AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohanlal: ‘ಪೊಗರು’ ಡೈರೆಕ್ಟರ್​ ನಂದಕಿಶೋರ್​ ಜತೆ ಮೋಹನ್​ ಲಾಲ್​ ಸಿನಿಮಾ; ಹೊರಬಿತ್ತು ಬಿಗ್​ ನ್ಯೂಸ್​

Nanda Kishore: ಮೋಹನ್​ ಲಾಲ್​ ಮತ್ತು ನಂದ ಕಿಶೋರ್ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಮೂಡಿಬರಲಿದೆ. ಇದು ಪಕ್ಕಾ ಕಮರ್ಷಿಯಲ್​ ಚಿತ್ರ ಆಗಿರಲಿದ್ದು, ಹೀರೋ ಪಾತ್ರಕ್ಕೆ ಹಲವು ಶೇಡ್​ ಇರಲಿದೆ.

Mohanlal: ‘ಪೊಗರು’ ಡೈರೆಕ್ಟರ್​ ನಂದಕಿಶೋರ್​ ಜತೆ ಮೋಹನ್​ ಲಾಲ್​ ಸಿನಿಮಾ; ಹೊರಬಿತ್ತು ಬಿಗ್​ ನ್ಯೂಸ್​
ಮೋಹನ್ ಲಾಲ್, ನಂದ ಕಿಶೋರ್
TV9 Web
| Edited By: |

Updated on: Sep 01, 2022 | 1:03 PM

Share

ಮಲಯಾಳಂ ಚಿತ್ರರಂಗದ (Mollywood) ಲೆಜೆಂಡರಿ ನಟ ಮೋಹನ್​ ಲಾಲ್​ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಮಾಡುತ್ತಿದ್ದಾರೆ. ‘ದೃಶ್ಯಂ’, ‘ಲೂಸಿಫರ್​’, ‘ದೃಶ್ಯಂ 2’, ‘ಪುಲಿ ಮುರುಗನ್​’ ರೀತಿಯ ಹಲವಾರು ಸೂಪರ್​ ಹಿಟ್​ ಚಿತ್ರಗಳನ್ನು ನೀಡಿದ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಮೋಹನ್​ ಲಾಲ್​ ಜೊತೆ ಸಿನಿಮಾ ಮಾಡಲು ಹಲವಾರು ನಿರ್ದೇಶಕರು ಹಂಬಲಿಸುತ್ತಾರೆ. ಆದರೆ ಅವಕಾಶ ಸಿಗುವುದು ಕೆಲವೇ ಕೆಲವು ಅದೃಷ್ಟವಂತರಿಗೆ ಮಾತ್ರ. ಈಗ ಕನ್ನಡದ ನಿರ್ದೇಶಕ ನಂದ ಕಿಶೋರ್​ (Nanda Kishore) ಅವರು ಬಿಗ್​ ಚಾನ್ಸ್​ ಪಡೆದುಕೊಂಡಿದ್ದಾರೆ. ಕನ್ನಡದಲ್ಲಿ ಹಲವು ಸಿನಿಮಾಗಳನ್ನು ಮಾಡಿ ಅನುಭವ ಹೊಂದಿರುವ ಅವರು ಈಗ ಮಾಲಿವುಡ್​ನತ್ತ ಮುಖ ಮಾಡಿದ್ದಾರೆ. ಮೋಹನ್​ ಲಾಲ್​ (Mohanlal) ಜೊತೆ ಅವರು ಸಿನಿಮಾ ಮಾಡುವುದು ಖಚಿತವಾಗಿದೆ. ಸ್ವತಃ ಮೋಹನ್​ ಲಾಲ್​ ಅವರೇ ಈ ಮಾಹಿತಿಯನ್ನು ಅಧಿಕೃತಗೊಳಿಸಿದ್ದಾರೆ. ಈ ಚಿತ್ರಕ್ಕೆ ‘ವೃಷಭ’ ಎಂದು ಹೆಸರು ಇಡಲಾಗಿದೆ.

ಎಲ್ಲ ಬಗೆಯ ಪಾತ್ರಗಳಿಗೂ ಸೈ ಎಂಬಂತಹ ನಟ ಮೋಹನ್​ ಲಾಲ್​ ಅವರ ಚಿತ್ರಕ್ಕೆ ನಿರ್ದೇಶನ ಮಾಡುವ ಚಾನ್ಸ್​ ಸಿಕ್ಕಿರುವುದು ನಂದ ಕಿಶೋರ್​ಗೆ ಖುಷಿ ನೀಡಿದೆ. ಇದು ಪಕ್ಕಾ ಕಮರ್ಷಿಯಲ್​ ಸಿನಿಮಾ ಆಗಿರಲಿದ್ದು, ಮೋಹನ್​ ಲಾಲ್​ ಅವರಿಗೆ ಹಲವು ಶೇಡ್​ನ ಪಾತ್ರ ಇರಲಿದೆ ಎಂದು ಹೇಳಲಾಗಿದೆ. ವಿಶೇಷ ಏನೆಂದರೆ, ‘ವೃಷಭ’ ಸಿನಿಮಾದಲ್ಲಿ ತೆಲುಗು ಚಿತ್ರರಂಗದ ಕೆಲವು ಸ್ಟಾರ್​ ಕಲಾವಿದರು ಕೂಡ ಬಣ್ಣ ಹಚ್ಚುವ ಸಾಧ್ಯತೆ ಇದೆ. ಆ ಬಗ್ಗೆ ಮಾತುಕಥೆ ನಡೆಯುತ್ತಿದೆ.

ಇದನ್ನೂ ಓದಿ
Image
Mohanlal: ‘ದೃಶ್ಯಂ 3’ ಬರೋದು ಖಚಿತ; ನಿರ್ಮಾಪಕರಿಂದಲೇ ಹೊರಬಿತ್ತು ಅಧಿಕೃತ ಮಾಹಿತಿ
Image
Mohanlal Birthday: ಕುಸ್ತಿಯಲ್ಲಿ ಸ್ಟೇಟ್​ ಚಾಂಪಿಯನ್​ ಆಗಿದ್ದ ಮೋಹನ್​ಲಾಲ್​ ನಂತರ ನಟನಾಗಿದ್ದು ಹೇಗೆ?
Image
Mohanlal: ಡೈರೆಕ್ಷನ್‌ ಕ್ಯಾಪ್ ತೊಟ್ಟ ಮೊದಲ ಸಿನಿಮಾದಲ್ಲೇ‌ ಗುರುತು ಸಿಗದಷ್ಟು ಬದಲಾದ ಮೋಹನ್‌ಲಾಲ್; ಏನಿದರ ವಿಶೇಷ?
Image
ಹೊರ ಜಗತ್ತಿಗೆ ತಿಳಿಯಲೇ ಇಲ್ಲ ಮೋಹನ್​ಲಾಲ್​-ಪವನ್​ ಕಲ್ಯಾಣ್​ ಭೇಟಿ; ಏನಿದರ ಉದ್ದೇಶ?

ನಂದ ಕಿಶೋರ್ ಮತ್ತು ಮೋಹನ್​ ಲಾಲ್​ ಕಾಂಬಿನೇಷನ್​ನ ಸಿನಿಮಾ ಸೆಟ್ಟೇರಲು ಒಂದಷ್ಟು ಸಮಯ ಹಿಡಿಯಲಿದೆ. 2023ರ ಜುಲೈ ತಿಂಗಳಲ್ಲಿ ಈ ಸಿನಿಮಾದ ಶೂಟಿಂಗ್ ಆರಂಭ ಆಗುವ ನಿರೀಕ್ಷೆ ಇದೆ. ಚಿತ್ರದ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಅಭಿಮಾನಿಗಳು ಕಾಯುತ್ತಿದ್ದಾರೆ. ಕನ್ನಡದ ನಿರ್ದೇಶಕ ಮತ್ತು ಮಲಯಾಳಂ ಸ್ಟಾರ್​ ನಟ ಕೈ ಜೋಡಿಸುತ್ತಿರುವುದರಿಂದ ಸಿನಿಪ್ರಿಯರ ವಲಯದಲ್ಲಿ ಕೌತುಕ ಮೂಡುವಂತಾಗಿದೆ.

‘ಎವಿಸ್​ ಸ್ಟುಡಿಯೋಸ್​ ನಿರ್ಮಾಣದ ‘ವೃಷಭ’ ಚಿತ್ರಕ್ಕೆ ಸಹಿ ಮಾಡಿದ್ದೇನೆ. ನಂದಕಿಶೋರ್​ ನಿರ್ದೇಶಿಸಲಿರುವ ಈ ಸಿನಿಮಾವನ್ನು ಅಭಿಷೇಕ್​ ವ್ಯಾಸ್​, ಪ್ರವೀರ್​​ ಸಿಂಗ್​ ಮತ್ತು ಶ್ಯಾಮ್​ ಸುಂದರ್​ ನಿರ್ಮಾಣ ಮಾಡಲಿದ್ದಾರೆ. ಈ ಬಹುಭಾಷಾ ಸಿನಿಮಾದಲ್ಲಿ ಎಮೋಷನ್​ ಮತ್ತು ಆ್ಯಕ್ಷನ್​ ತುಂಬಿರಲಿದೆ. ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದ ಬಯಸುತ್ತೇನೆ’ ಎಂದು ಮೋಹನ್​ ಲಾಲ್​ ಟ್ವೀಟ್​ ಮಾಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ನಂದ ಕಿಶೋರ್​ ಅವರು ಸಕ್ರಿಯರಾಗಿದ್ದಾರೆ. ‘ವಿಕ್ಟರಿ’, ‘ಅಧ್ಯಕ್ಷ’, ‘ರನ್ನ’, ‘ಮುಕುಂದ ಮುರಾರಿ’, ‘ಪೊಗರು’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸುವ ಮೂಲಕ ಅವರು ಗುರುತಿಸಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ