Mohanlal: ‘ದೃಶ್ಯಂ 3’ ಬರೋದು ಖಚಿತ; ನಿರ್ಮಾಪಕರಿಂದಲೇ ಹೊರಬಿತ್ತು ಅಧಿಕೃತ ಮಾಹಿತಿ

Mohanlal | Drishyam 3: ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರ್ಮಾಪಕರು ಈ ಸುದ್ದಿ ನೀಡಿದ್ದಾರೆ. ಮೋಹನ್​ ಲಾಲ್​ ನಟಿಸಲಿರುವ ‘ದೃಶ್ಯಂ 3’ ಚಿತ್ರ ಶೀಘ್ರವೇ ಸೆಟ್ಟೇರಲಿದೆ.

Mohanlal: ‘ದೃಶ್ಯಂ 3’ ಬರೋದು ಖಚಿತ; ನಿರ್ಮಾಪಕರಿಂದಲೇ ಹೊರಬಿತ್ತು ಅಧಿಕೃತ ಮಾಹಿತಿ
ಮೋಹನ್ ಲಾಲ್
Follow us
| Updated By: ಮದನ್​ ಕುಮಾರ್​

Updated on:Aug 29, 2022 | 10:30 AM

ಭಾರತೀಯ ಚಿತ್ರರಂಗದಲ್ಲಿ ‘ದೃಶ್ಯಂ’ (Drishyam) ಸಿನಿಮಾ ಮಾಡಿದ ಮೋಡಿ ಅಷ್ಟಿಷ್ಟಲ್ಲ. ಮರ್ಡರ್​ ಮಿಸ್ಟರಿ ಕಥೆ ಹೊಂದಿರುವ ಆ ಸಿನಿಮಾದಿಂದ ಮೋಹನ್​ ಲಾಲ್ (Mohanlal)​ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ಸಿಕ್ಕಿತು. ಮಲಯಾಳಂನಲ್ಲಿ ಸಿದ್ಧಗೊಂಡ ‘ದೃಶ್ಯಂ’ ಸಿನಿಮಾ ಬೇರೆ ಬೇರೆ ಭಾಷೆಗಳಿಗೆ ರಿಮೇಕ್​ ಆಗಿಯೂ ಯಶಸ್ಸು ಗಳಿಸಿತು. ನಿರ್ದೇಶಕ ಜೀತು ಜೋಸೆಫ್​ ಅವರಿಗೆ ಆ ಚಿತ್ರದಿಂದ ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೆಚ್ಚಿತು. ಇಷ್ಟೆಲ್ಲ ಸದ್ದು ಮಾಡಿದ ಈ ಚಿತ್ರದ ‘ಪಾರ್ಟ್​ 2’ ಕೂಡ ಸೂಪರ್​ ಹಿಟ್​ ಆಯಿತು. ‘ದೃಶ್ಯಂ 2’ ಚಿತ್ರ ನೇರವಾಗಿ ಒಟಿಟಿಯಲ್ಲಿ ತೆರೆಕಂಡು ಯಶಸ್ಸು ಪಡೆಯಿತು. ಈಗ ‘ದೃಶ್ಯಂ 3’ (Drishyam 3) ಬರೋದು ಕೂಡ ಖಚಿತವಾಗಿದೆ. ಸ್ವತಃ ನಿರ್ಮಾಪಕರೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಆ ಮೂಲಕ ಫ್ಯಾನ್ಸ್​ ವಲಯದಲ್ಲಿ ಭಾರಿ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದಾರೆ.

‘ದೃಶ್ಯಂ’ ಸರಣಿ ಸಿನಿಮಾಗಳನ್ನು ನಿರ್ಮಾಪಕ ಆ್ಯಂಟನಿ ಪೆರುಂಬವೂರ್ ಅವರು ನಿರ್ಮಾಣ ಮಾಡಿದ್ದಾರೆ. ‘ದೃಶ್ಯಂ’ ಮತ್ತು ‘ದೃಶ್ಯಂ 2’ ಚಿತ್ರದಿಂದ ಅವರಿಗೆ ಭರ್ಜರಿ ಲಾಭ ಆಗಿದೆ. ಈಗ ಅವರು ಮೂರನೇ ಪಾರ್ಟ್​ ಮಾಡಲು ಸಿದ್ಧರಾಗಿದ್ದಾರೆ. ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಈ ಸುದ್ದಿಯನ್ನು ನೀಡಿದ್ದಾರೆ. ಮೂರನೇ ಪಾರ್ಟ್​ನಲ್ಲೂ ಹೀರೋ ಆಗಿ ಮೋಹನ್ ಲಾಲ್​ ಮಿಂಚಲಿದ್ದಾರೆ.

ಇದನ್ನೂ ಓದಿ
Image
Mohanlal Birthday: ಕುಸ್ತಿಯಲ್ಲಿ ಸ್ಟೇಟ್​ ಚಾಂಪಿಯನ್​ ಆಗಿದ್ದ ಮೋಹನ್​ಲಾಲ್​ ನಂತರ ನಟನಾಗಿದ್ದು ಹೇಗೆ?
Image
Drushyam 2 Teaser: ಬಿಡುಗಡೆಯಾಯ್ತು ವೆಂಕಟೇಶ್ ನಟನೆಯ ದೃಶ್ಯಂ 2 ಟೀಸರ್; ಚಿತ್ರದ ಬಿಡುಗಡೆ ಯಾವಾಗ? ಇಲ್ಲಿದೆ ಮಾಹಿತಿ
Image
Mohanlal: ‘ದೃಶ್ಯಂ’ ಸರಣಿಯ ಯಶಸ್ಸಿನ ನಂತರ ಮತ್ತೆ ಒಂದಾದ ಮೋಹನ್​ಲಾಲ್, ಜೀತು ಜೋಸೆಫ್ ಜೋಡಿ; ಯಾವ ಚಿತ್ರ?
Image
ದೃಶ್ಯಂ ಸಿನಿಮಾ ನಿರ್ದೇಶಕರ ಸಾವಿನ ಸುದ್ದಿ ಕೇವಲ ವದಂತಿ ಎಂದ ಸ್ನೇಹಿತರು

ಕುಟುಂಬದ ರಕ್ಷಣೆಗಾಗಿ ಕಥಾನಾಯಕನ ಪತ್ನಿ ಒಂದು ಕೊಲೆ ಮಾಡುತ್ತಾಳೆ. ಆ ಕೊಲೆ ಪ್ರಕರಣದಿಂದ ಪತ್ನಿ ಮತ್ತು ಮಕ್ಕಳನ್ನು ಬಚಾವ್​ ಮಾಡಲು ಹೀರೋ ಕಷ್ಟಪಡುತ್ತಾನೆ. ಬುದ್ಧಿವಂತಿಕೆಯಿಂದಲೇ ಎಲ್ಲವನ್ನೂ ಆತ ನಿಭಾಯಿಸುತ್ತಾನೆ. ಪೊಲೀಸರಿಗೆ ಹೆಣವೇ ಸಿಗದ ರೀತಿಯಲ್ಲಿ ಆತ ಚಾಲಾಕಿತನ ತೋರಿಸುತ್ತಾನೆ. ಇದು ‘ದೃಶ್ಯಂ’ ಸಿನಿಮಾದ ಕಥೆ. ಅದರ ಮುಂದುವರಿದ ಭಾಗವಾಗಿ ‘ದೃಶ್ಯಂ 2’ ಚಿತ್ರ ಮೂಡಿಬಂದಿತ್ತು.

‘ದೃಶ್ಯಂ 2’ ಚಿತ್ರದಲ್ಲಿ ಹೆಣ ಸಿಗುತ್ತದೆ. ಆದರೂ ಕೂಡ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳುವಲ್ಲಿ ಕಥಾನಾಯಕ ಯಶಸ್ವಿ ಆಗುತ್ತಾನೆ. ಅಲ್ಲಿಗೆ ಆ ಕೇಸ್​ ಕ್ಲೋಸ್​ ಆಗುತ್ತದೆ. ಹಾಗಾದರೆ ‘ದೃಶ್ಯಂ 3’ ಚಿತ್ರದಲ್ಲಿ ಮತ್ತೆ ಆ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್​ ಸಿಗಲಿದೆಯಾ? ಮೂರನೇ ಪಾರ್ಟ್​ನಲ್ಲಿ ಹೀರೋಗೆ ಜೈಲು ಶಿಕ್ಷೆ ಆಗುತ್ತಾ? ಅಂತಿಮವಾಗಿ ಈ ಕಥೆಗೆ ಸಿಗುವ ಕನ್​ಕ್ಲೂಷನ್​ ಏನು ಎಂಬುದನ್ನು ತಿಳಿಯಲು ಮೋಹನ್​ ಲಾಲ್​ ಫ್ಯಾನ್ಸ್​ ಕಾಯುತ್ತಿದ್ದಾರೆ.

ಮೋಹನ್​ ಲಾಲ್​ ಅವರ ಕೈಗೆ ಬೇಡಿ ತೊಡಿಸಿರುವ ಒಂದು ಪೋಸ್ಟರ್​ ವೈರಲ್​ ಆಗಿದೆ. ಈ ಪೋಸ್ಟರ್​ ಶೇರ್​ ಮಾಡಿಕೊಳ್ಳುವ ಮೂಲಕ ‘ದೃಶ್ಯಂ 3’ ಚಿತ್ರದ ಮೇಲೆ ತಮಗೆಷ್ಟು ಕಾತರ ಇದೆ ಎಂಬುದನ್ನು ಫ್ಯಾನ್ಸ್​ ತೋರಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:30 am, Mon, 29 August 22

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ