AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohanlal: ವೈರಲ್​ ಆಗಿದೆ ‘ಮಲೈಕೋಟೈ ವಾಲಿಬನ್​’ ಫಸ್ಟ್​ ಲುಕ್​; 62ರ ಪ್ರಾಯದಲ್ಲೂ ಮೋಹನ್​ಲಾಲ್​ ಸಾಹಸ

Malaikottai Vaaliban First Look Poster: ‘ಮಲೈಕೋಟೈ ವಾಲಿಬನ್​​’ ಸಿನಿಮಾ ಕನ್ನಡ, ತಮಿಳು, ತೆಲುಗು, ಹಿಂದಿಗೂ ಡಬ್​ ಆಗಿ ಬಿಡುಗಡೆ ಆಗಲಿದೆ. ಇದರ ಫಸ್ಟ್​ ಲುಕ್​ ಪೋಸ್ಟರ್​ ಗಮನ ಸೆಳೆಯುತ್ತಿದೆ.

Mohanlal: ವೈರಲ್​ ಆಗಿದೆ ‘ಮಲೈಕೋಟೈ ವಾಲಿಬನ್​’ ಫಸ್ಟ್​ ಲುಕ್​; 62ರ ಪ್ರಾಯದಲ್ಲೂ ಮೋಹನ್​ಲಾಲ್​ ಸಾಹಸ
ಮೋಹನ್​ಲಾಲ್​
ಮದನ್​ ಕುಮಾರ್​
| Edited By: |

Updated on:Apr 20, 2023 | 8:10 AM

Share

ಮಲಯಾಳಂ ಚಿತ್ರರಂಗದಲ್ಲಿ ನಟ ಮೋಹನ್​ಲಾಲ್​ (Mohanlal) ಅವರು ಈಗಲೂ ಸೂಪರ್​ ಸ್ಟಾರ್​ ಆಗಿ ಬೇಡಿಕೆ ಉಳಿಸಿಕೊಂಡಿದ್ದಾರೆ. ಈಗ ಅವರಿಗೆ 62 ವರ್ಷ ವಯಸ್ಸು. ಈ ಪ್ರಾಯದಲ್ಲಿ ಕೂಡ ಅವರು ಸಾಹಸಮಯ ಸಿನಿಮಾಗಳನ್ನು ಮಾಡುತ್ತಿದ್ದಾರೆ. ‘ಲೂಸಿಫರ್​’, ‘ದೃಶ್ಯಂ 2’, ‘ಮರಕ್ಕರ್​’ ಮುಂತಾದ ಚಿತ್ರಗಳ ಮೂಲಕ ಗಮನ ಸೆಳೆದ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಪ್ರಸ್ತುತ ಅವರು ‘ಮಲೈಕೋಟೈ ವಾಲಿಬನ್​​’ (Malaikottai Vaaliban) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಫಸ್ಟ್​ಲುಕ್​ ಪೋಸ್ಟರ್​ (Malaikottai Vaaliban First Look) ಬಿಡುಗಡೆ ಮಾಡಲಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ. ಮೋಹನ್​ಲಾಲ್​ ಅವರ ಲುಕ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಟ್ವಿಟರ್​​ನಲ್ಲಿ ಮೋಹನ್​ಲಾಲ್​ ಅವರು ಈ ಪೋಸ್ಟರ್​ ಹಂಚಿಕೊಂಡಿದ್ದಾರೆ. ಎಂಟೂವರೆ ಸಾವಿರಕ್ಕೂ ಅಧಿಕ ಮಂದಿ ಇದನ್ನು ರೀಟ್ವೀಟ್​ ಮಾಡಿದ್ದಾರೆ. 2 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ. ಮರಳುಗಾಡಿನಂತಹ ಪ್ರದೇಶದಲ್ಲಿ ಮೋಹನ್​ಲಾಲ್​ ಅವರು ಹಗ್ಗ ಹಿಡಿದು ಆರ್ಭಟಿಸುತ್ತಿರುವ ರೀತಿಯಲ್ಲಿ ಪೋಸ್​ ನೀಡಿದ್ದಾರೆ. ಈ ಸಿನಿಮಾದಲ್ಲಿ ಭರ್ಜರಿ ಸಾಹಸ ದೃಶ್ಯಗಳು ಇರಲಿವೆ ಎಂಬುದಕ್ಕೆ ಈ ಪೋಸ್ಟರ್​ನಲ್ಲಿ ಸುಳಿವು ಸಿಕ್ಕಿದೆ.

ಮಲಯಾಳಂನ ‘ಮಲೈಕೋಟೈ ವಾಲಿಬನ್​​’ ಸಿನಿಮಾ ಕನ್ನಡ, ತಮಿಳು, ತೆಲುಗು, ಹಿಂದಿಗೂ ಡಬ್​ ಆಗಿ ಬಿಡುಗಡೆ ಆಗಲಿದೆ. ಲಿಜೋ ಜೋಸ್​ ಪೆಲ್ಲಿಸೆರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ‘ಜಾನ್ ಆ್ಯಂಡ್​ ಮೇರಿ ಕ್ರಿಯೇಟೀವ್’ ಬ್ಯಾನರ್ ಮೂಲಕ ಶಿಬು ಬೇಬಿ ಜಾನ್ ಅವರು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ‘ಸೆಂಚುರಿ ಫಿಲ್ಮ್ಸ್​’ ಸಂಸ್ಥೆಯ ಕೋಚುಮನ್ ಮತ್ತು ‘ಮ್ಯಾಕ್ಸ್ ಲ್ಯಾಬ್‌’ ಬ್ಯಾನರ್​ನ ಅನೂಪ್ ಕೂಡ ನಿರ್ಮಾಣದಲ್ಲಿ ಪಾಲುದಾರಿಕೆ ಹೊಂದಿದ್ದಾರೆ.

ಇದನ್ನೂ ಓದಿ: Mohanlal Birthday: ಕುಸ್ತಿಯಲ್ಲಿ ಸ್ಟೇಟ್​ ಚಾಂಪಿಯನ್​ ಆಗಿದ್ದ ಮೋಹನ್​ಲಾಲ್​ ನಂತರ ನಟನಾಗಿದ್ದು ಹೇಗೆ?

‘ಮಲೈಕೋಟೈ ವಾಲಿಬನ್​​’ ಸಿನಿಮಾದ ಕಥೆ ಬಗ್ಗೆ ಚಿತ್ರತಂಡ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ. ಇದು ಯಾವ ಪ್ರಕಾರಕ್ಕೆ ಸೇರುವ ಸಿನಿಮಾ ಎಂಬುದು ಕೂಡ ಬಹಿರಂಗ ಆಗಿಲ್ಲ. ಪೋಸ್ಟರ್​ ನೋಡಿದರೆ ಇದು ಐತಿಹಾಸಿಕ ಅಥವಾ ಫ್ಯಾಂಟಸಿ ಸಿನಿಮಾ ಆಗಿರಬಹುದು ಎಂದು ಪ್ರೇಕ್ಷಕರು ಊಹಿಸುತ್ತಿದ್ದಾರೆ.

ಇದನ್ನೂ ಓದಿ: Mohanlal: ಡೈರೆಕ್ಷನ್‌ ಕ್ಯಾಪ್ ತೊಟ್ಟ ಮೊದಲ ಸಿನಿಮಾದಲ್ಲೇ‌ ಗುರುತು ಸಿಗದಷ್ಟು ಬದಲಾದ ಮೋಹನ್‌ಲಾಲ್; ಏನಿದರ ವಿಶೇಷ?

ಜನವರಿ 18ರಿಂದ ‘ಮಲೈಕೋಟೈ ವಾಲಿಬನ್​​’ ಚಿತ್ರಕ್ಕೆ ಜೈಸಲ್ಮರ್, ರಾಜಸ್ತಾನ್ ಮುಂತಾದ ಲೊಕೇಷನ್​ಗಳಲ್ಲಿ  ಚಿತ್ರೀಕರಣ ನಡೆಯುತ್ತಿದೆ. ಪಿ.ಎಸ್​. ರಫೀಕ್​ ಅವರು ಚಿತ್ರಕಥೆ ಬರೆದಿದ್ದಾರೆ. ಮಧು ನೀಲಕಂದನ್​ ಛಾಯಾಗ್ರಹಣ, ಪ್ರಶಾಂತ್​ ಪಿಳ್ಳೈ ಸಂಗೀತ ನಿರ್ದೇಶನ, ದೀಪು ಜೋಸೆಫ್​ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:15 am, Thu, 20 April 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ