AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ಚಿತ್ರದ ಪ್ರಚಾರಕ್ಕೆ ಹಾಕಿದ ಹಣ ನಿಜಕ್ಕೂ ದೊಡ್ಡ ವ್ಯರ್ಥ ಎಂದ ಖ್ಯಾತ ನಿರ್ದೇಶಕ

‘ಆರ್​ಆರ್​ಆರ್​’ ತಂಡ ನಾನಾ ನಗರಗಳಿಗೆ ತೆರಳಿ ಸುದ್ದಿಗೋಷ್ಠಿ ನಡೆಸಿತ್ತು. ಮುಂಬೈ ಹಾಗೂ ಚೆನ್ನೈನಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ-ರಿಲೀಸ್​ ಇವೆಂಟ್​ ನಡೆಸಲಾಗಿತ್ತು. ಆನ್​ಲೈನ್​ನಲ್ಲೂ ಚಿತ್ರಕ್ಕೆ ಪ್ರಚಾರ ನೀಡುವ ಕೆಲಸ ನಡೆದಿತ್ತು.

‘ಆರ್​ಆರ್​ಆರ್​’ ಚಿತ್ರದ ಪ್ರಚಾರಕ್ಕೆ ಹಾಕಿದ ಹಣ ನಿಜಕ್ಕೂ ದೊಡ್ಡ ವ್ಯರ್ಥ ಎಂದ ಖ್ಯಾತ ನಿರ್ದೇಶಕ
ರಾಜಮೌಳಿ, ಜ್ಯೂ. ಎನ್​ಟಿಆರ್​, ರಾಮ್​ ಚರಣ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 08, 2022 | 5:01 PM

Share

ಸ್ಟಾರ್​ ನಟರ ಚಿತ್ರಗಳಲ್ಲಿ ಪ್ರಚಾರಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಸಿನಿಮಾ ದೊಡ್ಡ ಮೊತ್ತದಲ್ಲಿ ಹಣ ಗಳಿಕೆ ಮಾಡಬೇಕು ಎಂದರೆ ಪ್ರಚಾರ ಅತಿ ಮುಖ್ಯ. ಈ ಕಾರಣಕ್ಕೆ ನಿರ್ಮಾಪಕರು ಪ್ರಮೋಷನ್​ಗೂ ಸಾಕಷ್ಟು ಹಣ ಖರ್ಚು ಮಾಡುತ್ತಾರೆ. ಟಾಲಿವುಡ್​ನಲ್ಲಿ ಸಿದ್ಧವಾಗಿರುವ ‘ಆರ್​ಆರ್​ಆರ್​’ ಚಿತ್ರದ ಪ್ರಚಾರಕ್ಕೂ ನಿರ್ಮಾಪಕರು ದೊಡ್ಡ ಮೊತ್ತದ ಹಣವನ್ನು ಖಾಲಿ ಮಾಡಿದ್ದಾರೆ. ಆದರೆ, ಸಿನಿಮಾ ರಿಲೀಸ್​​ ದಿನಾಂಕ ಮುಂದೆ ಹೋಗಿರುವುದರಿಂದ ಎಲ್ಲವೂ ವ್ಯರ್ಥವಾಗಿದೆ.

‘ಆರ್​ಆರ್​ಆರ್​’ ತಂಡ ನಾನಾ ನಗರಗಳಿಗೆ ತೆರಳಿ ಸುದ್ದಿಗೋಷ್ಠಿ ನಡೆಸಿತ್ತು. ಮುಂಬೈ ಹಾಗೂ ಚೆನ್ನೈನಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ-ರಿಲೀಸ್​ ಇವೆಂಟ್​ ನಡೆಸಲಾಗಿತ್ತು. ಆನ್​ಲೈನ್​ನಲ್ಲೂ ಚಿತ್ರಕ್ಕೆ ಪ್ರಚಾರ ನೀಡುವ ಕೆಲಸ ನಡೆದಿತ್ತು. ಹೀಗಾಗಿ, ಈ ಸಿನಿಮಾ ಪ್ರಮೋಷನ್​ಗೆ ನಿರ್ಮಾಪಕರು 20 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಖರ್ಚು ಮಾಡಿದ್ದಾರೆ ಎನ್ನಲಾಗಿದೆ. ಈ ಹಣವೆಲ್ಲವೂ ಈಗ ನೀರಿನಲ್ಲಿ ಹೋಮ ಮಾಡಿದಂತೆ ಆಗಿದೆ.

ಬಾಲಿವುಡ್​ನ ಖ್ಯಾತ ನಿರ್ದೇಶಕ ಅನೀಸ್ ಬಾಜ್ಮೀ ಈ ಬಗ್ಗೆ ಮಾತನಾಡಿದ್ದಾರೆ. ‘ಆರ್‌ಆರ್‌ಆರ್, ‘ಜೆರ್ಸಿ’ಯಂತಹ ಚಿತ್ರಗಳ ಉದಾಹರಣೆ ತೆಗೆದುಕೊಳ್ಳಿ. ಅವರು ತಮ್ಮ ಚಿತ್ರಗಳಿಗೆ ಸಾಕಷ್ಟು ಪ್ರಚಾರಗಳನ್ನು ಮಾಡಿದ್ದಾರೆ. ಈ ಹಣ ವ್ಯರ್ಥವಾಗಿದೆ​. ಅವರು ಚಿತ್ರವನ್ನು ಬಿಡುಗಡೆ ಮಾಡಲು ಮತ್ತೆ ದಿನಾಂಕ ಘೋಷಣೆ ಮಾಡಿದಾಗ ಪ್ರಚಾರ ಮಾಡಲೇಬೇಕು. ಒಟ್ಟಾರೆ ಇದೊಂದು ದೊಡ್ಡ ನಷ್ಟ’ ಎಂದಿದ್ದಾರೆ ಅವರು.

‘ಆರ್​ಆರ್​ಆರ್​’ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ. ಈ ಸಿನಿಮಾ ಬರೋಬ್ಬರಿ 400 ಕೋಟಿ ರೂಪಾಯಿ ವೆಚ್ಛದಲ್ಲಿ ಸಿದ್ಧವಾಗಿದೆ. ಈ ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್ ಹಾಗೂ ಟೀಸರ್​ ಸಾಕ್ಷ್ಯ ನೀಡಿದೆ. ಪ್ರತಿ ದೃಶ್ಯಕ್ಕೂ ಹೆಚ್ಚು ಹಣ ಸುರಿಯಲಾಗಿದೆ. ಕೇವಲ ಭಾರತದ ಸೆಟ್​ಗಳಲ್ಲಿ ಮಾತ್ರವಲ್ಲದೆ, ವಿದೇಶದಲ್ಲೂ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಇನ್ನು, ಸ್ಟಾರ್​ ನಟರ ದಂಡೇ ಚಿತ್ರದಲ್ಲಿದೆ. ಜ್ಯೂ.ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​, ಅಜಯ್​ ದೇವಗನ್​ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇವರು ಕೂಡ ದೊಡ್ಡ ಮೊತ್ತದ ಸಂಭಾವನೆಯನ್ನು ಪಡೆದುಕೊಂಡಿದ್ದಾರೆ. ಈ ಎಲ್ಲಾ ಕಾರಣದಿಂದ ಸಿನಿಮಾದ ಬಜೆಟ್​ 400 ಕೋಟಿ ರೂಪಾಯಿ ಮೀರಿದೆ.

ಇದನ್ನೂ ಓದಿ: ಮತ್ತೆ ಸದ್ದು ಮಾಡಿದ ಸಮಂತಾ; ಒಂದು ಗಂಟೆಯಲ್ಲಿ 20 ಲಕ್ಷ ವೀಕ್ಷಣೆ ಕಂಡ ವಿಡಿಯೋ ಸಾಂಗ್​

ಸಿನಿಪ್ರಿಯರಿಗೆ ನಿರಾಸೆ ಮೂಡಿಸಿದ ‘ಆರ್​ಆರ್​ಆರ್​’; ಅಧಿಕೃತವಾಗಿ ಚಿತ್ರದ ರಿಲೀಸ್​ ಡೇಟ್​ ಮುಂದೂಡಿಕೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ