‘ಆ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುವಾಗ ನಿದ್ದೆ ಬಂದಿಲ್ಲ’; ದೆವ್ವದ ಚಿತ್ರಕ್ಕೆ ಹೆದರಿದ್ರಾ ಕೀರವಾಣಿ?

ಕೀರವಾಣಿ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ‘ಚಂದ್ರಮುಖಿ 2’ ಸಿನಿಮಾಗಾಗಿ ಕೆಲಸ ಮಾಡುವಾಗ ಅವರಿಗೆ ನಿದ್ದೆ ಸರಿಯಾಗಿ ಬಂದಿಲ್ಲ.

‘ಆ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುವಾಗ ನಿದ್ದೆ ಬಂದಿಲ್ಲ’; ದೆವ್ವದ ಚಿತ್ರಕ್ಕೆ ಹೆದರಿದ್ರಾ ಕೀರವಾಣಿ?
ಕೀರವಾಣಿ

Updated on: Jul 25, 2023 | 6:30 AM

ಕೆಲ ಸಿನಿಮಾಗಳು ಬಹಳವೇ ಕಾಡುತ್ತವೆ. ಒಂದೊಳ್ಳೆಯ ಸಿನಿಮಾ ಮಾಡಿದರೆ ಅದು ನೋಡುಗರನ್ನು ಮಾತ್ರವಲ್ಲ ಆ ಸಿನಿಮಾ ನಿರ್ಮಾತೃರರ ನಿದ್ದೆಯನ್ನು ಕೆಡಿಸುತ್ತದೆ. ಆಸ್ಕರ್ ವಿಜೇತ ಎಂಎಂ ಕೀರವಾಣಿಗೆ (MM Keeravani) ಈಗ ಅಕ್ಷರಶಃ ಹಾಗೆಯೇ ಆಗಿದೆ. ‘ಚಂದ್ರಮುಖಿ 2’ ಚಿತ್ರಕ್ಕೆ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅವರು ಸಿನಿಮಾ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಸಿನಿಮಾ ಯಾವ ರೀತಿಯಲ್ಲಿ ಕಾಡಿತು ಎಂಬುದನ್ನು ಅವರು ವಿವರಿಸಿದ್ದಾರೆ. ಅವರು ನೀಡಿರುವ ಹೇಳಿಕೆ ಅನೇಕರಿಗೆ ಅಚ್ಚರಿ ಮೂಡಿಸಿದೆ.

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಚಿತ್ರದಿಂದ ಕೀರವಾಣಿ ಖ್ಯಾತಿ ಹೆಚ್ಚಾಯಿತು. ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿತು. ಈ ಚಿತ್ರದಿಂದ ಕೀರವಾಣಿ ಅವರು ವಿಶ್ವಾದ್ಯಂತ ಖ್ಯಾತಿ ಪಡೆದರು. ಹೀಗಾಗಿ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ‘ಚಂದ್ರಮುಖಿ 2’ ಸಿನಿಮಾಗಾಗಿ ಕೆಲಸ ಮಾಡುವಾಗ ಅವರಿಗೆ ನಿದ್ದೆ ಸರಿಯಾಗಿ ಬಂದಿಲ್ಲ.

‘ಚಂದ್ರಮುಖಿ 2’ ಚಿತ್ರವನ್ನು ವೀಕ್ಷಿಸಿದೆ. ಚಿತ್ರದಲ್ಲಿ ಬರುವ ಪಾತ್ರಗಳು ಸಾವಿನ ಭಯದಿಂದ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುತ್ತವೆ. ಅವುಗಳಿಗೆ ಜೀವ ತುಂಬಲು 2 ತಿಂಗಳು ಹಗಲು-ರಾತ್ರಿ ಶ್ರಮವಹಿಸಿದ್ದೇನೆ. ಈ ಸಮಯದಲ್ಲಿ ಸರಿಯಾಗಿ ನಿದ್ದೆ ಮಾಡಿಲ್ಲ. ಗುರು ಕಿರಣ್ ಹಾಗೂ ವಿದ್ಯಾಸಾಗರ್ ಅವರೇ ನನಗೆ ವಿಶ್ ಮಾಡಿ’ ಎಂದು ಕೀರವಾಣಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಜೀವನ ಸಾಗಿಸಲು ಕಾರು ತೊಳೆಯುತ್ತಿದ್ದ ಯುವಕನ ಜೀವನವನ್ನೇ ಬದಲಿಸಿದ ರಜನೀಕಾಂತ್​ರ ಒಂದು ಕರೆ

‘ಚಂದ್ರಮುಖಿ’ ಸಿನಿಮಾ ದೆವ್ವದ ಕಥೆಯನ್ನು ಹೊಂದಿತ್ತು. ಸೀಕ್ವೆಲ್ ಕೂಡ ಭೂತ-ದೆವ್ವದ ಬಗ್ಗೆ ಇದೆ. ರಾಘವ್ ಲಾರೆನ್ಸ್, ಕಂಗನಾ ರಣಾವತ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಲೈಕಾ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಪಿ ವಾಸು ಅವರು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ತಮಿಳು ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಸೆಪ್ಟೆಂಬರ್ 19ರಂದು ಚಿತ್ರ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us