AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MM Keeravani Birthday: ರಾಜಮೌಳಿ ಚಿತ್ರಗಳ ಖಾಯಂ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಭಾವನೆ ಎಷ್ಟು?

MM Keeravani Remuneration: ಚಿತ್ರರಂಗದಲ್ಲಿ ಎಂಎಂ ಕೀರವಾಣಿ ಅವರ ಅನುಭವ ಅಪಾರ. 1990ರಿಂದಲೂ ಅವರು ಸಕ್ರಿಯರಾಗಿದ್ದಾರೆ. ಇಂದು (ಜುಲೈ 4) ಅವರಿಗೆ ಹುಟ್ಟುಹಬ್ಬದ ಸಂಭ್ರಮ.

MM Keeravani Birthday: ರಾಜಮೌಳಿ ಚಿತ್ರಗಳ ಖಾಯಂ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಭಾವನೆ ಎಷ್ಟು?
ಎಂಎಂ ಕೀರವಾಣಿ
TV9 Web
| Edited By: |

Updated on: Jul 04, 2022 | 8:28 AM

Share

ಚಿತ್ರರಂಗದಲ್ಲಿ ನಿರ್ದೇಶಕ ರಾಜಮೌಳಿ (SS Rajamouli) ಅವರು ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿದ್ದಾರೆ. ಅವರು ಮಾಡಿದ ಸಿನಿಮಾಗಳೆಲ್ಲವೂ ದಾಖಲೆ ಬರೆದಿವೆ. ಅವರ ಎಲ್ಲ ಸಿನಿಮಾಗಳಿಗೂ ಸಂಗೀತ ನಿರ್ದೇಶನ ಮಾಡಿದ್ದು ಎಂಎಂ ಕೀರವಾಣಿ (MM Keeravani). ಪ್ರತಿ ಸಿನಿಮಾದಲ್ಲೂ ಅವರ ಸಂಗೀತ ಮೋಡಿ ಮಾಡುತ್ತದೆ. ಟಾಲಿವುಡ್​ನಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಹೊಂದಿರುವ ಅವರು ಬೇರೆ ಭಾಷೆಯ ಚಿತ್ರಗಳಿಗೂ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರು ಫೇಮಸ್​. ಇಂದು (ಜುಲೈ 4) ಎಂಎಂ ಕೀರವಾಣಿ ಅವರಿಗೆ ಜನ್ಮದಿನದ (MM Keeravani Birthday) ಸಂಭ್ರಮ. ಆ ಪ್ರಯುಕ್ತ ಎಲ್ಲರೂ ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಈ ಬಹುಬೇಡಿಕೆಯ ಸಂಗೀತ ನಿರ್ದೇಶಕನಿಗೆ ಸಿಗುತ್ತಿರುವ ಸಂಭಾವನೆ ಸಣ್ಣದೇನಲ್ಲ. ಪ್ರತಿ ಸಿನಿಮಾಗೆ ಅವರು ಬಹುಕೋಟಿ ರೂಪಾಯಿ ಪಡೆದುಕೊಳ್ಳುತ್ತಾರೆ. ಮೂಲಗಳ ಪ್ರಕಾರ ಈಗ ಅವರ ಸಂಭಾವನೆ 18 ಕೋಟಿ ರೂ. ಮುಟ್ಟಿದೆ!

ಚಿತ್ರರಂಗದಲ್ಲಿ ಎಂಎಂ ಕೀರವಾಣಿ ಅವರ ಅನುಭವ ಅಪಾರ. 1990ರಿಂದಲೂ ಅವರು ಸಕ್ರಿಯರಾಗಿದ್ದಾರೆ. ಹಲವಾರು ಸೂಪರ್​ ಹಿಟ್​ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡದ ‘ಅಳಿಮಯ್ಯ’, ‘ಅಪ್ಪಾಜಿ’, ‘ಭೈರವ’, ‘ಸ್ವಾತಿ’, ‘ಕರ್ನಾಟಕ ಸುಪುತ್ರ’, ‘ದೀಪಾವಳಿ’ ಮುಂತಾದ ಸಿನಿಮಾಗಳಿಗೆ ಸಂಗೀತ ನೀಡಿದ್ದು ಎಂಎಂ ಕೀರವಾಣಿ ಅವರೇ. ರಾಜಮೌಳಿ ಅವರ ಎಲ್ಲ ಸಿನಿಮಾಗಳಿಗೆ ಇವರದ್ದೇ ಸಂಗೀತ.

2001ರಲ್ಲಿ ರಾಜಮೌಳಿ ಮೊದಲ ಬಾರಿಗೆ ನಿರ್ದೇಶನ ಮಾಡಿದ ‘ಸ್ಟೂಡೆಂಟ್​ ನಂ.1’ ಸಿನಿಮಾದಿಂದ ಹಿಡಿದು ಈ ವರ್ಷ ತೆರೆಕಂಡ ‘ಆರ್​ಆರ್​ಆರ್​’ ಚಿತ್ರದವರೆಗೆ ಎಲ್ಲ ಸಿನಿಮಾಗಳಿಗೂ ಎಂಎಂ ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದಾರೆ. ರಾಜಮೌಳಿ ಅವರ ಗೆಲುವಿನಲ್ಲಿ ಕೀರವಾಣಿ ಅವರ ಕೊಡುಗೆಯೂ ಮಹತ್ವದ್ದಾಗಿದೆ. ಅಂಥ ದಿಗ್ಗಜ ನಿರ್ದೇಶಕನ ನೆಚ್ಚಿನ ಸಂಗೀತ ನಿರ್ದೇಶಕರಾದ ಅವರಿಗೆ ಬರೋಬ್ಬರಿ 18 ಕೋಟಿ ರೂಪಾಯಿ ಸಂಭಾವನೆ ನೀಡಲಾಗುತ್ತಿದೆ ಎಂದು ಕೆಲವು ಕಡೆಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ಕಿರುತೆರೆ ಜಗತ್ತಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಇವರೇ ನೋಡಿ; ಒಂದು ದಿನಕ್ಕೆ ಎಷ್ಟು ಲಕ್ಷ?
Image
‘ಕೆಜಿಎಫ್: ಚಾಪ್ಟರ್​​ 2’ ಸಿನಿಮಾ ಹಿಟ್​ ಆದ್ಮೇಲೆ ಶ್ರೀನಿಧಿ ಶೆಟ್ಟಿ ಕೇಳ್ತಿರುವ ಸಂಭಾವನೆ ಎಷ್ಟು ಕೋಟಿ?
Image
1992ರಲ್ಲಿ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು? ನೀವು ಅಚ್ಚರಿ ಪಡೋದು ಗ್ಯಾರಂಟಿ

ಒಮ್ಮೆ ರಾಷ್ಟ್ರ ಪ್ರಶಸ್ತಿ, 8 ಬಾರಿ ಫಿಲ್ಮ್​ಫೇರ್​ ಪ್ರಶಸ್ತಿ, 11 ಬಾರಿ ‘ನಂದಿ ಅವಾರ್ಡ್ಸ್​’ ಪಡೆದುಕೊಂಡ ಖ್ಯಾತಿ ಎಂಎಂ ಕೀರವಾಣಿ ಅವರಿಗೆ ಸಲ್ಲುತ್ತದೆ. ಸಂಗೀತ ನಿರ್ದೇಶನದ ಜೊತೆಗೆ ಗೀತರಚನಕಾರನಾಗಿಯೂ ಅವರು ಬ್ಯುಸಿ ಆಗಿದ್ದಾರೆ. ಮುಂಬರುವ ದಿನಗಳಲ್ಲಿ ಕೂಡ ಅವರು ರಾಜಮೌಳಿ ನಿರ್ದೇಶನದ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ: ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್

ರಾಜಮೌಳಿ ಬಗ್ಗೆ ಆಲಿಯಾಗೆ ನಿಜಕ್ಕೂ ಬೇಸರವಾಗಿದೆಯೇ?; ಪೋಸ್ಟ್ ಡಿಲೀಟ್​ ಮಾಡಿದ್ದಕ್ಕೆ ಕಾರಣ ನೀಡಿದ ನಟಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್