AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohanlal Birthday: ಕುಸ್ತಿಯಲ್ಲಿ ಸ್ಟೇಟ್​ ಚಾಂಪಿಯನ್​ ಆಗಿದ್ದ ಮೋಹನ್​ಲಾಲ್​ ನಂತರ ನಟನಾಗಿದ್ದು ಹೇಗೆ?

Happy Birthday Mohanlal: ​ಮೋಹನ್​ಲಾಲ್​ ಅವರು ಅನೇಕರಿಗೆ ಸ್ಫೂರ್ತಿ ಆಗಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೇ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ದಿಗ್ಗಜ ನಟನ ಜನ್ಮದಿನಕ್ಕೆ ಶುಭ ಕೋರುತ್ತಿದ್ದಾರೆ.

Mohanlal Birthday: ಕುಸ್ತಿಯಲ್ಲಿ ಸ್ಟೇಟ್​ ಚಾಂಪಿಯನ್​ ಆಗಿದ್ದ ಮೋಹನ್​ಲಾಲ್​ ನಂತರ ನಟನಾಗಿದ್ದು ಹೇಗೆ?
ಮೋಹನ್​ಲಾಲ್
TV9 Web
| Edited By: |

Updated on: May 21, 2022 | 11:42 AM

Share

ಮಲಯಾಳಂ ಚಿತ್ರರಂಗದಲ್ಲಿ 4 ದಶಕಗಳಿಂದ ಸೂಪರ್​ ಸ್ಟಾರ್​ ಆಗಿ ಮಿಂಚುತ್ತಿದ್ದಾರೆ ಮೋಹನ್​ಲಾಲ್​. ಇಂದಿನ ಯುವ ನಟರಿಗೂ ಪೈಪೋಟಿ ನೀಡುತ್ತ ಅವರು ಡಿಮ್ಯಾಂಡ್​ ಉಳಿಸಿಕೊಂಡಿದ್ದಾರೆ. ಒಂದಕ್ಕಿಂತ ಒಂದು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಇಂದು (ಮೇ 21) ಅವರ ಜನ್ಮದಿನದ (Mohanlal Birthday) ಪ್ರಯುಕ್ತ ಅಪಾರ ಸಂಖ್ಯೆಯ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. 62ನೇ ವಯಸ್ಸಿಗೆ ಕಾಲಿಟ್ಟಿರುವ ಅವರಿಗೆ ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಮೋಹನ್​ಲಾಲ್ (Mohanlal) ಜೊತೆ ಕೆಲಸ ಮಾಡಬೇಕು ಎಂದು ಅನೇಕ ಯುವ ನಿರ್ದೇಶಕರು ಹಂಬಲ ವ್ಯಕ್ತಪಡಿಸುತ್ತಿದ್ದಾರೆ. ಅವರು ನಟಿಸಿದ ‘ದೃಶ್ಯಂ’ ಮತ್ತು ‘ದೃಶ್ಯಂ 2’ ಸಿನಿಮಾವನ್ನು ಇಡೀ ದೇಶವೇ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದೆ. ‘ಪುಲಿಮುರುಗನ್​’, ‘ಮರಕ್ಕರ್​’ ಮುಂತಾದ ಅದ್ದೂರಿ ಸಿನಿಮಾಗಳಲ್ಲಿ ನಟಿಸುವ ಮೂಲಕವೂ ಮೋಹನ್​ಲಾಲ್​ ಸೈ ಎನಿಸಿಕೊಂಡಿದ್ದಾರೆ. ವಿಶೇಷ ಎಂದರೆ, ನಟನಾಗುವುದಕ್ಕೂ ಮುನ್ನ ಅವರು ವೃತ್ತಿಪರ ಕುಸ್ತಿಪಟು ಆಗಿದ್ದರು. ಕುಸ್ತಿಯಲ್ಲಿ ಅವರು ರಾಜ್ಯ ಮಟ್ಟದ ಚಾಂಪಿಯನ್​ ಕೂಡ ಆಗಿದ್ದರು. ಆದರೆ ಅವರು ಬದುಕು ಕಟ್ಟಿಕೊಂಡಿದ್ದು ಬಣ್ಣದ ಲೋಕದಲ್ಲಿ. ಹಾಗಾದರೆ ಕುಸ್ತಿ (Wrestling) ಪಟು ಆಗಬೇಕಿದ್ದ ಮೋಹನ್​ಲಾಲ್​ ಅವರು ನಟನಾಗಿ ಮುಂದುವರಿದಿದ್ದಕ್ಕೆ ಕಾರಣ ಏನು? ಇಲ್ಲಿದೆ ವಿವರ..

ಸ್ಟಾರ್​ ನಟನಾಗುವುದಕ್ಕೂ ಮುನ್ನ ಮೋಹನ್​ಲಾಲ್ ಅವರಿಗೆ ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ಇತ್ತು. ಅವರು ಅತ್ಯುತ್ತಮ ಕುಸ್ತಿ ಪಟು ಆಗಿದ್ದರು. ರಾಜ್ಯ ಮಟ್ಟದ ಚಾಂಪಿಯನ್​ ಆಗಿದ್ದ ಅವರು ರಾಷ್ಟ್ರ ಮಟ್ಟದ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದರು. ದೆಹಲಿಯಲ್ಲಿ ಆಯೋಜನೆಗೊಂಡಿದ್ದ ಸ್ಪರ್ಧೆಗೆ ಅವರು ತೆರಳಬೇಕಿತ್ತು. ಆದರೆ ಮೊದಲ ಸಿನಿಮಾಗೆ ಆಡಿಷನ್​ ನೀಡಲು ತೆರಳಿದ್ದರಿಂದ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸುವುದು ಮಿಸ್​ ಆಯಿತು. ಬಳಿಕ ಅವರು ಚಿತ್ರರಂಗದಲ್ಲೇ ಭವಿಷ್ಯ ಕಟ್ಟಿಕೊಂಡರು.

ಇದನ್ನೂ ಓದಿ
Image
ದೊಡ್ಡ ವಂಚಕನಿಗೂ ಮೋಹನ್​ಲಾಲ್​​ಗೂ ನಂಟು? ಸ್ಟಾರ್​ ನಟನಿ​ಗೆ ಬಂತು ಇಡಿ ನೋಟಿಸ್
Image
‘ತಲೆ ಉಪಯೋಗಿಸಿ ಸ್ವಂತವಾಗಿ ಏನನ್ನಾದರೂ ಮಾಡಿ’; ಕರಣ್ ಜೋಹರ್​ಗೆ ನೆಟ್ಟಿಗರ ಟೀಕೆ
Image
Mohanlal: ಡೈರೆಕ್ಷನ್‌ ಕ್ಯಾಪ್ ತೊಟ್ಟ ಮೊದಲ ಸಿನಿಮಾದಲ್ಲೇ‌ ಗುರುತು ಸಿಗದಷ್ಟು ಬದಲಾದ ಮೋಹನ್‌ಲಾಲ್; ಏನಿದರ ವಿಶೇಷ?
Image
ಹೊರ ಜಗತ್ತಿಗೆ ತಿಳಿಯಲೇ ಇಲ್ಲ ಮೋಹನ್​ಲಾಲ್​-ಪವನ್​ ಕಲ್ಯಾಣ್​ ಭೇಟಿ; ಏನಿದರ ಉದ್ದೇಶ?

ನೂರಾರು ಸಿನಿಮಾಗಳಲ್ಲಿ ನಟಿಸಿ ಅನೇಕ ಸೂಪರ್​ ಹಿಟ್​ ಚಿತ್ರಗಳನ್ನು ನೀಡಿರುವ ಮೋಹನ್​ಲಾಲ್​ ಅವರು ಅನೇಕರಿಗೆ ಸ್ಫೂರ್ತಿ ಆಗಿದ್ದಾರೆ ಅಭಿಮಾನಿಗಳು ಮಾತ್ರವಲ್ಲದೇ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ದಿಗ್ಗಜ ನಟನಿಗೆ ಶುಭ ಕೋರುತ್ತಿದ್ದಾರೆ.

ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಮೋಹನ್​ಲಾಲ್​ ಅವರಿಗೆ ಬೇರೆ ಭಾಷೆಯ ಚಿತ್ರರಂಗದ ಜೊತೆಗೂ ನಂಟು ಇದೆ. ಕನ್ನಡದಲ್ಲಿ ಪುನೀತ್​ ರಾಜ್​ಕುಮಾರ್​ ನಟಿಸಿದ್ದ ‘ಮೈತ್ರಿ’ ಚಿತ್ರದಲ್ಲಿ ಮೋಹನ್​ಲಾಲ್​ ಕೂಡ ಅಭಿನಯಸಿದ್ದರು. ಆ ಸಿನಿಮಾ 2015ರಲ್ಲಿ ತೆರೆಕಂಡಿತು. ತಮಿಳು ಮತ್ತು ತೆಲುಗಿನ ಹಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದಿಂದಲೂ ಅಭಿಮಾನಿಗಳು ಅವರ ಹುಟ್ಟುಹಬ್ಬದ ಸಲುವಾಗಿ ವಿಶ್​ ಮಾಡುತ್ತಿದ್ದಾರೆ.

ನಟನಾಗಿ ಮಾತ್ರವಲ್ಲದೇ ಕಿರುತೆರೆ ಕಾರ್ಯಕ್ರಮಗಳ ನಿರೂಪಕನಾಗಿಯೂ ಮೋಹನ್​ಲಾಲ್​ ಫೇಮಸ್​ ಆಗಿದ್ದಾರೆ. ಮಲಯಾಳಂ ಬಿಗ್​ ಬಾಸ್​ ನಾಲ್ಕು ಸೀಸನ್​ಗಳನ್ನು ಯಶಸ್ವಿಯಾಗಿ ನಿರೂಪಣೆ ಮಾಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಸಿಂಗಿಂಗ್​ ರಿಯಾಲಿಟಿ ಶೋನಲ್ಲಿ ಅವರು ಜಡ್ಜ್​ ಆಗಿ ಕೆಲಸ ಮಾಡಿದ್ದಾರೆ. ಸಿನಿಮಾ ನಿರ್ಮಾಪಕನಾಗಿ, ವಿತರಕನಾಗಿಯೂ ಅವರು ದಶಕಗಳ ಅನುಭವ ಹೊಂದಿದ್ದಾರೆ. ಹಲವಾರು ಪ್ರಶಸ್ತಿಗಳನ್ನು ಮೋಹನ್​ಲಾಲ್​ ಬಾಚಿಕೊಂಡಿದ್ದಾರೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್