ಚಿತ್ರರಂಗಕ್ಕೆ ಮತ್ತೆ ಕೊರೊನಾ ಭಯ; ಆಸ್ಕರ್ ವಿಜೇತ ಕೀರವಾಣಿ ಸೇರಿ ಅನೇಕರಿಗೆ ಕೊವಿಡ್ ಪಾಸಿಟಿವ್

ಖ್ಯಾತ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸೇರಿ ಅನೇಕರಿಗೆ ಕೊವಿಡ್ ಪಾಸಿಟಿವ್ ಆಗಿದ್ದು, ಮನೆಯಲ್ಲೇ ಐಸೋಲೇಟ್ ಆಗಿದ್ದಾರೆ. ಅವರೆಲ್ಲ ಬೇಗ ಚೇತರಿಕೆ ಕಾಣಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಚಿತ್ರರಂಗಕ್ಕೆ ಮತ್ತೆ ಕೊರೊನಾ ಭಯ; ಆಸ್ಕರ್ ವಿಜೇತ ಕೀರವಾಣಿ ಸೇರಿ ಅನೇಕರಿಗೆ ಕೊವಿಡ್ ಪಾಸಿಟಿವ್
ಕೀರವಾಣಿ-ಮಾಹಿ-ಶಿಲ್ಪಾ,ರಾಜ್ ಕುಂದ್ರಾ
Follow us
|

Updated on:Mar 31, 2023 | 7:43 AM

ದೇಶದ ಕೊರೊನಾ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳ ಕಾಣುತ್ತಿದೆ. ಅಲ್ಲಲ್ಲಿ ಸಾವಿನ ಪ್ರಕರಣಗಳು ಕೂಡ ವರದಿ ಆಗುತ್ತಿವೆ. ಇದು ಸಾಕಷ್ಟು ಆತಂಕ ಮೂಡಿಸಿದೆ. ಚಿತ್ರರಂಗದ ಅನೇಕರು ಕೊವಿಡ್​ಗೆ (Covid) ಒಳಗಾಗುತ್ತಿದ್ದಾರೆ. ಹೀಗೆ ಮುಂದುವರಿದರೆ ಏನು ಗತಿ ಎನ್ನುವ ಪ್ರಶ್ನೆ ಕಾಡಿದೆ. ಖ್ಯಾತ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ (MM Kiravani) ಸೇರಿ ಅನೇಕರಿಗೆ ಕೊವಿಡ್ ಪಾಸಿಟಿವ್ ಆಗಿದ್ದು, ಮನೆಯಲ್ಲೇ ಐಸೋಲೇಟ್ ಆಗಿದ್ದಾರೆ. ಅವರೆಲ್ಲ ಬೇಗ ಚೇತರಿಕೆ ಕಾಣಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಎಂಎಂ ಕೀರವಾಣಿ

ಎಂಎಂ ಕೀರವಾಣಿ ಅವರು ಭಾರತ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಅವರು ಸಂಗೀತ ಸಂಯೋಜನೆ ಮಾಡಿರುವ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ಇದಕ್ಕಾಗಿ ಅವರು ಅಮೆರಿಕಕ್ಕೆ ತೆರಳಿದ್ದರು. ಭಾರತಕ್ಕೆ ಬಂದ ಬಳಿಕವೂ ವಿವಿಧ ಪಾರ್ಟಿಗಳಲ್ಲಿ ಭಾಗಿ ಆಗಿದ್ದರು. ಈಗ ಅವರು ಕೊವಿಡ್​ಗೆ ಒಳಗಾಗಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಕಿಶೋರ್ ಖೇರ್

ನಟಿ ಹಾಗೂ ರಾಜಕಾರಣಿ ಕಿಶೋರ್ ಖೇರ್ ಅವರಿಗೆ ಕೊವಿಡ್ ಅಂಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನನಗೆ ಕೊರೊನಾ ಪಾಸಿಟಿವ್ ಆಗಿದೆ. ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಕೋರಿದ್ದಾರೆ.

ಪೂಜಾ ಭಟ್

ಮಹೇಶ್ ಭಟ್ ಮಗಳು ಪೂಜಾ ಭಟ್​ಗೂ ಕೊರೊನಾ ಪಾಸಿಟಿವ್ ಆಗಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ನಿರ್ಮಾಪಕಿ, ನಿರ್ದೇಶಕಿ ಆಗಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ‘ಜಿಸ್ಮ್​ 2’ ಸೇರಿ ಅನೇಕ ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ.

ಮಾಹಿ ವಿಜ್

‘ಶ್​..ಕೊಯಿ ಹೈ’ ಸೇರಿ ಅನೇಕ ಧಾರಾವಾಹಿಗಳಲ್ಲಿ ನಟಿಸಿರೋ ಮಾಹಿ ವಿಜ್​ಗೂ ಕೊರೊನಾ ಪಾಸಿಟಿವ್ ಆಗಿದೆ. ಅವರು ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ನಟಿ ಧನ್ಯಾ ರಾಮ್​ಕುಮಾರ್​ಗೆ ಕೊವಿಡ್​ ಪಾಸಿಟಿವ್​

ರಾಜ್ ಕುಂದ್ರಾ

ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರಿಗೂ ಕೊವಿಡ್ ಅಂಟಿದೆ. ಈ ಕಾರಣಕ್ಕೆ ಇಡೀ ಕುಟುಂಬ ಹೋಂ ಕ್ವಾರಂಟೈನ್ ಆಗಿದೆ.

ಹೀಗೆ ಮುಂದುವರಿದರೆ ಕಷ್ಟವಿದೆ..

ಚಿತ್ರರಂಗದವರಿಗೆ ಹೆಚ್ಚೆಚ್ಚು ಕೊವಿಡ್ ಅಂಟಿದರೆ ಅದರಿಂದ ಸಾಕಷ್ಟು ಸಮಸ್ಯೆ ಆಗಲಿದೆ. ಶೂಟಿಂಗ್ ವಿಳಂಬ ಆಗುತ್ತದೆ. ಇನ್ನು, ಒಟ್ಟಾರೆ ಪ್ರಕರಣ ಹೆಚ್ಚಳದಿಂದ ಚೇತರಿಕೆ ಕಂಡಿದ್ದ ಚಿತ್ರರಂಗ ನಷ್ಟ ಅನುಭವಿಸಲಿದೆ. ಕೊವಿಡ್​ನ ಮೂರು ಅಲೆಯಿಂದ ಚಿತ್ರರಂಗ ಸಾಕಷ್ಟು ನಷ್ಟ ಅನುಭವಿಸಿತ್ತು. ಈಗ, ಸಿನಿಮಾ ರಂಗ ಚೇತರಿಕೆ ಕಂಡಿದೆ. ಹೀಗಿರುವಾಗಲೇ ಕೊರೊನಾ ಸಂಖ್ಯೆಯಲ್ಲಿ ಹೆಚ್ಚಳ ಕಾಣುತ್ತಿರುವುದು ಆತಂಕ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:20 am, Fri, 31 March 23

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ