AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದಲ್ಲಿ ಅಪರೂಪದ ದಾಖಲೆ ಬರೆದ ಮೋಹನ್​ಲಾಲ್

Happy Birthday Mohanlal: ಮೋಹನ್​​ಲಾಲ್ ಅವರು ಈ ವರ್ಷ 65ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ 'ಎಲ್2: ಎಂಪುರಾನ್', 'ಥುಡರುಂ' ಚಿತ್ರಗಳು ಈಗಾಗಲೇ ಬಿಡುಗಡೆಯಾಗಿ ಯಶಸ್ಸು ಕಂಡಿದ್ದು, 'ಹೃದಯಪೂರ್ವಮ್' ಶೀಘ್ರದಲ್ಲೇ ತೆರೆಗೆ ಬರಲಿದೆ.'ಕಣ್ಣಪ್ಪ' ಸಿನಿಮಾದಲ್ಲೂ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರಿಂದ ಅಪರೂಪದ ಸಾಧನೆ ಮಾಡುತ್ತಿದ್ದಾರೆ.

ಚಿತ್ರರಂಗದಲ್ಲಿ ಅಪರೂಪದ ದಾಖಲೆ ಬರೆದ ಮೋಹನ್​ಲಾಲ್
ಮೋಹನ್​ಲಾಲ್
 ಶ್ರೀಲಕ್ಷ್ಮೀ ಎಚ್
| Edited By: |

Updated on:May 21, 2025 | 7:47 AM

Share

ನಟ ಮೋಹನ್​ಲಾಲ್ (Mohanlal) ಅವರಿಗೆ ಇಂದು (ಮೇ 21) ಜನ್ಮದಿನ. ಅವರಿಗೆ ಈಗ 65 ವರ್ಷ ವಯಸ್ಸು. ಈ ವಯಸ್ಸಿನಲ್ಲೂ ಅವರು ಸಾಕಷ್ಟು ಸಿನಿಮಾಗಳನ್ನು ಮಾಡುತ್ತಿದ್ದಾರೆ. ಈಗ ಅವರು ಒಂದು ಹೊಸ ದಾಖಲೆ ಬರೆಯಲು ರೆಡಿ ಆಗಿದ್ದಾರೆ. ಆ ದಾಖಲೆ ಈ ವರ್ಷವೇ ನಿರ್ಮಾಣ ಆಗಲಿದೆ ಅನ್ನೋದು ವಿಶೇಷ. ಹಾಗಂತ ಮೋಹನ್​ಲಾಲ್ ಅವರು ವೈಯಕ್ತಿಕ ವಿಚಾರದಲ್ಲಿ ಯಾವುದೋ ದಾಖಲೆ ಮಾಡುತ್ತಿದ್ದಾರೆ ಎಂದುಕೊಳ್ಳಬೇಡಿ. ಅವರು ದಾಖಲೆ ಮಾಡುತ್ತಿರುವುದು ಸಿನಿಮಾಗಳ ವಿಚಾರದಲ್ಲಿಯೇ ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರ. ಅವರ ಬರ್ತ್​ಡೇ ಪ್ರಯುಕ್ತ ಆ ಬಗ್ಗೆ ಚರ್ಚಿಸೋಣ.

ಮೋಹನ್​ಲಾಲ್ ನಟನೆಯ ‘ಎಲ್​2: ಎಂಪುರಾನ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾ ಗೆಲುವು ಕಂಡಿತು. ಪೃಥ್ವಿರಾಜ್ ಸುಕುಮಾರನ್ ಈ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರ ‘ಲುಸಿಫರ್’ ಚಿತ್ರದ ಮುಂದುವರಿದ ಭಾಗವೇ ಆಗಿದೆ. ಈ ಸಿನಿಮಾ ಕೇರಳದ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡಿದೆ.  ಇದಾದ ಬಳಿಕ ‘ಥುಡರುಂ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಕೂಡ ಯಶಸ್ಸು ಕಂಡಿತು. ಇದನ್ನು ಅನೇಕರು ‘ದೃಶ್ಯಂ’ ಚಿತ್ರಕ್ಕೆ ಹೋಲಿಕೆ ಮಾಡಿದ್ದಾರೆ. ಈ ಸಿನಿಮಾ ಕೇರಳ ಒಂದರಲ್ಲೇ 100 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಈಗ ಕೇಳಿ ಬರುತ್ತಿರುವ ಹೊಸ ಮಾಹಿತಿ ಎಂದರೆ ಮೋಹನ್​ಲಾಲ್ ನಟನೆಯ ‘ಹೃದಯಪೂರ್ವಮ್’ ಚಿತ್ರದ ಶೂಟ್ ಪೂರ್ಣಗೊಳ್ಳಲಿದೆಯಂತೆ. ಈ ಸಿನಿಮಾ ಕೂಡ ಶೀಘ್ರವೇ ರಿಲೀಸ್ ಆಗಲಿದೆ. ಈ ಮೂಲಕ ಒಂದೇ ವರ್ಷ ಅವರ ನಟನೆಯ ಮೂರು ಚಿತ್ರಗಳು ರಿಲೀಸ್ ಆದಂತೆ ಆಗಲಿದೆ. ಮಮ್ಮೂಟ್ಟಿ ಅವರು ಮಲಯಾಳಂ ರಂಗದಲ್ಲಿ ಈ ಸಾಧನೆ ಮಾಡಿದ್ದರು.

ಇದನ್ನೂ ಓದಿ
Image
‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ರಾವಲ್ ಹೊರ ನಡೆಯಲು ಅಕ್ಷಯ್ ಕುಮಾರ್ ಕಾರಣ
Image
3.5 ಲಕ್ಷ ಬೆಲೆಯ ಗೌನ್ ಧರಿಸಿ ಕಾನ್ ಸಿನಿಮೋತ್ಸವದಲ್ಲಿ ಮಿಂಚಿದ ಜಾನ್ವಿ
Image
ಹಿರಿಯ ನಟ ಪರೇಶ್ ರಾವಲ್ ವಿರುದ್ಧ ದೂರು, 25 ಕೋಟಿ ರೂ ಪರಿಹಾರಕ್ಕೆ ಒತ್ತಾಯ
Image
ಶಿವಣ್ಣ-ಗೀತಾ ದಂಪತಿಗೆ ವಿವಾಹ ವಾರ್ಷಿಕೋತ್ಸವ; ಇಲ್ಲಿದೆ ಅಪರೂಪದ ಚಿತ್ರಗಳು

ಇದನ್ನೂ ಓದಿ: ಮೋಹನ್​ಲಾಲ್ ತಂತ್ರದಿಂದಾಗಿ ಇಕ್ಕಟ್ಟಿಗೆ ಸಿಲುಕಿದ ಅಜಯ್ ದೇವಗನ್

‘ಹೃದಯಪೂರ್ವಂ’ ಎಂಬುದು ಫ್ಯಾಮಿಲಿ ಡ್ರಾಮಾ ಆಗಿದೆ. ಸತ್ಯನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ಆಗಸ್ಟ್ 28ರಂದು ಸಿನಿಮಾ ತೆರೆಗೆ ಬರೋ ಸಾಧ್ಯತೆ ಇದೆ. ಇದಾದ ಬಳಿಕ ‘ಕಣ್ಣಪ್ಪ’ದಲ್ಲಿ ಅವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅವರದ್ದು ಅತಿಥಿ ಪಾತ್ರ. ಆದಾಗ್ಯೂ ಈ ಚಿತ್ರವನ್ನು ನಾವು ಪರಿಗಣಿಸಬಹುದಾಗಿದೆ.  ಈ ಮೂಲಕ ಮೋಹನ್​ಲಾಲ್ ಅವರು ಒಂದೇ ವರ್ಷ 4 ಚಿತ್ರಗಳ ಬಿಡುಗಡೆಯನ್ನು ಕಾಣುತ್ತಿದೆ. ಅವರ ನಟನೆಯ ‘ವೃಷಭ’ ಚಿತ್ರದ ಶೂಟ್​ನಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:46 am, Wed, 21 May 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ