AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಹನ್ ಬಾಬು ಮ್ಯಾನೇಜರ್ ಬಂಧನ, ಹಿರಿಯ ನಟನಿಗೂ ಶುರು ಭೀತಿ

Mohan Babu: ತೆಲುಗು ಚಿತ್ರರಂಗದ ತಾರಾ ಕುಟುಂಬದಲ್ಲಿ ಒಂದಾದ ಮಂಚು ಕುಟುಂಬದ ವಿವಾದ ಬೀದಿಗೆ ಬಂದಿದೆ. ನಟ ಮಂಚು ಮನೋಜ್ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಹಿರಿಯ ನಟ ಮೋಹನ್ ಬಾಬು ಅವರ ಮ್ಯಾನೇಜರ್ ವೆಂಕಟ್ ಕಿರಣ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ಮೋಹನ್ ಬಾಬು ಮ್ಯಾನೇಜರ್ ಬಂಧನ, ಹಿರಿಯ ನಟನಿಗೂ ಶುರು ಭೀತಿ
ಮಂಚು ಕುಟುಂಬ
ಮಂಜುನಾಥ ಸಿ.
|

Updated on: Dec 11, 2024 | 7:37 PM

Share

ಹಿರಿಯ ನಟ ಮೋಹನ್ ಬಾಬು ಅವರ ಕುಟುಂಬ ಜಗಳ ಈಗ ಬೀದಿಗೆ ಬಂದಿದೆ. ಕಳೆದ ಕೆಲ ವರ್ಷಗಳಿಂದಲೂ ಮೋಹನ್ ಬಾಬು ಅವರ ಮಂಚು ಕುಟುಂಬದಲ್ಲಿ ಆಂತರಿಕ ಕಲಹಗಳು ಇದ್ದವು. ಮೋಹನ್ ಬಾಬು ಕೊನೆಯ ಪುತ್ರ ಮಂಚು ಮನೋಜ್ ಹಾಗೂ ಮಂಚು ವಿಷ್ಣು ನಡುವೆ ಭಿನ್ನಾಭಿಪ್ರಾಯಗಳು ಇದ್ದವು. ಕೆಲ ದಿನದ ಹಿಂದಷ್ಟೆ ಮಂಚು ಮನೋಜ್, ತಂದೆ ಮೋಹನ್ ಬಾಬು ವಿರುದ್ಧ ಹಲ್ಲೆ ಆರೋಪ ಮಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಮೋಹನ್ ಬಾಬು ಸಹ ಮಂಚು ಮನೋಜ್ ವಿರುದ್ಧ ಹಲ್ಲೆ ಆರೋಪ ಮಾಡಿ ದೂರು ನೀಡಿದ್ದರು. ಇದೀಗ ಮಂಚು ಮನೋಜ್ ದೂರು ಆಧರಿಸಿ ಮೋಹನ್ ಬಾಬು ಅವರ ಮ್ಯಾನೇಜರ್ ವೆಂಕಟ್ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕೆಲ ದಿನದ ಹಿಂದೆ ಹೈದರಾಬಾದ್​ ಪೊಲೀಸರಿಗೆ ದೂರು ನೀಡಿದ್ದ ಮಂಚು ಮನೋಜ್, ತಮ್ಮದೇ ಮನೆಯಲ್ಲಿ (ಮೋಹನ್ ಬಾಬು ಮನೆ) ವೆಂಕಟ್ ಕಿರಣ್, ವಿಜಯ್ ಸೇರಿದಂತೆ ಇನ್ನೂ ಕೆಲವರು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆಂದು, ಕಿರಣ್ ಎಂಬಾತ ಮನೆಯಲ್ಲಿದ್ದ ಸಿಸಿಟಿವಿ ವಿಡಿಯೋಗಳನ್ನು ಡಿಲೀಟ್ ಮಾಡಿದ್ದಾನೆಂದು ಆರೋಪ ಮಾಡಿದ್ದರು. ಆ ಎಲ್ಲರೂ ತಮ್ಮ ತಂದೆಯ ಸೂಚನೆಯ ಮೇರೆಗೆ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಇದನ್ನೂ ಓದಿ:ಪ್ರಶ್ನೆ ಕೇಳಲು ಹೋದ ವರದಿಗಾರನ ಮೇಲೆ ನಟ ಮೋಹನ್ ಬಾಬು ಹಲ್ಲೆ

ದೂರಿನ ಅನ್ವಯ ಇದೀಗ ಪೊಲೀಸರು ವೆಂಕಟ್ ಕಿರಣ್ ಅನ್ನು ಬಂಧಿಸಿದ್ದು, ವಿಚಾರಣೆ ಆರಂಭಿಸಿದ್ದಾರೆ. ಮಂಚು ಮನೋಜ್, ತಮ್ಮ ತಂದೆ ಮೋಹನ್​ ಬಾಬು ವಿರುದ್ಧವೂ ದೂರು ದಾಖಲಿಸಿದ್ದು, ಪೊಲೀಸರು ಈಗಾಗಲೇ ಮೋಹನ್ ಬಾಬುಗೆ ನೊಟೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಆದರೆ ಮೋಹನ್ ಬಾಬು ಆಸ್ಪತ್ರೆಗೆ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗಿಲ್ಲ.

ಭಾನುವಾರ ಮೋಹನ್ ಬಾಬು ಮನೆಯಲ್ಲಿ ಹೈಡ್ರಾಮಾ ನಡೆದಿದೆ. ಮೋಹನ್ ಬಾಬು ಮನೆಗೆ ಮಂಚು ಮನೋಜ್ ನುಗ್ಗಲು ಯತ್ನಿಸಿದ್ದು, ಈ ಸಮಯದಲ್ಲಿ ಮನೋಜ್ ಅನ್ನು ಮೋಹನ್ ಬಾಬು ತಡೆದಿದ್ದಾರೆ. ಈ ವೇಳೆ ಮೋಹನ್ ಬಾಬು ಅವರಿಗೆ ಪ್ರಶ್ನೆ ಕೇಳಲು ಮುಂದಾದ ಟಿವಿ9 ವರದಿಗಾರನ ಮೇಲೆ ಮೋಹನ್ ಬಾಬು ಹಲ್ಲೆ ಮಾಡಿದ್ದಾರೆ. ಮೋಹನ್ ಬಾಬು ಹಲ್ಲೆ ಮಾಡಿರುವ ವಿಡಿಯೋ, ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮೋಹನ್ ಬಾಬು ಮನೆ ಎದುರು ತೆಲುಗು ಮಾಧ್ಯಮದ ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ