AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಂಪುರನ್’ ಸಿನಿಮಾ ಬಗ್ಗೆ ಬಿಜೆಪಿ ಅಸಮಾಧಾನ, ಕಾಂಗ್ರೆಸ್ ಪ್ರತಿಕ್ರಿಯೆ ಏನು?

L2 Empuraan: ಮೋಹನ್​ಲಾಲ್ ನಟನೆಯ ‘ಎಲ್2 ಎಂಪುರಾನ್’ ಸಿನಿಮಾ ನಿನ್ನೆಯಷ್ಟೆ ದೇಶದಾದ್ಯಂತ ಬಿಡುಗಡೆ ಆಗಿದೆ. ಸಿನಿಮಾ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಆದರೆ ಸಿನಿಮಾಕ್ಕೆ ರಾಜಕೀಯ ಬಿಸಿ ಸಹ ತಟ್ಟುತ್ತಿದೆ. ಸಿನಿಮಾ ಕೆಲ ದೃಶ್ಯಗಳ ಬಗ್ಗೆ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಎಂಪುರನ್’ ಸಿನಿಮಾ ಬಗ್ಗೆ ಬಿಜೆಪಿ ಅಸಮಾಧಾನ, ಕಾಂಗ್ರೆಸ್ ಪ್ರತಿಕ್ರಿಯೆ ಏನು?
L2 Empuraan
ಮಂಜುನಾಥ ಸಿ.
|

Updated on: Mar 29, 2025 | 9:53 PM

Share

ಮೋಹನ್​ಲಾಲ್ (Mohanlal) ನಟಿಸಿ, ಪೃಥ್ವಿರಾಜ್ ಸುಕುಮಾರನ್ ನಿರ್ದೇಶನ ಮಾಡಿರುವ ‘ಎಲ್ 2: ಎಂಪುರಾನ್’ ಸಿನಿಮಾ ನಿನ್ನೆಯಷ್ಟೆ ದೇಶದಾದ್ಯಂತ ಬಿಡುಗಡೆ ಆಗಿದೆ. ಮೋಹನ್​ಲಾಲ್ ಅಭಿಮಾನಿಗಳಿಗೆ ಹಬ್ಬದಂತಾಗಿರುವ ಸಿನಿಮಾ ಮೊದಲ ದಿನ ಕೇರಳದಲ್ಲಿ ದಾಖಲೆಯ ಹಣ ಗಳಿಕೆ ಮಾಡಿದೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡುತ್ತಿದೆ. ಆದರೆ ‘ಎಂಪುರಾನ್’ ಸಿನಿಮಾಕ್ಕೆ ರಾಜಕೀಯದ ಬಿಸಿ ತಾಗಲು ಆರಂಭವಾಗಿದ್ದು, ಬಿಜೆಪಿ ಪಕ್ಷದ ಕೆಲ ಮುಖಂಡರು ಸಿನಿಮಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಎಲ್2: ಎಂಪುರಾನ್’ ಸಿನಿಮಾದ ಕೆಲವು ದೃಶ್ಯಗಳು ಬಿಜೆಪಿ ಪೋಷಿಸಿಕೊಂಡು ಬಂದಿರುವ ಆಂಟಿ ಮುಸ್ಲಿಂ ನರೇಟಿವ್ ಅನ್ನು ಒಡೆಯುವಂತಿದೆ ಎನ್ನಲಾಗಿದೆ. ಹಿಂದೂ ತೀವ್ರಗಾಮಿಯೊಬ್ಬ ಗರ್ಭಿಣಿ ಮುಸ್ಲಿಂ ಮಹಿಳೆಯ ಮೇಲೆ ದಾಳಿ ಮಾಡುವ ದೃಶ್ಯಗಳು ಸಿನಿಮಾದಲ್ಲಿದ್ದು, ಇದು ಗೋಧ್ರಾ ಹತ್ಯಾಕಾಂಡವನ್ನು ನೆನಪಿಸುವಂತಿದೆ ಎನ್ನಲಾಗಿದೆ. ಮಾತ್ರವಲ್ಲದೆ ತೀವ್ರತರವಾದ ಹಿಂದುತ್ವವವನ್ನು ವಿರೋಧಿಸುವ ಸಂಭಾಷಣೆ, ದೃಶ್ಯಗಳು ಈ ಸಿನಿಮಾದಲ್ಲಿದ್ದು, ಇವಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮೋಹನ್​ಲಾಲ್, ನರೇಂದ್ರ ಮೋದಿಯ ಆಪ್ತ ನಟರಲ್ಲಿ ಒಬ್ಬರು. ಬಿಜೆಪಿ ಬಗ್ಗೆ ಒಲವಿರುವ ನಟ ಅವರು, ಹಾಗಿದ್ದರೂ ಅವರು ಈ ದೃಶ್ಯಗಳು ಸಿನಿಮಾದಲ್ಲಿರಲು ಹೇಗೆ ಬಿಟ್ಟರು? ಎಂಬ ಪ್ರಶ್ನೆಯನ್ನು ಕೇರಳ ಬಿಜೆಪಿ ಕಾರ್ಯಕರ್ತರು ಕೇಳುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಇತರೆ ಕೆಲ ಪಕ್ಷಗಳು, ‘ಎಲ್​2: ಎಂಪುರಾನ್’ ಸಿನಿಮಾ ಅನ್ನು ಸ್ವಾಗತಿಸಿದ್ದು, ‘ದಿ ಕೇರಳ ಸ್ಟೋರಿ’, ‘ದಿ ಕಶ್ಮೀರ್ ಫೈಲ್ಸ್’ ಅಂಥಹಾ ಸಿನಿಮಾಗಳಿಂದ ರಾಜಕೀಯ ಲಾಭ ಪಡೆದುಕೊಂಡಿರುವ ಬಿಜೆಪಿ, ಈಗ ‘ಎಂಪುರಾನ್’ ಸಿನಿಮಾ ಅನ್ನು ವಿರೋಧಿಸುತ್ತಿರುವುದು ಹಾಸ್ಯಾಸ್ಪದ ಎಂದಿದೆ.

ಇದನ್ನೂ ಓದಿ
Image
ಕಂಡಕ್ಟರ್ ಆಗಿದ್ದಾಗಲೇ ರಜನಿಕಾಂತ್ ಸ್ಟೈಲಿಶ್​
Image
ಕನ್ನಡ ಸಿನಿಮಾ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪುಷ್ಪ ಚಿತ್ರದ ಸಂಗೀತ ಸಂಯೋಜಕ
Image
‘ಮಾಣಿಕ್ಯ’ ಚಿತ್ರದ ನಟಿ ರನ್ಯಾ ಬಳಿ ಸಿಕ್ಕಿದ್ದು ಬರೋಬ್ಬರಿ 15 ಕೆಜಿ ಚಿನ್ನ
Image
ಪುಡಿರೌಡಿ ತರ ಆಡೋದು ಬಿಡಿ, ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಕೌಂಟರ್

ಇದನ್ನೂ ಓದಿ:‘ಮುಸ್ಲಿಮರ ಬಳಿ ಮೋಹನ್​ಲಾಲ್ ಕ್ಷಮೆ ಕೇಳಬೇಕು’; ಮಾಡಿದ ತಪ್ಪೇನು?

‘ಎಲ್​ 2: ಎಂಪುರಾನ್’ ಸಿನಿಮಾ ರಾಜಕೀಯ, ಕೌಟುಂಬಿಕ ಬಾಂಧವ್ಯ, ಭರ್ಜರಿ ಆಕ್ಷನ್, ಥ್ರಿಲ್ಲರ್ ಕತೆಯನ್ನು ಹೊಂದಿರುವ ಸಿನಿಮಾ ಆಗಿದೆ. ಸಿನಿಮಾದಲ್ಲಿ ಮೋಹನ್​ಲಾಲ್ ನಾಯಕ, ಪೃಥ್ವಿರಾಜ್ ಸುಕುಮಾರನ್ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಮಂಜು ವಾರಿಯರ್, ಟೊವಿನೊ ಥಾಮಸ್, ಕನ್ನಡದ ನಟ ಕಿಶೋರ್ ಇನ್ನೂ ಹಲವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಆಂಟೊನಿ ಪೆರಂಬೂರು ಬಂಡವಾಳ ಹೂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್