‘ಆರ್​ಆರ್​ಆರ್​’ ಚಿತ್ರದ ಪ್ರಚಾರಕ್ಕೆ ಹಾಕಿದ ಹಣ ನಿಜಕ್ಕೂ ದೊಡ್ಡ ವ್ಯರ್ಥ ಎಂದ ಖ್ಯಾತ ನಿರ್ದೇಶಕ

‘ಆರ್​ಆರ್​ಆರ್​’ ತಂಡ ನಾನಾ ನಗರಗಳಿಗೆ ತೆರಳಿ ಸುದ್ದಿಗೋಷ್ಠಿ ನಡೆಸಿತ್ತು. ಮುಂಬೈ ಹಾಗೂ ಚೆನ್ನೈನಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ-ರಿಲೀಸ್​ ಇವೆಂಟ್​ ನಡೆಸಲಾಗಿತ್ತು. ಆನ್​ಲೈನ್​ನಲ್ಲೂ ಚಿತ್ರಕ್ಕೆ ಪ್ರಚಾರ ನೀಡುವ ಕೆಲಸ ನಡೆದಿತ್ತು.

‘ಆರ್​ಆರ್​ಆರ್​’ ಚಿತ್ರದ ಪ್ರಚಾರಕ್ಕೆ ಹಾಕಿದ ಹಣ ನಿಜಕ್ಕೂ ದೊಡ್ಡ ವ್ಯರ್ಥ ಎಂದ ಖ್ಯಾತ ನಿರ್ದೇಶಕ
ರಾಜಮೌಳಿ, ಜ್ಯೂ. ಎನ್​ಟಿಆರ್​, ರಾಮ್​ ಚರಣ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 08, 2022 | 5:01 PM

ಸ್ಟಾರ್​ ನಟರ ಚಿತ್ರಗಳಲ್ಲಿ ಪ್ರಚಾರಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಸಿನಿಮಾ ದೊಡ್ಡ ಮೊತ್ತದಲ್ಲಿ ಹಣ ಗಳಿಕೆ ಮಾಡಬೇಕು ಎಂದರೆ ಪ್ರಚಾರ ಅತಿ ಮುಖ್ಯ. ಈ ಕಾರಣಕ್ಕೆ ನಿರ್ಮಾಪಕರು ಪ್ರಮೋಷನ್​ಗೂ ಸಾಕಷ್ಟು ಹಣ ಖರ್ಚು ಮಾಡುತ್ತಾರೆ. ಟಾಲಿವುಡ್​ನಲ್ಲಿ ಸಿದ್ಧವಾಗಿರುವ ‘ಆರ್​ಆರ್​ಆರ್​’ ಚಿತ್ರದ ಪ್ರಚಾರಕ್ಕೂ ನಿರ್ಮಾಪಕರು ದೊಡ್ಡ ಮೊತ್ತದ ಹಣವನ್ನು ಖಾಲಿ ಮಾಡಿದ್ದಾರೆ. ಆದರೆ, ಸಿನಿಮಾ ರಿಲೀಸ್​​ ದಿನಾಂಕ ಮುಂದೆ ಹೋಗಿರುವುದರಿಂದ ಎಲ್ಲವೂ ವ್ಯರ್ಥವಾಗಿದೆ.

‘ಆರ್​ಆರ್​ಆರ್​’ ತಂಡ ನಾನಾ ನಗರಗಳಿಗೆ ತೆರಳಿ ಸುದ್ದಿಗೋಷ್ಠಿ ನಡೆಸಿತ್ತು. ಮುಂಬೈ ಹಾಗೂ ಚೆನ್ನೈನಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ-ರಿಲೀಸ್​ ಇವೆಂಟ್​ ನಡೆಸಲಾಗಿತ್ತು. ಆನ್​ಲೈನ್​ನಲ್ಲೂ ಚಿತ್ರಕ್ಕೆ ಪ್ರಚಾರ ನೀಡುವ ಕೆಲಸ ನಡೆದಿತ್ತು. ಹೀಗಾಗಿ, ಈ ಸಿನಿಮಾ ಪ್ರಮೋಷನ್​ಗೆ ನಿರ್ಮಾಪಕರು 20 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಖರ್ಚು ಮಾಡಿದ್ದಾರೆ ಎನ್ನಲಾಗಿದೆ. ಈ ಹಣವೆಲ್ಲವೂ ಈಗ ನೀರಿನಲ್ಲಿ ಹೋಮ ಮಾಡಿದಂತೆ ಆಗಿದೆ.

ಬಾಲಿವುಡ್​ನ ಖ್ಯಾತ ನಿರ್ದೇಶಕ ಅನೀಸ್ ಬಾಜ್ಮೀ ಈ ಬಗ್ಗೆ ಮಾತನಾಡಿದ್ದಾರೆ. ‘ಆರ್‌ಆರ್‌ಆರ್, ‘ಜೆರ್ಸಿ’ಯಂತಹ ಚಿತ್ರಗಳ ಉದಾಹರಣೆ ತೆಗೆದುಕೊಳ್ಳಿ. ಅವರು ತಮ್ಮ ಚಿತ್ರಗಳಿಗೆ ಸಾಕಷ್ಟು ಪ್ರಚಾರಗಳನ್ನು ಮಾಡಿದ್ದಾರೆ. ಈ ಹಣ ವ್ಯರ್ಥವಾಗಿದೆ​. ಅವರು ಚಿತ್ರವನ್ನು ಬಿಡುಗಡೆ ಮಾಡಲು ಮತ್ತೆ ದಿನಾಂಕ ಘೋಷಣೆ ಮಾಡಿದಾಗ ಪ್ರಚಾರ ಮಾಡಲೇಬೇಕು. ಒಟ್ಟಾರೆ ಇದೊಂದು ದೊಡ್ಡ ನಷ್ಟ’ ಎಂದಿದ್ದಾರೆ ಅವರು.

‘ಆರ್​ಆರ್​ಆರ್​’ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ. ಈ ಸಿನಿಮಾ ಬರೋಬ್ಬರಿ 400 ಕೋಟಿ ರೂಪಾಯಿ ವೆಚ್ಛದಲ್ಲಿ ಸಿದ್ಧವಾಗಿದೆ. ಈ ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್ ಹಾಗೂ ಟೀಸರ್​ ಸಾಕ್ಷ್ಯ ನೀಡಿದೆ. ಪ್ರತಿ ದೃಶ್ಯಕ್ಕೂ ಹೆಚ್ಚು ಹಣ ಸುರಿಯಲಾಗಿದೆ. ಕೇವಲ ಭಾರತದ ಸೆಟ್​ಗಳಲ್ಲಿ ಮಾತ್ರವಲ್ಲದೆ, ವಿದೇಶದಲ್ಲೂ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಇನ್ನು, ಸ್ಟಾರ್​ ನಟರ ದಂಡೇ ಚಿತ್ರದಲ್ಲಿದೆ. ಜ್ಯೂ.ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​, ಅಜಯ್​ ದೇವಗನ್​ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇವರು ಕೂಡ ದೊಡ್ಡ ಮೊತ್ತದ ಸಂಭಾವನೆಯನ್ನು ಪಡೆದುಕೊಂಡಿದ್ದಾರೆ. ಈ ಎಲ್ಲಾ ಕಾರಣದಿಂದ ಸಿನಿಮಾದ ಬಜೆಟ್​ 400 ಕೋಟಿ ರೂಪಾಯಿ ಮೀರಿದೆ.

ಇದನ್ನೂ ಓದಿ: ಮತ್ತೆ ಸದ್ದು ಮಾಡಿದ ಸಮಂತಾ; ಒಂದು ಗಂಟೆಯಲ್ಲಿ 20 ಲಕ್ಷ ವೀಕ್ಷಣೆ ಕಂಡ ವಿಡಿಯೋ ಸಾಂಗ್​

ಸಿನಿಪ್ರಿಯರಿಗೆ ನಿರಾಸೆ ಮೂಡಿಸಿದ ‘ಆರ್​ಆರ್​ಆರ್​’; ಅಧಿಕೃತವಾಗಿ ಚಿತ್ರದ ರಿಲೀಸ್​ ಡೇಟ್​ ಮುಂದೂಡಿಕೆ

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು