ ರಶ್ಮಿಕಾ ತಂಗಿ; ಇಲ್ಲಿದೆ ಮಂದಣ್ಣ ಫ್ಯಾಮಿಲಿಯ ಲೇಟೆಸ್ಟ್​ ಫೋಟೋ
Image
ಅಬ್ಬಬ್ಬಾ.. ರಶ್ಮಿಕಾ ಚಿತ್ರಕ್ಕೆ ಈ ಪರಿ ಬೇಡಿಕೆ; ಬಹುಕೋಟಿ ಡೀಲ್​ಗಾಗಿ ಇಬ್ಬರ ನಡುವೆ ಬಿಗ್​ ಪೈಪೋಟಿ
Image
ಪುನೀತ್​ ಜನ್ಮದಿನಕ್ಕೆ ಶುಭಕೋರದ ರಶ್ಮಿಕಾ ಮಂದಣ್ಣ; ‘ನಿಯತ್ತಿಲ್ಲದವರು’ ಎಂದು ಕಿಡಿಕಾರಿದ ಫ್ಯಾನ್ಸ್​
Image
ರಶ್ಮಿಕಾ ಕೈ ಚರ್ಮದ ಬಣ್ಣ ಚೇಂಜ್​ ಆಗಿದ್ದೇಕೆ? ಪರದೆ ಹಿಂದಿನ ಕಹಾನಿ ಬಿಚ್ಚಿಟ್ಟ ಒಂದು ಫೋಟೋ

‘ನಿರಂತರ ಪ್ರಯತ್ನವೇ ನಿಮ್ಮ ಫಿಟ್ನೆಸ್​ ಗೋಲ್​ಗೆ ತುಂಬ ಮುಖ್ಯವಾದ ಅಂಶ. ವರ್ಕೌಟ್​, ಡಯೆಟ್​, ಆಲೋಚನೆಗಳು ಮತ್ತು ಜರ್ನಿ ನಿರಂತರವಾಗಿ ಇರಲಿ ಹಾಗೂ ಅದನ್ನು ಎಂಜಾಯ್ ಮಾಡಿ. ಸ್ವಲ್ಪ ಸಮಯದವರೆಗೆ ಅದು ಖುಷಿ ನೀಡದೇ ಇರಬಹುದು. ಆದರೆ ಅಭ್ಯಾಸವಾದ ಬಳಿಕ ನಿಮಗೆ ಅರ್ಥವಾಗುತ್ತದೆ’ ಎಂದು ರಶ್ಮಿಕಾ ಮಂದಣ್ಣ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ: ವಿಜಯ್​ಗೆ ಜೋಡಿ ಆಗಿದ್ದಕ್ಕೆ ರಶ್ಮಿಕಾಗೆ ಎಷ್ಟು ಖುಷಿ ಅಂತ ಮಾತಲ್ಲಿ ಹೇಳೋಕಾಗಲ್ಲ; ಫೋಟೋ ನೋಡಿ ತಿಳಿಯಬೇಕಷ್ಟೇ

ರಶ್ಮಿಕಾ ಮಂದಣ್ಣ ಈಗ ಪ್ಯಾನ್​ ಇಂಡಿಯಾ ನಟಿ. ಅಲ್ಲು ಅರ್ಜುನ್​ ಜೊತೆ ನಟಿಸಿದ ‘ಪುಷ್ಪ’ ಸಿನಿಮಾದಿಂದಾಗಿ ಅವರಿಗೆ ಇಂಥ ಟೈಟಲ್​ ಸಿಕ್ಕಿದೆ. ಹಾಗೆಯೇ ಅವರು ಬಾಲಿವುಡ್​ ಸಿನಿಮಾಗಳಲ್ಲೂ ನಟಿಸುತ್ತಿರುವುದರಿಂದ ಅವರ ಡಿಮ್ಯಾಂಡ್​ ಹೆಚ್ಚಿದೆ. ಆ ಬೇಡಿಕೆಗೆ ತಕ್ಕಂತೆಯೇ ಚಾರ್ಮ್​ ಉಳಿಸಿಕೊಳ್ಳಬೇಕಾದ ಚಾಲೆಂಜ್ ಅವರ ಮುಂದಿದೆ. ಹಾಗಾಗಿ ಅವರು ಕಟ್ಟುನಿಟ್ಟಾಗಿ ವರ್ಕೌಟ್​ ಮಾಡುತ್ತಿದ್ದಾರೆ. ಜಿಮ್​ನಲ್ಲಿ ಕಷ್ಟಪಟ್ಟು ವರ್ಕೌಟ್​ ಮಾಡುತ್ತಿರುವ ವಿಡಿಯೋವನ್ನು ಕೂಡ ಅವರು ಈ ಮೊದಲು ಹಂಚಿಕೊಂಡಿದ್ದರು. ಅದನ್ನು ಕಂಡು ರಶ್ಮಿಕಾ ಫ್ಯಾನ್ಸ್​ ವಾವ್​ ಎಂದಿದ್ದರು.

ಇದನ್ನೂ ಓದಿ: ‘ಜಿಮ್​ನಲ್ಲಿ ಜೀವಿಸುವ ಸೈಕೋ’ ಅಂತ ಕರೆದುಕೊಂಡ ರಶ್ಮಿಕಾ ಮಂದಣ್ಣ; ಹೊಸ ಫೋಟೋ ವೈರಲ್​

ಕನ್ನಡದ ‘ಕಿರಿಕ್​ ಪಾರ್ಟಿ’ ಮೂಲಕ ವೃತ್ತಿಜೀವನ ಆರಂಭಿಸಿದ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​ ಸಿನಿಮಾಗಳಲ್ಲೂ ಮಿಂಚುತ್ತಿದ್ದಾರೆ. ಸಿದ್ದಾರ್ಥ್​ ಮಲ್ಹೋತ್ರಾ ಜೊತೆಗೆ ‘ಮಿಷನ್​ ಮಜ್ನು’ ಚಿತ್ರದಲ್ಲಿ ನಟಿಸಿದ್ದು, ಆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ಬೈ’ ಸಿನಿಮಾದಲ್ಲಿ ನಟಿಸುತ್ತಿರುವುದು ರಶ್ಮಿಕಾ ಮಂದಣ್ಣ ಅವರ ಹೆಚ್ಚುಗಾರಿಕೆ. ಇನ್ನು, ದಕ್ಷಿಣ ಭಾರತದಲ್ಲಿ ‘ದಳಪತಿ’ ವಿಜಯ್​ ನಟನೆಯ ಮುಂದಿನ ಸಿನಿಮಾಗೆ ರಶ್ಮಿಕಾ ನಾಯಕಿ ಆಗಿದ್ದಾರೆ. ವಿಜಯ್​ ಜೊತೆ ನಟಿಸಬೇಕು ಎಂಬುದು ಅವರ ಬಹುದಿನಗಳ ಕನಸಾಗಿತ್ತು. ಅದೀಗ ಈಡೇರಿದೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ನೆರವೇರಿತ್ತು. ಅದರ ಫೋಟೋಗಳನ್ನು ಹಂಚಿಕೊಂಡು ರಶ್ಮಿಕಾ ಸಂಭ್ರಮಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:14 am, Sat, 21 May 22

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್