AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ಸಿನಿಮಾಕ್ಕೆ ಆಸ್ಕರ್ ವಿಜೇತ ಎಂಎಂ ಕೀರವಾಣಿ ಸಂಗೀತ: ರೆಹಮಾನ್ ಸಂಗೀತ ನೀಡಲಿಲ್ಲವೇಕೆ?

MM Keeravani: ಆರ್​ಆರ್​ಆರ್ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಗೆದ್ದಿರುವ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಹೊಸ ತಮಿಳು ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ.

ತಮಿಳು ಸಿನಿಮಾಕ್ಕೆ ಆಸ್ಕರ್ ವಿಜೇತ ಎಂಎಂ ಕೀರವಾಣಿ ಸಂಗೀತ: ರೆಹಮಾನ್ ಸಂಗೀತ ನೀಡಲಿಲ್ಲವೇಕೆ?
ಕೀರವಾಣಿ
ಮಂಜುನಾಥ ಸಿ.
|

Updated on: Jun 04, 2023 | 5:23 PM

Share

ಎಂಎಂ ಕೀರವಾಣಿ (MM Keeravani) ಹೆಸರು ಭಾರತ ಸಿನಿಮಾ ಇತಿಹಾಸದಲ್ಲಿ ಶಾಶ್ವತವಾಗಿ ಸೇರಿ ಹೋಗಿದೆ. ಆರ್​ಆರ್​ಆರ್ (RRR) ಸಿನಿಮಾಕ್ಕೆ ಕೀರವಾಣಿ ನೀಡಿರುವ ಸಂಗೀತ ವಿಶ್ವದ ಗಮನ ಸೆಳೆದಿದೆ. ಅವರು ಕಂಪೋಸ್ ಮಾಡಿರುವ ನಾಟು-ನಾಟು ಹಾಡಿಗೆ ವಿಶ್ವದ ಎರಡು ಅತ್ಯುನ್ನತ ಪ್ರಶಸ್ತಿಗಳಾದ ಆಸ್ಕರ್ ಹಾಗೂ ಗ್ರ್ಯಾಮಿ ದೊರೆತಿದೆ. ಸಾಕಷ್ಟು ಅವಕಾಶಗಳಿದ್ದರೂ ಆಯ್ದ ಸಿನಿಮಾಗಳನ್ನಷ್ಟೆ ಒಪ್ಪಿಕೊಂಡು ಸಂಗೀತ ನೀಡುತ್ತಾ ಬಂದಿದ್ದಾರೆ ಎಂಎಂ ಕೀರವಾಣಿ. ಇಗ ಆಸ್ಕರ್ ಗೆದ್ದ ಬಳಿಕ ಸಿನಿಮಾ ಆಯ್ಕೆಯಲ್ಲಿ ಇನ್ನಷ್ಟು ಚ್ಯೂಸಿ ಆಗಿರುವ ಕೀರವಾಣಿ, ಇದೀಗ ಹೊಸದೊಂದು ತಮಿಳು (Kollywood) ಸಿನಿಮಾ ಒಪ್ಪಿಕೊಂಡಿದ್ದಾರೆ.

ಆರ್.ಆರ್.ಆರ್ ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ತಮ್ಮದಾಗಿಸಿಕೊಂಡಿರುವ ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಮತ್ತೆ ತಮಿಳು ಸಿನಿಮಾ ರಂಗಕ್ಕೆ ಹಾರಿದ್ದಾರೆ. ಈಗಾಗಲೇ ಕೆಲವು ತಮಿಳು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಕೀರವಾಣಿ, ಈಗ ಮತ್ತೆ ಕಾಲಿವುಡ್​​ನತ್ತ ಪ್ರಯಾಣ ಬೆಳೆಸಿದ್ದಾರೆ. ಈ ಹಿಂದೆ ‘ಜಂಟಲ್ ಮ್ಯಾನ್’, ‘ಕಾದಲ್ ದೇಸಂ’ ಸೇರಿದಂತೆ ಹಲವು ಸೂಪರ್ ಹಿಟ್ ತಮಿಳು ಚಿತ್ರಗಳನ್ನು ನಿರ್ಮಿಸಿರುವ ಕೆ.ಟಿ. ಕುಂಜುಮೋನ್, ಈಗ ಬಹಳ ದಿನಗಳ ನಂತರ ‘ಜಂಟಲ್ ಮ್ಯಾನ್ 2’ ಚಿತ್ರದ ಮೂಲಕ ನಿರ್ಮಾಣಕ್ಕೆ ವಾಪಸ್ಸಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಿದ್ದು, ಈ ಚಿತ್ರಕ್ಕೆ ಸಂಗೀತ ಸಂಯೋಜಿಸುವುದಕ್ಕೆ ಕೀರವಾಣಿ ಒಪ್ಪಿದ್ದಾರೆ.

ಎರಡು ತಿಂಗಳ ಹಿಂದೆಯಷ್ಟೇ ಅಮೆರಿಕಾದಲ್ಲಿ ನಡೆದ ಸಮಾರಂಭದಲ್ಲಿ ಕೀರವಾಣಿ ಅವರಿಗೆ ಆಸ್ಕರ್ ಪ್ರಶಸ್ತಿ ಲಭಿಸಿತ್ತು. ಅವರು ಅಲ್ಲಿಂದ ಭಾರತಕ್ಕೆ ಬಂದ ಮೇಲೆ, ಅವರನ್ನು ಹೈದರಾಬಾದ್ ನಲ್ಲಿ ಚಿತ್ರದ ನಿರ್ದೇಶಕ ಎ. ಗೋಕುಲ್ ಕೃಷ್ಣ ಭೇಟಿಯಾಗಿದ್ದಾರೆ. ಗೋಕುಲ್ ಹೇಳಿದ ಕಥೆ ಕೇಳಿ ಖುಷಿಯಾದ ಕೀರವಾಣಿ, ತಕ್ಷಣವೇ ಚಿತ್ರಕ್ಕೆ ಸಂಗೀತ ಸಂಯೋಜಿಸುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ, ತಕ್ಷಣವೇ ನಿರ್ಮಾಪಕ ಕುಂಜುಮೋನ್ ಅವರಿಗೆ ಕರೆ ಮಾಡಿ, ಮುಂದಿನ ತಿಂಗಳಿನಿಂದ ಸಂಗೀತ ಸಂಯೋಜನೆ ಕೆಲಸ ಪ್ರಾರಂಭಿಸುವುದಾಗಿ ಹೇಳಿದ್ದಾರೆ. ಚಿತ್ರವು ಸದ್ಯ ಪ್ರೀ-ಪ್ರೊಡಕ್ಷನ್ ಹಂತದಲ್ಲಿದ್ದು, ಸದ್ಯದಲ್ಲೇ ಕಲಾವಿದರು ಮತ್ತು ತಂತ್ರಜ್ಞರ ಪಟ್ಟಿ ಹೊರಬೀಳಲಿದೆ.

ಇದನ್ನೂ ಓದಿ:MM Keeravani: ‘ನನಗೆ ಆಸ್ಕರ್​ ಸಿಕ್ಕಿದ್ದು ಇದೇ ಮೊದಲೇನಲ್ಲ’: 30 ವರ್ಷದ ಹಿಂದಿನ ವಿಷಯ ತೆರೆದಿಟ್ಟ ಎಂಎಂ ಕೀರವಾಣಿ

1993 ರಲ್ಲಿ ಜಂಟಲ್​ಮ್ಯಾನ್ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದರು. ಆ ಸಿನಿಮಾದ ಹಾಡುಗಳು ಸೂಪರ್ ಡೂಪರ್ ಹಿಟ್ ಆಗಿದ್ದವು. ಆಗ ಜಂಟಲ್​ಮ್ಯಾನ್ ಸಿನಿಮಾ ನಿರ್ಮಾಣ ಮಾಡಿದ್ದ ಕುಂಜುಮೋನ್ ಅವರೇ ಈಗ ಜಂಟಲ್​ಮ್ಯಾನ್ 2 ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಮೊದಲ ಸಿನಿಮಾಕ್ಕೆ ಸಂಗೀತ ನೀಡಿದ್ದ ಎಆರ್ ರೆಹಮಾನ್ ಅವರನ್ನು ನಿರ್ಮಾಪಕ ಕುಂಜುಮೋನ್ ಏಕೆ ಆಯ್ಕೆ ಮಾಡಿಲ್ಲ ಎಂಬ ಪ್ರಶ್ನೆ ಹಲವರಿಗೆ ಮೂಡಿದೆ.

ಕುಂಜುಮೋನ್ ತಮಿಳಿನ ಜನಪ್ರಿಯ ಸಿನಿಮಾ ನಿರ್ಮಾಪಕರು. 1985 ರಿಂದಲೂ ಸಿನಿಮಾ ನಿರ್ಮಾಣ ಮಾಡುತ್ತಿರುವ ಕುಂಜುಮೋನ್ ಕಾದಲನ್, ಕಾದಲ್ ದೇಸಂ, ಜಂಟಲ್​ಮ್ಯಾನ್ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಆದರೆ 1999 ರ ಬಳಿಕ ಸಿನಿಮಾ ರಂಗದಿಂದ ದೂರ ಉಳಿದಿದ್ದ ಕುಂಜು ಈಗ ಜಂಟಲ್​ಮ್ಯಾನ್ 2 ಸಿನಿಮಾದಿಂದ ಮರಳಿ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ