‘ಆ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುವಾಗ ನಿದ್ದೆ ಬಂದಿಲ್ಲ’; ದೆವ್ವದ ಚಿತ್ರಕ್ಕೆ ಹೆದರಿದ್ರಾ ಕೀರವಾಣಿ?

ಕೀರವಾಣಿ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ‘ಚಂದ್ರಮುಖಿ 2’ ಸಿನಿಮಾಗಾಗಿ ಕೆಲಸ ಮಾಡುವಾಗ ಅವರಿಗೆ ನಿದ್ದೆ ಸರಿಯಾಗಿ ಬಂದಿಲ್ಲ.

‘ಆ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುವಾಗ ನಿದ್ದೆ ಬಂದಿಲ್ಲ’; ದೆವ್ವದ ಚಿತ್ರಕ್ಕೆ ಹೆದರಿದ್ರಾ ಕೀರವಾಣಿ?
ಕೀರವಾಣಿ
Follow us
|

Updated on: Jul 25, 2023 | 6:30 AM

ಕೆಲ ಸಿನಿಮಾಗಳು ಬಹಳವೇ ಕಾಡುತ್ತವೆ. ಒಂದೊಳ್ಳೆಯ ಸಿನಿಮಾ ಮಾಡಿದರೆ ಅದು ನೋಡುಗರನ್ನು ಮಾತ್ರವಲ್ಲ ಆ ಸಿನಿಮಾ ನಿರ್ಮಾತೃರರ ನಿದ್ದೆಯನ್ನು ಕೆಡಿಸುತ್ತದೆ. ಆಸ್ಕರ್ ವಿಜೇತ ಎಂಎಂ ಕೀರವಾಣಿಗೆ (MM Keeravani) ಈಗ ಅಕ್ಷರಶಃ ಹಾಗೆಯೇ ಆಗಿದೆ. ‘ಚಂದ್ರಮುಖಿ 2’ ಚಿತ್ರಕ್ಕೆ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅವರು ಸಿನಿಮಾ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಸಿನಿಮಾ ಯಾವ ರೀತಿಯಲ್ಲಿ ಕಾಡಿತು ಎಂಬುದನ್ನು ಅವರು ವಿವರಿಸಿದ್ದಾರೆ. ಅವರು ನೀಡಿರುವ ಹೇಳಿಕೆ ಅನೇಕರಿಗೆ ಅಚ್ಚರಿ ಮೂಡಿಸಿದೆ.

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಚಿತ್ರದಿಂದ ಕೀರವಾಣಿ ಖ್ಯಾತಿ ಹೆಚ್ಚಾಯಿತು. ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿತು. ಈ ಚಿತ್ರದಿಂದ ಕೀರವಾಣಿ ಅವರು ವಿಶ್ವಾದ್ಯಂತ ಖ್ಯಾತಿ ಪಡೆದರು. ಹೀಗಾಗಿ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ‘ಚಂದ್ರಮುಖಿ 2’ ಸಿನಿಮಾಗಾಗಿ ಕೆಲಸ ಮಾಡುವಾಗ ಅವರಿಗೆ ನಿದ್ದೆ ಸರಿಯಾಗಿ ಬಂದಿಲ್ಲ.

‘ಚಂದ್ರಮುಖಿ 2’ ಚಿತ್ರವನ್ನು ವೀಕ್ಷಿಸಿದೆ. ಚಿತ್ರದಲ್ಲಿ ಬರುವ ಪಾತ್ರಗಳು ಸಾವಿನ ಭಯದಿಂದ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುತ್ತವೆ. ಅವುಗಳಿಗೆ ಜೀವ ತುಂಬಲು 2 ತಿಂಗಳು ಹಗಲು-ರಾತ್ರಿ ಶ್ರಮವಹಿಸಿದ್ದೇನೆ. ಈ ಸಮಯದಲ್ಲಿ ಸರಿಯಾಗಿ ನಿದ್ದೆ ಮಾಡಿಲ್ಲ. ಗುರು ಕಿರಣ್ ಹಾಗೂ ವಿದ್ಯಾಸಾಗರ್ ಅವರೇ ನನಗೆ ವಿಶ್ ಮಾಡಿ’ ಎಂದು ಕೀರವಾಣಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಜೀವನ ಸಾಗಿಸಲು ಕಾರು ತೊಳೆಯುತ್ತಿದ್ದ ಯುವಕನ ಜೀವನವನ್ನೇ ಬದಲಿಸಿದ ರಜನೀಕಾಂತ್​ರ ಒಂದು ಕರೆ

‘ಚಂದ್ರಮುಖಿ’ ಸಿನಿಮಾ ದೆವ್ವದ ಕಥೆಯನ್ನು ಹೊಂದಿತ್ತು. ಸೀಕ್ವೆಲ್ ಕೂಡ ಭೂತ-ದೆವ್ವದ ಬಗ್ಗೆ ಇದೆ. ರಾಘವ್ ಲಾರೆನ್ಸ್, ಕಂಗನಾ ರಣಾವತ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಲೈಕಾ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಪಿ ವಾಸು ಅವರು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ತಮಿಳು ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಸೆಪ್ಟೆಂಬರ್ 19ರಂದು ಚಿತ್ರ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು