AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ 70 ಕೋಟಿ, ಒಟ್ಟಾರೆ ಕಲೆಕ್ಷನ್ 1.5 ಕೋಟಿ; ದೊಡ್ಡ ದುರಂತ ಕಂಡ ಮೋಹನ್​ಲಾಲ್ ಸಿನಿಮಾ

ಮೋಹನ್​ಲಾಲ್ ಅಭಿನಯದ 'ವೃಷಭ' ಸಿನಿಮಾ 70 ಕೋಟಿ ಬಜೆಟ್ ಹೊಂದಿದ್ದು, ಕೇವಲ 1.5 ಕೋಟಿ ರೂಪಾಯಿ ಗಳಿಸಿ ದೊಡ್ಡ ದುರಂತ ಕಂಡಿದೆ. ಸ್ಟಾರ್ ಹೀರೋ ಇದ್ದರೂ ಸಿನಿಮಾ ಹೀನಾಯವಾಗಿ ಸೋತಿದೆ. ಹಳೆಯ ಕಥೆ ಮತ್ತು ನಿರೂಪಣಾ ಶೈಲಿ ಜನರನ್ನು ಸೆಳೆಯುವಲ್ಲಿ ವಿಫಲವಾಗಿರುವುದು ಇದಕ್ಕೆ ಮುಖ್ಯ ಕಾರಣ. ನಿರ್ಮಾಪಕರಿಗೆ ಅಪಾರ ನಷ್ಟ ಉಂಟಾಗಿದೆ.

ಬಜೆಟ್ 70 ಕೋಟಿ, ಒಟ್ಟಾರೆ ಕಲೆಕ್ಷನ್ 1.5 ಕೋಟಿ; ದೊಡ್ಡ ದುರಂತ ಕಂಡ ಮೋಹನ್​ಲಾಲ್ ಸಿನಿಮಾ
ಮೋಹನ್​ಲಾಲ್
ರಾಜೇಶ್ ದುಗ್ಗುಮನೆ
|

Updated on: Jan 03, 2026 | 7:01 AM

Share

ಸ್ಟಾರ್ ಹೀರೋಗಳು ಸಿನಿಮಾದಲ್ಲಿ ನಟಿಸಿದ್ದಾರೆ ಎಂದರೆ ಬಹುತೇಕ ಸಂದರ್ಭಗಳಲ್ಲಿ ಹಾಕಿದ ಬಂಡವಾಳ ಮರಳಿ ಬರುತ್ತದೆ ಎಂಬ ನಂಬಿಕೆ ನಿರ್ಮಾಪಕರಿಗೆ ಇರುತ್ತದೆ. ನಿರ್ಮಾಪಕರು ಸೇಫ್ ಆಗುತ್ತಾರೆ. ಸಲ್ಮಾನ್ ಖಾನ್, ದಳಪತಿ ವಿಜಯ್, ರಜನಿಕಾಂತ್ ಸೇರಿದಂತೆ ಅನೇಕರ ಸಿನಿಮಾ ವಿಮರ್ಶೆಯಲ್ಲಿ ಸೋತರೂ ಒಳ್ಳೆಯ ಗಳಿಕೆ ಮಾಡಿದ ಉದಾಹರಣೆ ಇದೆ. ಈಗ ‘ವೃಷಭ’ ಸಿನಿಮಾದಲ್ಲಿ ಅದು ಸುಳ್ಳಾಗಿದೆ. ಡಿಸೆಂಬರ್ 25ರಂದು ರಿಲೀಸ್​ ಆದ  ಮೋಹನ್​ಲಾಲ್ (Mohanlal) ಅಭಿನಯದ ಈ ಚಿತ್ರದ ಬಜೆಟ್ 70 ಕೋಟಿ ರೂಪಾಯಿ. ಭಾರತದ ಒಟ್ಟಾರೆ ಗಳಿಕೆ ಒಂದೂವರೆ ಕೋಟಿ ರೂಪಾಯಿ.

ಕನ್ನಡದ ನಂದ ಕಿಶೋರ್ ಅವರು ‘ವೃಷಭ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಮೊದಲು ಅವರು ಕನ್ನಡದಲ್ಲಿ ‘ಪೊಗರು’ ರೀತಿಯ ಸಿನಿಮಾಗಳನ್ನು ನೀಡಿದ್ದಾರೆ. ಈಗ ಅವರು ಮಲಯಾಳಂಗೆ ತೆರಳಿದ್ದು ಅಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಸಿಕ್ಕಿಲ್ಲ. ಸಿನಿಮಾದಲ್ಲಿ ಮೋಹನ್​ಲಾಲ್ ಜೊತೆ ಕನ್ನಡದವರಾದ ಸಮರ್ಜಿತ್ ಲಂಕೇಶ್, ರಾಗಿಣಿ ದ್ವಿವೇದಿ, ಗರುಡ ರಾಮ್ ಮೊದಲಾದವರು ನಟಿಸಿದ್ದಾರೆ.

‘ವೃಷಭ’ ಸಿನಿಮಾ ಪುನರ್ಜನ್ಮದ ಕಥೆಯನ್ನು ಹೊಂದಿದೆ. ಈ ಸಿನಿಮಾದಲ್ಲಿ ರಾಜರ ಕಥೆ ಕೂಡ ಬರುತ್ತದೆ. ಹೀಗಾಗಿ, ಅದ್ದೂರಿ ಸೆಟ್​​ಗಳ ನಿರ್ಮಾಣ ಮಾಡಲಾಗಿತ್ತು. ಇದಕ್ಕೆ ಸಾಕಷ್ಟು ಹಣ ವ್ಯಯಿಸಲಾಗಿದೆ. ಒಂದು ಅಂದಾಜಿನ ಪ್ರಕಾರ ಸಿನಿಮಾದ ಬಜೆಟ್ 70 ಕೋಟಿ ರೂಪಾಯಿ. ಈ ಸಿನಿಮಾ ಭಾರತದ ಒಟ್ಟೂ ಕಲೆಕ್ಷನ್ 1.60 ಕೋಟಿ ರೂಪಾಯಿ ಆಸುಪಾಸಿನಲ್ಲಿದೆ. ವಿಶ್ವ ಮಟ್ಟದಲ್ಲಿ ಚಿತ್ರದ ಗಳಿಕೆ 2 ಕೋಟಿ ರೂಪಾಯಿ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಮೋಹನ್​ಲಾಲ್ ತಾಯಿ ಶಾಂತಕುಮಾರಿ ನಿಧನ; ಅಂತಿಮ ನಮನ ಸಲ್ಲಿಸಿದ ಮಮ್ಮುಟಿ

ಅಂದಹಾಗೆ ಈ ಸಿನಿಮಾಗೆ ಒಬ್ಬರಲ್ಲ, ಇಬ್ಬರಲ್ಲ ಬರೋಬ್ಬರಿ 9 ನಿರ್ಮಾಪಕರಿದ್ದಾರೆ. ಬಾಲಿವುಡ್​​ನ ಏಕ್ತಾ ಕಪೂರ್, ಶೋಭಾ ಕಪೂರ್ ಸೇರಿದಂತೆ ಅನೇಕರು ಹಣ ಹೂಡಿದ್ದಾರೆ. ಹಾಕಿದ ಹಣಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ. ಸಿನಿಮಾದ ಕಥೆ ಹಾಗೂ ಮೇಕಿಂಗ್ ವಿಷಯದಲ್ಲಿ ಹಳೆಯ ಟೆಕ್ನಿಕ್ ಬಳಸಲಾಗಿದೆ. ಈ ಕಾರಣಕ್ಕೆ ಜನರಿಗೆ ಸಿನಿಮಾ ಇಷ್ಟ ಆಗಿಲ್ಲ. ಸಿನಿಮಾದ ಕಥೆಯಲ್ಲಿ ಗಟ್ಟಿತನ ಇಲ್ಲ. ನಿರೂಪಣೆ ಕೂಡ ಅಷ್ಟು ಉತ್ತಮವಾಗಿಲ್ಲ. ಈ ಎಲ್ಲಾ ಕಾರಣದಿಂದ ಸಿನಿಮಾ ಇಷ್ಟು ಹೀನಾಯ ಕಲೆಕ್ಷನ್ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್