AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುವಾಗ ನಿದ್ದೆ ಬಂದಿಲ್ಲ’; ದೆವ್ವದ ಚಿತ್ರಕ್ಕೆ ಹೆದರಿದ್ರಾ ಕೀರವಾಣಿ?

ಕೀರವಾಣಿ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ‘ಚಂದ್ರಮುಖಿ 2’ ಸಿನಿಮಾಗಾಗಿ ಕೆಲಸ ಮಾಡುವಾಗ ಅವರಿಗೆ ನಿದ್ದೆ ಸರಿಯಾಗಿ ಬಂದಿಲ್ಲ.

‘ಆ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುವಾಗ ನಿದ್ದೆ ಬಂದಿಲ್ಲ’; ದೆವ್ವದ ಚಿತ್ರಕ್ಕೆ ಹೆದರಿದ್ರಾ ಕೀರವಾಣಿ?
ಕೀರವಾಣಿ
ರಾಜೇಶ್ ದುಗ್ಗುಮನೆ
|

Updated on: Jul 25, 2023 | 6:30 AM

Share

ಕೆಲ ಸಿನಿಮಾಗಳು ಬಹಳವೇ ಕಾಡುತ್ತವೆ. ಒಂದೊಳ್ಳೆಯ ಸಿನಿಮಾ ಮಾಡಿದರೆ ಅದು ನೋಡುಗರನ್ನು ಮಾತ್ರವಲ್ಲ ಆ ಸಿನಿಮಾ ನಿರ್ಮಾತೃರರ ನಿದ್ದೆಯನ್ನು ಕೆಡಿಸುತ್ತದೆ. ಆಸ್ಕರ್ ವಿಜೇತ ಎಂಎಂ ಕೀರವಾಣಿಗೆ (MM Keeravani) ಈಗ ಅಕ್ಷರಶಃ ಹಾಗೆಯೇ ಆಗಿದೆ. ‘ಚಂದ್ರಮುಖಿ 2’ ಚಿತ್ರಕ್ಕೆ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅವರು ಸಿನಿಮಾ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಸಿನಿಮಾ ಯಾವ ರೀತಿಯಲ್ಲಿ ಕಾಡಿತು ಎಂಬುದನ್ನು ಅವರು ವಿವರಿಸಿದ್ದಾರೆ. ಅವರು ನೀಡಿರುವ ಹೇಳಿಕೆ ಅನೇಕರಿಗೆ ಅಚ್ಚರಿ ಮೂಡಿಸಿದೆ.

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಚಿತ್ರದಿಂದ ಕೀರವಾಣಿ ಖ್ಯಾತಿ ಹೆಚ್ಚಾಯಿತು. ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿತು. ಈ ಚಿತ್ರದಿಂದ ಕೀರವಾಣಿ ಅವರು ವಿಶ್ವಾದ್ಯಂತ ಖ್ಯಾತಿ ಪಡೆದರು. ಹೀಗಾಗಿ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ‘ಚಂದ್ರಮುಖಿ 2’ ಸಿನಿಮಾಗಾಗಿ ಕೆಲಸ ಮಾಡುವಾಗ ಅವರಿಗೆ ನಿದ್ದೆ ಸರಿಯಾಗಿ ಬಂದಿಲ್ಲ.

‘ಚಂದ್ರಮುಖಿ 2’ ಚಿತ್ರವನ್ನು ವೀಕ್ಷಿಸಿದೆ. ಚಿತ್ರದಲ್ಲಿ ಬರುವ ಪಾತ್ರಗಳು ಸಾವಿನ ಭಯದಿಂದ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುತ್ತವೆ. ಅವುಗಳಿಗೆ ಜೀವ ತುಂಬಲು 2 ತಿಂಗಳು ಹಗಲು-ರಾತ್ರಿ ಶ್ರಮವಹಿಸಿದ್ದೇನೆ. ಈ ಸಮಯದಲ್ಲಿ ಸರಿಯಾಗಿ ನಿದ್ದೆ ಮಾಡಿಲ್ಲ. ಗುರು ಕಿರಣ್ ಹಾಗೂ ವಿದ್ಯಾಸಾಗರ್ ಅವರೇ ನನಗೆ ವಿಶ್ ಮಾಡಿ’ ಎಂದು ಕೀರವಾಣಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಜೀವನ ಸಾಗಿಸಲು ಕಾರು ತೊಳೆಯುತ್ತಿದ್ದ ಯುವಕನ ಜೀವನವನ್ನೇ ಬದಲಿಸಿದ ರಜನೀಕಾಂತ್​ರ ಒಂದು ಕರೆ

‘ಚಂದ್ರಮುಖಿ’ ಸಿನಿಮಾ ದೆವ್ವದ ಕಥೆಯನ್ನು ಹೊಂದಿತ್ತು. ಸೀಕ್ವೆಲ್ ಕೂಡ ಭೂತ-ದೆವ್ವದ ಬಗ್ಗೆ ಇದೆ. ರಾಘವ್ ಲಾರೆನ್ಸ್, ಕಂಗನಾ ರಣಾವತ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಲೈಕಾ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಪಿ ವಾಸು ಅವರು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ತಮಿಳು ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಸೆಪ್ಟೆಂಬರ್ 19ರಂದು ಚಿತ್ರ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ