‘ಜೈಲರ್’ ಸಿನಿಮಾ ಗೆಲುವಿನ ಬೆನ್ನಲ್ಲೇ ಹೊಸ ಸಿನಿಮಾ ರಿಲೀಸ್ ದಿನಾಂಕ ಘೋಷಿಸಿದ ಮೋಹನ್​ಲಾಲ್

‘ಜೈಲರ್’ ಸಿನಿಮಾದಲ್ಲಿ ಮೋಹನ್​ಲಾಲ್ ಅವರು ಮ್ಯಾಥೀವ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು. ಅತಿಥಿ ಪಾತ್ರ ಆದರೂ ಅದಕ್ಕೆ ಸಾಕಷ್ಟು ತೂಕ ಇತ್ತು. ಈಗ ‘ಮಲೈ ಕೋಟ್ಟ ವಾಲಿಬನ್’ ಚಿತ್ರದ ಮೂಲಕ ಅವರು ಗಮನ ಸೆಳೆಯಲು ಮುಂದಾಗಿದ್ದಾರೆ.

‘ಜೈಲರ್’ ಸಿನಿಮಾ ಗೆಲುವಿನ ಬೆನ್ನಲ್ಲೇ ಹೊಸ ಸಿನಿಮಾ ರಿಲೀಸ್ ದಿನಾಂಕ ಘೋಷಿಸಿದ ಮೋಹನ್​ಲಾಲ್
ಮೋಹನ್​ಲಾಲ್
Follow us
|

Updated on: Sep 19, 2023 | 11:29 AM

ಮೋಹನ್​ಲಾಲ್ ಅವರು ‘ಜೈಲರ್’ ಸಿನಿಮಾದಲ್ಲಿ (Jailer Movie) ಅತಿಥಿಪಾತ್ರ ಮಾಡಿದ್ದರು. ಸಿನಿಮಾ ಗೆಲುವಿನಲ್ಲಿ ಅವರ ಪಾತ್ರವೂ ಇದೆ. ಈಗ ಅವರ ನಟನೆಯ ಹೊಸ ಸಿನಿಮಾ ‘ಮಲೈ ಕೋಟ್ಟ ವಾಲಿಬನ್’ (Malaikottai Vaaliban) ರಿಲೀಸ್ ದಿನಾಂಕ ಘೋಷಣೆ ಆಗಿದೆ. ಗಣರಾಜ್ಯೋತ್ಸವದ ಪ್ರಯುಕ್ತ 2024ರ ಜನವರಿ 25ರಂದು ಸಿನಿಮಾ ರಿಲೀಸ್ ಆಗಲಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ. ಈ ಚಿತ್ರದ ಟ್ರೇಲರ್ ರಿಲೀಸ್​ಗಾಗಿ ಅಭಿಮಾನಿಗಳು ಕಾದಿದ್ದಾರೆ.

‘ಮಲೈ ಕೋಟ್ಟ ವಾಲಿಬನ್’ ಸಿನಿಮಾ 2022ರಲ್ಲೇ ಘೋಷಣೆ ಆಯಿತು. ಈ ಚಿತ್ರದ ಶೂಟಿಂಗ್ ವಿಳಂಬ ಆಗಿದೆ. ಆದರೆ, ಸಿನಿಮಾ ಬಗ್ಗೆ ಇರುವ ನಿರೀಕ್ಷೆ ಕಡಿಮೆ ಆಗಿಲ್ಲ. ಈಗ ಗಣೇಶ ಚತುರ್ಥಿ ಸಂದರ್ಭದಲ್ಲಿ ಸಿನಿಮಾ ರಿಲೀಸ್ ದಿನಾಂಕದ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮೋಹನ್​ಲಾಲ್ ಬರೆದುಕೊಂಡಿದ್ದಾರೆ. ‘ಕೌಂಟ್​ಡೌನ್ ಶುರುವಾಗಿದೆ. ವಾಲಿಬನ್ ಸಿನಿಮಾ ಜನವರಿ 25, 2024ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ’ ಎಂದು ಮೋಹನ್​ಲಾಲ್ ಬರೆದುಕೊಂಡಿದ್ದಾರೆ.

‘ಮಲೈ ಕೋಟ್ಟ ವಾಲಿಬನ್’ ಚಿತ್ರವನ್ನು ಲಿಜೋ ಜೊಸೆ ಪೆಲ್ಲಿಸೆರ್ರಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಕೂಡ ಗಮನ ಸೆಳೆದಿದೆ. ಮೋಹನ್​ಲಾಲ್ ಅವರು ಹೊಸ ರೀತಿಯ ಗೆಟಪ್​ನಲ್ಲಿ ಆಗಮಿಸಿದ್ದಾರೆ. ಅವರ ಹಿಂಭಾಗದಲ್ಲಿ ಮರಳುಗಾಡಿದೆ. ಇದು ಗಮನ ಸೆಳೆಯುತ್ತಿದೆ. ನಿರ್ದೇಶಕರ ಕೆಲಸವನ್ನು ಮೋಹನ್​ಲಾಲ್ ಹೊಗಳಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಮೋಹನ್​ಲಾಲ್ ಸಾಹಸ: ನಂದ ಕಿಶೋರ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ

‘ಜೈಲರ್’ ಸಿನಿಮಾದಲ್ಲಿ ಮೋಹನ್​ಲಾಲ್ ಅವರು ಮ್ಯಾಥೀವ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು. ಅತಿಥಿ ಪಾತ್ರ ಆದರೂ ಅದಕ್ಕೆ ಸಾಕಷ್ಟು ತೂಕ ಇತ್ತು. ಈಗ ‘ಮಲೈ ಕೋಟ್ಟ ವಾಲಿಬನ್’ ಚಿತ್ರದ ಮೂಲಕ ಅವರು ಗಮನ ಸೆಳೆಯಲು ಮುಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ