AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಿಗಾರನ ಮೇಲೆ ಹಲ್ಲೆ: ಟಿವಿ9ಗೆ ಕ್ಷಮೆ ಕೇಳಿದ ನಟ ಮೋಹನ್ ಬಾಬು

Mohan Babu: ವರದಿಗೆಂದು ತೆರಳಿದ್ದ ಟಿವಿ9 ವರದಿಗಾರನ ಮೇಲೆ ಹಲ್ಲೆ ನಡೆಸಿದ್ದ ತೆಲುಗು ಚಿತ್ರರಂಗದ ಹಿರಿಯ ನಟ ಮೋಹನ್ ಬಾಬು ಇದೀಗ ಕ್ಷಮೆ ಕೇಳಿದ್ದಾರೆ. ನನ್ನ ಕೃತ್ಯದಿಂದ ಪತ್ರಕರ್ತರೊಬ್ಬರು ಗಾಯಗೊಂಡಿರುವುದು ತುಂಬಾ ಬೇಸರದ ಸಂಗತಿ. ನಾನು ಅವರ ಕುಟುಂಬ ಮತ್ತು ಟಿವಿ9 ಕುಟುಂಬಕ್ಕೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’ ಎಂದಿದ್ದಾರೆ.

ವರದಿಗಾರನ ಮೇಲೆ ಹಲ್ಲೆ: ಟಿವಿ9ಗೆ ಕ್ಷಮೆ ಕೇಳಿದ ನಟ ಮೋಹನ್ ಬಾಬು
ಮೋಹನ್ ಬಾಬು
ಮಂಜುನಾಥ ಸಿ.
|

Updated on: Dec 13, 2024 | 10:18 AM

Share

ತೆಲುಗು ಚಿತ್ರರಂಗದ ಹಿರಿಯ ನಟ, ರಾಜಕಾರಣಿಯೂ ಆಗಿರುವ ಮೋಹನ್ ಬಾಬು, ಇತ್ತೀಚೆಗೆ ವರದಿಗೆಂದು ತೆರಳಿದ್ದ ಟಿವಿ9 ವರದಿಗಾರನ ಮೇಲೆ ಹಲ್ಲೆ ಮಾಡಿದ್ದರು. ಮೋಹನ್ ಬಾಬು ಈ ಅವರ ರೌಡಿ ವರ್ತನೆಗೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಪ್ರತಿಭಟನೆಗಳು ಸಹ ನಡೆದಿದ್ದವು. ಇದೀಗ ಮೋಹನ್ ಬಾಬು ಅವರು ಟಿವಿ9ಗೆ ಕ್ಷಮೆ ಕೇಳಿದ್ದಾರೆ. “ನನ್ನ ಕುಟುಂಬಕ್ಕೆ ಸಂಬಂಧಿಸಿದ ಘಟನೆ ಇಷ್ಟು ದೊಡ್ಡ ವಿಷಯವಾಗಿ ಟಿವಿ9 ಮತ್ತು ಪತ್ರಕರ್ತರನ್ನು ಸಂಕಷ್ಟಕ್ಕೆ ದೂಡಿದ್ದಕ್ಕೆ ನನಗೆ ವಿಷಾದವಿದೆ. ಘಟನೆಯ ನಂತರ 48 ಗಂಟೆಗಳ ಕಾಲ ಆಸ್ಪತ್ರೆಯಲ್ಲಿದ್ದ ಕಾರಣ ನಾನು ಪ್ರತಿಕ್ರಿಯಿಸಲು ಸಾಧ್ಯವಾಗಲಿಲ್ಲ. ಅಂದು ನಡೆದ ಘಟನೆಯಲ್ಲಿ ಪತ್ರಕರ್ತರೊಬ್ಬರು ಗಾಯಗೊಂಡಿರುವುದು ತುಂಬಾ ಬೇಸರದ ಸಂಗತಿ. ನಾನು ಅವರ ಕುಟುಂಬ ಮತ್ತು ಟಿವಿ9 ಕುಟುಂಬಕ್ಕೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮೋಹನ್ ಬಾಬು ಅವರ ಕುಟುಂಬದಲ್ಲಿ ವಿವಾದಗಳು ಭುಗಿಲೆದ್ದಿದ್ದು, ಅವರ ಕಿರಿಯ ಪುತ್ರ ಮಂಚು ಮನೋಜ್ ಹಾಗೂ ಮೋಹನ್ ಬಾಬು ನಡುವೆ ಆಸ್ತಿಗೆ ಸಂಬಂಧಿಸಿದಂತೆ ವಿವಾದಗಳು ನಡೆಯುತ್ತಿವೆ. ಮೋಹನ್ ಬಾಬು ಮನೆಯಲ್ಲಿ ಕೆಲ ಸಮಯದಿಂದ ವಾಸವಿದ್ದ ಮಂಚು ಮನೋಜ್ ಮೇಲೆ, ಮೋಹನ್ ಬಾಬು ಮ್ಯಾನೇಜರ್ ಹಾಗೂ ಇನ್ನೂ ಕೆಲವರು ಹಲ್ಲೆ ಮಾಡಿದ್ದರು. ಇದರ ಬಗ್ಗೆ ಮಂಚು ಮನೋಜ್ ದೂರು ನೀಡಿದ್ದರು. ಮೋಹನ್ ಬಾಬು ಸಹ ತಮ್ಮ ಪುತ್ರ ಮಂಚು ಮನೋಜ್ ಹಾಗೂ ಅವರ ಪತ್ನಿಯ ವಿರುದ್ಧ ದೂರು ದಾಖಲಿಸಿದ್ದರು.

ಸೋಮವಾರ ರಾತ್ರಿ, ಮಂಚು ಮನೋಜ್, ಮೋಹನ್ ಬಾಬು ಅವರ ಮನೆಗೆ ಹೋಗಲು ಪ್ರಯತ್ನಿಸಿದಾಗ ಗೇಟ್​ ಬಳಿ ಮೋಹನ್ ಬಾಬು ಅವರನ್ನು ತಡೆಯಲು ಯತ್ನಿಸಿದರು. ಆಗ ಮಂಚು ಮನೋಜ್ ಜೊತೆಗೆ ಕೆಲ ವರದಿಗಾರರು ಸಹ ಒಳಗೆ ಹೋಗಿ ಮೋಹನ್ ಬಾಬು ಅವರ ಪ್ರತಿಕ್ರಿಯೆ ಪಡೆಯಲು ಯತ್ನಿಸಿದರು. ಈ ವೇಳೆ ಮೋಹನ್ ಬಾಬು, ಟಿವಿ9 ವರದಿಗಾರನ ಮೇಲೆ ಮೈಕ್​ನಿಂದ ಹಲ್ಲೆ ಮಾಡಿದ್ದರು. ವರದಿಗಾರನ ಕಿವಿಗೆ ಇದರಿಂದ ತೀವ್ರ ಗಾಯವಾಗಿ ರಕ್ತಸ್ರಾವವಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ:ಅಪ್ಪನ ಮೇಲೆ ದೂರು ನೀಡಿದ ನಟ, ಈಗ ಅಣ್ಣನ ಮೇಲೂ ಆರೋಪ

ಘಟನೆ ಬಳಿಕ ತೆಲುಗು ಟಿವಿ ವರದಿಗಾರರು ಮೋಹನ್ ಬಾಬು ಮನೆ ಎದುರು ಪ್ರತಿಭಟನೆ ನಡೆಸಿ ಮೋಹನ್ ಬಾಬು ಅನ್ನು ಬಂಧಿಸಲು ಒತ್ತಾಯಿಸಿದ್ದರು. ಆ ಬಳಿಕ ಮೋಹನ್ ಬಾಬು ಅವರ ಮತ್ತೊಬ್ಬ ಪುತ್ರ, ನಟ, ತೆಲುಗು ಕಲಾವಿದರ ಸಂಘದ ಅಧ್ಯಕ್ಷ ಮಂಚು ವಿಷ್ಣು ಪತ್ರಿಕಾಗೋಷ್ಠಿ ನಡೆಸಿ ಎಲ್ಲ ವರದಿಗಾರರ ಕ್ಷಮೆ ಕೇಳಿದ್ದರು. ಇದೀಗ ಸ್ವತಃ ಮೋಹನ್ ಬಾಬು ಟ್ವೀಟ್ ಮಾಡುವ ಮೂಲಕ ಟಿವಿ9ಗೆ ಕ್ಷಮೆ ಕೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್