AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶ್ನೆ ಕೇಳಲು ಹೋದ ವರದಿಗಾರನ ಮೇಲೆ ನಟ ಮೋಹನ್ ಬಾಬು ಹಲ್ಲೆ

ತೆಲುಗು ನಟ ಮೋಹನ್ ಬಾಬು ಅವರ ಕುಟುಂಬದ ಜಗಳ ಬೀದಿಗೆ ಬಂದಿದೆ. ಈ ಬಗ್ಗೆ ಪ್ರಶ್ನಿಸಲು ಹೋದ ವರದಿಗಾರರ ಮೇಲೆ ಮೋಹನ್ ಬಾಬು ಹಲ್ಲೆ ಮಾಡಿದ್ದಾರೆ. ಹೈದರಾಬಾದ್​ನಲ್ಲಿ ಈ ಘಟನೆ ನಡೆದಿದೆ. ಟಿವಿ9 ವರದಿಗಾರ ರಂಜಿತ್​ ಮೇಲೆ ನಟ ಮೋಹನ್ ​ಬಾಬು ಹಲ್ಲೆ ಮಾಡಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆ ಆಗಿವೆ.

ಪ್ರಶ್ನೆ ಕೇಳಲು ಹೋದ ವರದಿಗಾರನ ಮೇಲೆ ನಟ ಮೋಹನ್ ಬಾಬು ಹಲ್ಲೆ
ವರದಿಗಾರನ ಮೇಲೆ ಮೋಹನ್ ಬಾಬು ಹಲ್ಲೆ
ಮದನ್​ ಕುಮಾರ್​
|

Updated on:Dec 10, 2024 | 8:56 PM

Share

ಟಾಲಿವುಡ್​ ನಟ ಮೋಹನ್​ ಬಾಬು ಕುಟುಂಬದಲ್ಲಿ ಕಳೆದ ಕೆಲವು ದಿನಗಳಿಂದ ಕಿರಿಕ್ ಶುರುವಾಗಿದೆ. ಆಸ್ತಿಗೆ ಸಂಬಂಧಿಸಿದಂತೆ ಮೋಹನ್​ ಬಾಬು ಪುತ್ರರಾದ ಮಂಚು ಮನೋಜ್​, ಮಂಚು ವಿಷ್ಣು ಕಿತ್ತಾಡಿಕೊಂಡಿದ್ದಾರೆ. ಅವರ ಕುಟುಂಬದ ಬಿರುಕು ಜಗಜ್ಜಾಹೀರಾಗಿದೆ. ಅಪ್ಪ-ಮಕ್ಕಳು ಪರಸ್ಪರ ಪೊಲೀಸ್ ದೂರು ನೀಡಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ಸುದ್ದಿ ಆಗಿದೆ. ಈ ಕುರಿತು ವರದಿ ಮಾಡಲು ತೆರಳಿದ್ದ ಟಿವಿ9 ವರದಿಗಾರರ ಮೇಲೆ ಮೋಹನ್ ಬಾಬು ಅವರು ಹಲ್ಲೆ ಮಾಡಿದ್ದಾರೆ. ಅವರ ವರ್ತನೆಗೆ ಖಂಡನೆ ವ್ಯಕ್ತವಾಗುತ್ತಿದೆ.

ಟಿವಿ9 ಪ್ರತಿನಿಧಿ ಮೇಲೆ ತೆಲುಗು ಹೀರೋ ಮೋಹನ್ ಬಾಬು ಹಲ್ಲೆ ನಡೆಸಿದ್ದಾರೆ. ಹೈದರಾಬಾದ್​​ನ ಮಂಚುಟೌನ್​ನ ಜಲ್ಲಪಲ್ಲಿ ಬಳಿ ಗೂಂಡಾಗಿರಿ ಮಾಡಲಾಗಿದೆ. ಕೌಟುಂಬಿಕ ಕಲಹದ ಬಗ್ಗೆ ವರದಿಗೆ ತೆರಳಿದ್ದಾಗ ದುಂಡಾವರ್ತನೆ ತೋರಿದ್ದಾರೆ. ‘ಟಿವಿ9’ ವಾಹಿನಿಯ ಲೋಗೋ ಕಿತ್ತುಕೊಂಡು ವರದಿಗಾರನಿಗೆ ಮೋಹನ್ ​ಬಾಬು ಥಳಿಸಿದ್ದಾರೆ. ಮಾಧ್ಯಮ ಸಿಬ್ಬಂದಿಯೊಂದಿಗೆ ಅವರು ಅಸಭ್ಯ ವರ್ತನೆ ತೋರಿದ್ದಾರೆ.

ಘಟನೆ ಬಳಿಕ ಮೋಹನ್ ​ಬಾಬು ಬಳಿಯಿದ್ದ ಪರವಾನಗಿಯುಳ್ಳ ಗನ್​ ಸೀಜ್ ಮಾಡಲಾಗಿದೆ. ಮೋಹನ್ ಬಾಬು, ಪುತ್ರ ವಿಷ್ಣು ಅವರಿಗೆ ಸೇರಿದ ಗನ್​ಗಳನ್ನು ಹೈದರಾಬಾದ್ ಪೊಲೀಸರು ಜಪ್ತಿ ಮಾಡಿದ್ದಾರೆ. ಜಲಪಲ್ಲಿಯ ಮೋಹನ್ ಬಾಬು ಮನೆಯಲ್ಲಿ ಹೈಡ್ರಾಮಾ ನಡೆದಿದೆ. ಮನೋಜ್ ಮನೆಗೆ ಬರದಂತೆ ಸಿಬ್ಬಂದಿ ತಡೆದಿದ್ದಾರೆ.

ಮನೋಜ್ ಮತ್ತು ಮೌನಿಕಾ ಗೇಟುಗಳನ್ನು ಮುರಿದು ಒಳಹೋದರು. ಸುಮಾರು 70 ಬೌನ್ಸರ್‌ಗಳನ್ನು ನಿಯೋಜಿಸಿದ್ದರು. ಸ್ಥಳದಲ್ಲಿ ಪೊಲೀಸರು ಕೂಡ ಇದ್ದಾರೆ. ಮೋಹನ್ ಬಾಬು ಮನೆಯಲ್ಲಿ ಏನಾಗುತ್ತಿದೆ ಎನ್ನುವುದು ಸಸ್ಪೆನ್ಸ್ ಆಗಿದೆ. ಈ ಬಗ್ಗೆ ಪ್ರಶ್ನಿಸಿದಾಗ ಮೋಹನ್ ಬಾಬು ಅವರು ಹಲ್ಲೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಅಪ್ಪನ ಮೇಲೆ ದೂರು ನೀಡಿದ ನಟ, ಈಗ ಅಣ್ಣನ ಮೇಲೂ ಆರೋಪ

ಜಲಪಲ್ಲಿಯಲ್ಲಿರುವ ಮೋಹನ್ ಬಾಬು ನಿವಾಸದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ತೆಲಂಗಾಣ ಎಡಿಜಿಪಿ ಅವರನ್ನು ಭೇಟಿಯಾದ ನಂತರ ಮನೋಜ್ ದಂಪತಿ ನಿವಾಸಕ್ಕೆ ಆಗಮಿಸಿದಾಗ ಭದ್ರತಾ ಸಿಬ್ಬಂದಿ ತಡೆದರು. ಅವರು ಗೇಟ್‌ಗಳನ್ನು ಒಡೆದು ಒಳಗೆ ಪ್ರವೇಶಿಸಿದರು. ಇದರಿಂದ ಅಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಗಳು ಮನೆಯಲ್ಲೇ ಇದ್ದಾಳೆ ಎಂದು ಮನೋಜ್ ಆತಂಕ ವ್ಯಕ್ತಪಡಿಸಿದರು. ಭದ್ರತಾ ಸಿಬ್ಬಂದಿ ಗೇಟ್ ತೆರೆಯದ ಕಾರಣ ಅವರು ಸ್ವಲ್ಪ ಹೊತ್ತು ಕಾರಿನಲ್ಲಿಯೇ ಇದ್ದರು. ನಂತರ ಅವರು ಗೇಟ್‌ಗಳನ್ನು ತಳ್ಳಿದರು ಮತ್ತು ಬಲವಂತವಾಗಿ ಒಳಗೆ ಬಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:52 pm, Tue, 10 December 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ